Homeಕರ್ನಾಟಕಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ.

ರಾಜ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ದಿನದಂದು ಕೋಲಾರದ ಸಂಸದ ಎಸ್‌.ಮುನಿಸ್ವಾಮಿ ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಮೂಲಕ ತನ್ನ ಅಜ್ಞಾನ ಮತ್ತು ಸ್ತ್ರೀ ದ್ವೇಷದ ನಡೆಯನ್ನು ತೋರಿದ್ದಾರೆ. ಮತ್ತೊಂದೆಡೆ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಲೇಖಕಿಯರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಪ್ರಶ್ನಿಸಿದ್ದಕ್ಕೆ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ವವನ್ನು ಮಹಿಳಾ ದಿನಾಚರಣೆಯಂದು ರದ್ದುಗೊಳಿಸುವ ಮೂಲಕ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಸರ್ವಧಿಕಾರದ ಈ ನಡೆಯನ್ನು ಪ್ರಶ್ನಿಸಿ ಕವಿ, ಹೋರಾಟಗಾರ ಬಸವರಾಜ ಸೂಳಿಬಾವಿ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಸರ್ವಾಧಿಕಾರಿಯೇ ಕಸಾಪಕ್ಕೆ ಅಧ್ಯಕ್ಷ.. ವಿಶ್ವ ಮಹಿಳಾ ದಿನಾಚರಣೆಯ ದಿನವೇ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ನಿರ್ಮಲಾ ಎಲಿಗಾರ ಅವರ ಸದಸ್ಯತ್ವ ರದ್ದುಗೊಳಿಸಿ ಅವರು ಪುರಸ್ಕೃತರಾದ ಪ್ರಶಸ್ತಿಯೊಂದನ್ನು ಹಿಂಪಡೆವ ಆದೇಶ ಹೊರಡಿಸಿ ತಮ್ಮ ಸರ್ವಾಧಿಕಾರವನ್ನು ಡಾಳಾಗಿ ಪ್ರದರ್ಶನ ಮಾಡಿದ್ದಾರೆ. ಪ್ರಾಯಶಃ ಇಷ್ಟು ದಿನದವರೆಗೆ ಎಂಥೆಂಥವರನ್ನೋ ಅಧ್ಯಕ್ಷರಾಗಿ ಕಂಡ ಕಸಾಪ ಇಂಥ ಪ್ರಜಾಪ್ರಭುತ್ವ ವಿರೋಧಿಯಾದ ಸರ್ವಾಧಿಕಾರಿಯನ್ನು ಕಂಡಿರಲಿಲ್ಲ. ಇದರಿಂದ ಸಮಸ್ತ ಸಾಹಿತ್ಯ ವಲಯವನ್ನು ಅವಮಾನಿಸುವ ಕೆಲಸ ನಡೆಯುತ್ತಿವೆ. ನಾವಿದನ್ನು ತೀವ್ರವಾಗಿ ವಿರೋಧಿಸದಿದ್ದರೆ ಕಸಾಪ ಶಾಶ್ವತವಾಗಿ ಮುಳುಗಿಯೇ ಹೋಗುತ್ತದೆ.”

”ದೂರದರ್ಶನದ ನಿರ್ದೇಶಕರಾದ ಒಂದಷ್ಟು ಬರವಣಿಗೆ ಮಾಡಿರುವ ನಿರ್ಮಲಾ ಎಲಿಗಾರ ಅವರು ಹಾವೇರಿ ಸಮ್ಮೇಳನದಲ್ಲಿ ಆಹ್ವಾನಿತರಾಗಿದ್ದರು. ಉತ್ತರ ಕರ್ನಾಟಕದ ಈ ಜವಾರಿ ಹೆಣ್ಣುಮಗಳು ತಮಗೆ ಸರಿಯಾದ ವಸತಿ ವ್ಯವಸ್ಥೆ ಮಾಡದಿರುವುದು ಮಹಿಳೆಯೊಬ್ಬಳಿಗಾದ ಅವಮಾನ ಎಂದೇ ಪ್ರತಿಭಟಿಸಿದ್ದರು. ತಮಗಾದ ಈ ಅನ್ಯಾಯವನ್ನು ಮುಕ್ತವಾಗಿಯೇ ಸಮ್ಮೇಳನದ ಸಂದರ್ಭದಲ್ಲಿ ಹೊರಹಾಕಿದ್ದರು. ಅವರ ಈ ಪ್ರತಿಭಟನೆ ಪ್ರಜಾಸತ್ತಾತ್ಮಕವಾಗಿಯೇ ಇತ್ತು. ಅದನ್ನೇ ನೆಪ ಮಾಡಿಕೊಂಡು, ಅವರ ಆಜೀವ ಸದಸ್ಯತ್ವವನ್ನು ಅಧ್ಯಕ್ಷ ಮಹೇಶ ಜೋಶಿ ರದ್ದು ಮಾಡಿದ್ದಾರಲ್ಲದೆ ಅವರಿಗೆ ದೊರತ ಪ್ರಶಸ್ತಿಯೊಂದನ್ನು ಹಿಂಪಡೆದಿದ್ದಾರೆ. ಆ ಮೂಲಕ ಕಸಾಪದ ಸಂವಿಧಾನವನ್ನೇ ಅವಮಾನಿಸಿ ಪ್ರಜಾಪ್ರಭುತ್ವದ ವಿರೋಧಿತನ ತೋರಿಸಿದ್ದಾರೆ. ಇದು ಖಂಡನೀಯ. ಅಮಾನತ್ತು ಆದೇಶವನ್ನು ಹಿಂಪಡೆದು ಕ್ಷಮೆ ಯಾಚಿಸುವಂಥ ವಾತಾವರಣವನ್ನು ನಾಡಿನ ಸಾಹಿತಿಗಳು ವಿಚಾರವಂತರು ಮಾಡಬೇಕಿದೆ” ಎಂದು ಹೇಳಿದ್ದಾರೆ.

”ಇದೇ ರವಿವಾರ 12 ರಂದು ಬೆಂಗಳೂರಿನಲ್ಲಿ ಕಸಾಪದ ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಇದೆ. ಅನೇಕ ಜನ ವಿವೇಕವುಳ್ಳ ಮಹಿಳಾ ಸಾಹಿತಿಗಳು ಪುರುಷರು ಪ್ರಶಸ್ತಿ ಸ್ವೀಕರಿಸಲು ಹೋಗಲಿದ್ದಾರೆ. ಅವರಲ್ಲಿ ಜಾಗೃತ ಮನಸಿನ ಕೆಲವರಾದರೂ ಈ ಸರ್ವಾಧಿಕಾರವನ್ನು ಪ್ರತಿಭಟಿಸಬಹುದೆ?” ಎಂದು ಕೇಳಿದ್ದಾರೆ.

”ಎಲ್ಲಕ್ಕಿಂತ ಮುಖ್ಯವಾಗಿ ಈ ಸಮಾರಂಭದಲ್ಲಿ ನಾವು ಇಷ್ಟು ವರ್ಷ ಬಂಡಾಯದ ಸಾಕ್ಷಿ ಪ್ರಜ್ಞೆ ಎಂದು ಹೇಳಿಕೊಂಡು ಬರಲಾದ ಕಾಳೇಗೌಡ ನಾಗವಾರ ಅವರ ಹೆಸರು ಪ್ರಶಸ್ತಿ ಪ್ರದಾನ ಮಾಡುವಲ್ಲಿ ಇದೆ. ಸಂವೇದನಾಶೀಲ ಕಾಳೇಗೌಡ ನಾಗವಾರ ಅವರು ಯಾವ ನಿರ್ಧಾರ ತಗೋಬಹುದು? ಎನ್ನುವ ಬಗ್ಗೆ ನನಗೆ ಕುತೂಹಲ ಇದೆ. ಬಹುಶಃ ಅವರ ಬದುಕಿನಲ್ಲಿ ಇಂಥ ಸರ್ವಾಧಿಕಾರಿಯನ್ನು ಸಹಿಸಿದ ಚರಿತ್ರೆ ಇಲ್ಲ. ಈಗ ನೋಡಬೇಕು, ಸರ್ವಾಧಿಕಾರಿ ತೊಲಗಲು ಕೂಗು ಹಾಕಿಯಾರೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮಹೇಶ ಜೋಶಿ ಅವರ ಈ ನಡಾವಳಿ ಹಾಗೂ ಪ್ರಜಾಪ್ರಭುತ್ವ ವಿರೋಧಿತನವನ್ನು ವಿರೋಧಿಸಿ ಬಂಡಾಯದ ಮನಸುಗಳು ಜನ ಸಾಹಿತ್ಯ ಸಮಾವೇಶವನ್ನು ಇತ್ತೀಚಿಗಷ್ಟೇ ಮಾಡಿದ ನೆನಪು ಇನ್ನು ಹಸಿರಾಗಿರುವಾಗಲೇ ಇಂತಹ ಸರ್ವಾಧಿಕಾರಿ ನಡೆ ಜೋಶಿ ತೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....