Homeಕರ್ನಾಟಕನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

- Advertisement -
- Advertisement -

ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳು ಅವರು ಇದ್ದರು ಎನ್ನುವುದಕ್ಕೆ ಆಧಾರವಿಲ್ಲ. ಹಾಗಾಗಿ ಈ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಸ್ವಾಮೀಜಿ ನಿರ್ಮಲಾನಂದನಾಥ ಅವರು ಹೇಳಿದ್ದರು. ಆದರೆ ಇದೀಗ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸ್ವಾಮೀಜಿ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದಾರೆ.

ಕನ್ನಡದ ಖಾಸಗಿ ಸುದ್ದಿವಾಹಿನಿಯ ಪ್ರತಿನಿಧಿಯೊಬ್ಬರ ಜೊತೆ ಉರಿಗೌಡ, ನಂಜೇಗೌಡ ವಿವಾದದ ಬಗ್ಗೆ ಮಾತನಾಡಿದ ಅಡ್ಡಂಡ ಕಾರ್ಯಪ್ಪ, ”ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

”ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ, ಆದರೆ ಉರಿಗೌಡ, ನಂಜೇಗೌಡ ಚರ್ಚೆ ನಡೆಯದಂತೆ ಮಾಡಿದ್ದು ಸರಿಯಲ್ಲ ಈ ಬಗ್ಗೆ ಸಂಶೋಧನೆ ನಡೆಯಲಿ ಅನ್ನಬೇಕಿತ್ತು. ಆದರೆ ಶ್ರೀಗಳು ಕುಮಾರಸ್ವಾಮಿ ಪರವಾಗಿ ನಿಂತಿದ್ದಾರೆ ಎಂದು ‘ಟಿಪ್ಪು ಕಂಡ ನಿಜ ಕನಸುಗಳು’ ಕೃತಿಯ ಲೇಖಕ ಅಡ್ಡಂಡ ಕಾರ್ಯಪ್ಪ ಪರೋಕ್ಷವಾಗಿ  ಹೇಳಿದ್ದಾರೆ.

”ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಂತಹ ಸಮಯದಲ್ಲಿ ಸ್ವಾಮೀಜಿಗಳು,  ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತಿದ್ದರು. ಆಗಾಗ ಡಿ.ಕೆ.ಶಿವಕುಮಾ‌ರ್ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ, ಅವರ ಸರ್ಕಾರ ಬೀಳದಂತೆ ನೋಡಿಕೋ ಎಂದು ಹೇಳಿದ್ದರು” ಎಂದು ಸ್ವಾಮೀಜಿ ವಿರುದ್ಧ ಅಡ್ಡಂಡ ಕಾರ್ಯಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

”ಸ್ವಾಮೀಜಿಗೆ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ಮಾತ್ರ ಒಕ್ಕಲಿಗ ನಾಯಕರು ಸಿ.ಟಿ.ರವಿ, ಅಶ್ವತ್ಥ ನಾರಾಯಣ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಅವರು ಬೇಕಿಲ್ಲ” ಎಂದು ಅಡ್ಡಂಡ ಕಾರ್ಯಪ್ಪ  ಹೇಳಿದ್ದಾರೆ.

ಇತ್ತೀಚೆಗೆ ಸಿ.ಟಿ.ರವಿ, ಅಶ್ವತ್ಥ ನಾರಾಯಣ ಹೋದಕಡೆಯಲ್ಲೆಲ್ಲಾ ಉರಿಗೌಡ, ನಂಜೇಗೌಡ ಕಥೆಯನ್ನೇ ಹೇಳುತ್ತಿದ್ದರು. ಮತ್ತೊಂದು ಕಡೆ ಸಚಿವ ಮುನಿರತ್ನ ಅವರು ”ಉರಿಗೌಡ-ನಂಜೇಗೌಡ”(1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಸಚಿವ ಮುನಿರತ್ನ ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದರು.

ಆ ಬಳಿಕ ಉರಿಗೌಡ, ನಂಜೇಗೌಡ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಆಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಮುನಿರತ್ನ ಅವರನ್ನು ಕರೆದು ಚಿತ್ರ ನಿರ್ಮಾಣ ಮಾಡದಂತೆ ಬುದ್ದಿ ಹೇಳಿ ಕಳುಹಿಸಿದ್ದರು. ಈ ವೇಳೆ ಸ್ವಾಮೀಜಿ, ”ಯಾರೂ ಕೂಡಾ ಇದರ ಬಗ್ಗೆ ಹೆಚ್ಚು ಚರ್ಚೆ ಮಾಡಬಾರದು” ಎಂದು ಮಾಧ್ಯಮ ಹೇಳಿಕೆಯನ್ನೂ ನೀಡಿದ್ದರು.

ಶ್ರೀಗಳ ಹೇಳಿಕೆ:

”ಸಿ.ಟಿ ರವಿ ಇರಬಹುದು, ಅಶ್ವತ್ಥ ನಾರಾಯಣ ಅವರಿರಬಹುದು, ಗೋಪಾಲಯ್ಯ ಅವರಿರಬಹುದು, ಈ ವಿಷಯದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಮನದಟ್ಟು ಮಾಡಿಕೊಟ್ಟಿದ್ದರಿಂದ ಅವರೆಲ್ಲರೂ ಸುಮ್ಮನಾಗಬೇಕು, ಸುಮ್ಮನಾಗಿದ್ದಾರೆ ಎಂದು ಭಾವಿಸಿದ್ದೇನೆ” ಎಂದಿದ್ದಾರೆ.

”ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ, ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂತಹುದ್ಯಾವುದೂ ಇದುವರೆಗೆ ಕಂಡುಬಾರದೆ ಇರುವುದರಿಂದ ಹೇಳಿಕೆಗಳ ಮೂಲಕ ಯುವಕರಲ್ಲಿ ಮತ್ತು ಸಮಕಾಲೀನ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು, ಸಮುದಾಯಕ್ಕೆ ಧಕ್ಕೆಯನ್ನು ಕೂಡಾ ತರಬಾರದು” ಎಂದು ಸ್ವಾಮೀಜಿ ಎಚ್ಚರಿಸಿದ್ದರು.

ಇನ್ನು ಮುಂದುವರಿದು, ”ಯಾವ ವಿಚಾರ ಪ್ರಸ್ತಾಪ ಆಗುತ್ತಿದೆಯೋ ಈ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಉರಿಗೌಡರು ಮತ್ತು ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ, ನಮೂದು ಆಗಿರುವಂಥ ಅಥವಾ ಶಾಸನಗಳು ಸಿಕ್ಕದ್ದೇ ಆದರೆ ಆದಿಚುಂಚನಗಿರಿ ಸಂಸ್ಥಾನ ಮಠಕ್ಕೆ ಸರಿಯಾದ ರೀತಿಯಲ್ಲಿ ತಂದೊಪ್ಪಿಸಿದ್ದೇ ಆದಲ್ಲಿ ಎಲ್ಲವನ್ನೂ ಕೂಡಾ ಕ್ರೋಡೀಕರಿಸಿ, ಯಾಕೆಂದರೆ ಶಾಸನ ತಜ್ಞರು ಇರುತ್ತಾರೆ, ಕಾರ್ಬನ್‌ ಡೇಟಿಂಗ್ ಟೆಕ್ನಾಲಜಿ ನಮ್ಮಲ್ಲಿದೆ, ಇತಿಹಾಸವನ್ನು ವಿಮರ್ಶೆ ಮಾಡುವ ಐತಿಹಾಸಿಕ ಶ್ರೇಷ್ಠ ವಿಮರ್ಶಕರು ಇದ್ದಾರೆ, ಇವರೆಲ್ಲರನ್ನೂ ಇಟ್ಟುಕೊಂಡು ತಂದುಕೊಟ್ಟ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಒರೆಗೆ ಹಚ್ಚಿ ನಂತರದಲ್ಲಿ ಒಂದು ನಿರ್ಧಾರಕ್ಕೆ ಬರಲಾಗುತ್ತದೆ” ಎಂದು ಹೇಳಿದ್ದರು.

”ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಒಂದು ಗೊಂದಲಕ್ಕೆ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂಥ ಕೆಲಸ ಆಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ಕೂಡಾ ನಮ್ಮ ಆಗ್ರಹ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...