Homeಕರ್ನಾಟಕನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

- Advertisement -
- Advertisement -

ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳು ಅವರು ಇದ್ದರು ಎನ್ನುವುದಕ್ಕೆ ಆಧಾರವಿಲ್ಲ. ಹಾಗಾಗಿ ಈ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಸ್ವಾಮೀಜಿ ನಿರ್ಮಲಾನಂದನಾಥ ಅವರು ಹೇಳಿದ್ದರು. ಆದರೆ ಇದೀಗ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸ್ವಾಮೀಜಿ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದಾರೆ.

ಕನ್ನಡದ ಖಾಸಗಿ ಸುದ್ದಿವಾಹಿನಿಯ ಪ್ರತಿನಿಧಿಯೊಬ್ಬರ ಜೊತೆ ಉರಿಗೌಡ, ನಂಜೇಗೌಡ ವಿವಾದದ ಬಗ್ಗೆ ಮಾತನಾಡಿದ ಅಡ್ಡಂಡ ಕಾರ್ಯಪ್ಪ, ”ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

”ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ, ಆದರೆ ಉರಿಗೌಡ, ನಂಜೇಗೌಡ ಚರ್ಚೆ ನಡೆಯದಂತೆ ಮಾಡಿದ್ದು ಸರಿಯಲ್ಲ ಈ ಬಗ್ಗೆ ಸಂಶೋಧನೆ ನಡೆಯಲಿ ಅನ್ನಬೇಕಿತ್ತು. ಆದರೆ ಶ್ರೀಗಳು ಕುಮಾರಸ್ವಾಮಿ ಪರವಾಗಿ ನಿಂತಿದ್ದಾರೆ ಎಂದು ‘ಟಿಪ್ಪು ಕಂಡ ನಿಜ ಕನಸುಗಳು’ ಕೃತಿಯ ಲೇಖಕ ಅಡ್ಡಂಡ ಕಾರ್ಯಪ್ಪ ಪರೋಕ್ಷವಾಗಿ  ಹೇಳಿದ್ದಾರೆ.

”ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಂತಹ ಸಮಯದಲ್ಲಿ ಸ್ವಾಮೀಜಿಗಳು,  ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತಿದ್ದರು. ಆಗಾಗ ಡಿ.ಕೆ.ಶಿವಕುಮಾ‌ರ್ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ, ಅವರ ಸರ್ಕಾರ ಬೀಳದಂತೆ ನೋಡಿಕೋ ಎಂದು ಹೇಳಿದ್ದರು” ಎಂದು ಸ್ವಾಮೀಜಿ ವಿರುದ್ಧ ಅಡ್ಡಂಡ ಕಾರ್ಯಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

”ಸ್ವಾಮೀಜಿಗೆ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ಮಾತ್ರ ಒಕ್ಕಲಿಗ ನಾಯಕರು ಸಿ.ಟಿ.ರವಿ, ಅಶ್ವತ್ಥ ನಾರಾಯಣ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಅವರು ಬೇಕಿಲ್ಲ” ಎಂದು ಅಡ್ಡಂಡ ಕಾರ್ಯಪ್ಪ  ಹೇಳಿದ್ದಾರೆ.

ಇತ್ತೀಚೆಗೆ ಸಿ.ಟಿ.ರವಿ, ಅಶ್ವತ್ಥ ನಾರಾಯಣ ಹೋದಕಡೆಯಲ್ಲೆಲ್ಲಾ ಉರಿಗೌಡ, ನಂಜೇಗೌಡ ಕಥೆಯನ್ನೇ ಹೇಳುತ್ತಿದ್ದರು. ಮತ್ತೊಂದು ಕಡೆ ಸಚಿವ ಮುನಿರತ್ನ ಅವರು ”ಉರಿಗೌಡ-ನಂಜೇಗೌಡ”(1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಸಚಿವ ಮುನಿರತ್ನ ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದರು.

ಆ ಬಳಿಕ ಉರಿಗೌಡ, ನಂಜೇಗೌಡ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಆಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಮುನಿರತ್ನ ಅವರನ್ನು ಕರೆದು ಚಿತ್ರ ನಿರ್ಮಾಣ ಮಾಡದಂತೆ ಬುದ್ದಿ ಹೇಳಿ ಕಳುಹಿಸಿದ್ದರು. ಈ ವೇಳೆ ಸ್ವಾಮೀಜಿ, ”ಯಾರೂ ಕೂಡಾ ಇದರ ಬಗ್ಗೆ ಹೆಚ್ಚು ಚರ್ಚೆ ಮಾಡಬಾರದು” ಎಂದು ಮಾಧ್ಯಮ ಹೇಳಿಕೆಯನ್ನೂ ನೀಡಿದ್ದರು.

ಶ್ರೀಗಳ ಹೇಳಿಕೆ:

”ಸಿ.ಟಿ ರವಿ ಇರಬಹುದು, ಅಶ್ವತ್ಥ ನಾರಾಯಣ ಅವರಿರಬಹುದು, ಗೋಪಾಲಯ್ಯ ಅವರಿರಬಹುದು, ಈ ವಿಷಯದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಮನದಟ್ಟು ಮಾಡಿಕೊಟ್ಟಿದ್ದರಿಂದ ಅವರೆಲ್ಲರೂ ಸುಮ್ಮನಾಗಬೇಕು, ಸುಮ್ಮನಾಗಿದ್ದಾರೆ ಎಂದು ಭಾವಿಸಿದ್ದೇನೆ” ಎಂದಿದ್ದಾರೆ.

”ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ, ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂತಹುದ್ಯಾವುದೂ ಇದುವರೆಗೆ ಕಂಡುಬಾರದೆ ಇರುವುದರಿಂದ ಹೇಳಿಕೆಗಳ ಮೂಲಕ ಯುವಕರಲ್ಲಿ ಮತ್ತು ಸಮಕಾಲೀನ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು, ಸಮುದಾಯಕ್ಕೆ ಧಕ್ಕೆಯನ್ನು ಕೂಡಾ ತರಬಾರದು” ಎಂದು ಸ್ವಾಮೀಜಿ ಎಚ್ಚರಿಸಿದ್ದರು.

ಇನ್ನು ಮುಂದುವರಿದು, ”ಯಾವ ವಿಚಾರ ಪ್ರಸ್ತಾಪ ಆಗುತ್ತಿದೆಯೋ ಈ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಉರಿಗೌಡರು ಮತ್ತು ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ, ನಮೂದು ಆಗಿರುವಂಥ ಅಥವಾ ಶಾಸನಗಳು ಸಿಕ್ಕದ್ದೇ ಆದರೆ ಆದಿಚುಂಚನಗಿರಿ ಸಂಸ್ಥಾನ ಮಠಕ್ಕೆ ಸರಿಯಾದ ರೀತಿಯಲ್ಲಿ ತಂದೊಪ್ಪಿಸಿದ್ದೇ ಆದಲ್ಲಿ ಎಲ್ಲವನ್ನೂ ಕೂಡಾ ಕ್ರೋಡೀಕರಿಸಿ, ಯಾಕೆಂದರೆ ಶಾಸನ ತಜ್ಞರು ಇರುತ್ತಾರೆ, ಕಾರ್ಬನ್‌ ಡೇಟಿಂಗ್ ಟೆಕ್ನಾಲಜಿ ನಮ್ಮಲ್ಲಿದೆ, ಇತಿಹಾಸವನ್ನು ವಿಮರ್ಶೆ ಮಾಡುವ ಐತಿಹಾಸಿಕ ಶ್ರೇಷ್ಠ ವಿಮರ್ಶಕರು ಇದ್ದಾರೆ, ಇವರೆಲ್ಲರನ್ನೂ ಇಟ್ಟುಕೊಂಡು ತಂದುಕೊಟ್ಟ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಒರೆಗೆ ಹಚ್ಚಿ ನಂತರದಲ್ಲಿ ಒಂದು ನಿರ್ಧಾರಕ್ಕೆ ಬರಲಾಗುತ್ತದೆ” ಎಂದು ಹೇಳಿದ್ದರು.

”ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಒಂದು ಗೊಂದಲಕ್ಕೆ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂಥ ಕೆಲಸ ಆಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ಕೂಡಾ ನಮ್ಮ ಆಗ್ರಹ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...