Homeಕರ್ನಾಟಕನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

- Advertisement -
- Advertisement -

ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳು ಅವರು ಇದ್ದರು ಎನ್ನುವುದಕ್ಕೆ ಆಧಾರವಿಲ್ಲ. ಹಾಗಾಗಿ ಈ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಸ್ವಾಮೀಜಿ ನಿರ್ಮಲಾನಂದನಾಥ ಅವರು ಹೇಳಿದ್ದರು. ಆದರೆ ಇದೀಗ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸ್ವಾಮೀಜಿ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದಾರೆ.

ಕನ್ನಡದ ಖಾಸಗಿ ಸುದ್ದಿವಾಹಿನಿಯ ಪ್ರತಿನಿಧಿಯೊಬ್ಬರ ಜೊತೆ ಉರಿಗೌಡ, ನಂಜೇಗೌಡ ವಿವಾದದ ಬಗ್ಗೆ ಮಾತನಾಡಿದ ಅಡ್ಡಂಡ ಕಾರ್ಯಪ್ಪ, ”ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

”ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ, ಆದರೆ ಉರಿಗೌಡ, ನಂಜೇಗೌಡ ಚರ್ಚೆ ನಡೆಯದಂತೆ ಮಾಡಿದ್ದು ಸರಿಯಲ್ಲ ಈ ಬಗ್ಗೆ ಸಂಶೋಧನೆ ನಡೆಯಲಿ ಅನ್ನಬೇಕಿತ್ತು. ಆದರೆ ಶ್ರೀಗಳು ಕುಮಾರಸ್ವಾಮಿ ಪರವಾಗಿ ನಿಂತಿದ್ದಾರೆ ಎಂದು ‘ಟಿಪ್ಪು ಕಂಡ ನಿಜ ಕನಸುಗಳು’ ಕೃತಿಯ ಲೇಖಕ ಅಡ್ಡಂಡ ಕಾರ್ಯಪ್ಪ ಪರೋಕ್ಷವಾಗಿ  ಹೇಳಿದ್ದಾರೆ.

”ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಂತಹ ಸಮಯದಲ್ಲಿ ಸ್ವಾಮೀಜಿಗಳು,  ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತಿದ್ದರು. ಆಗಾಗ ಡಿ.ಕೆ.ಶಿವಕುಮಾ‌ರ್ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ, ಅವರ ಸರ್ಕಾರ ಬೀಳದಂತೆ ನೋಡಿಕೋ ಎಂದು ಹೇಳಿದ್ದರು” ಎಂದು ಸ್ವಾಮೀಜಿ ವಿರುದ್ಧ ಅಡ್ಡಂಡ ಕಾರ್ಯಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

”ಸ್ವಾಮೀಜಿಗೆ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ಮಾತ್ರ ಒಕ್ಕಲಿಗ ನಾಯಕರು ಸಿ.ಟಿ.ರವಿ, ಅಶ್ವತ್ಥ ನಾರಾಯಣ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಅವರು ಬೇಕಿಲ್ಲ” ಎಂದು ಅಡ್ಡಂಡ ಕಾರ್ಯಪ್ಪ  ಹೇಳಿದ್ದಾರೆ.

ಇತ್ತೀಚೆಗೆ ಸಿ.ಟಿ.ರವಿ, ಅಶ್ವತ್ಥ ನಾರಾಯಣ ಹೋದಕಡೆಯಲ್ಲೆಲ್ಲಾ ಉರಿಗೌಡ, ನಂಜೇಗೌಡ ಕಥೆಯನ್ನೇ ಹೇಳುತ್ತಿದ್ದರು. ಮತ್ತೊಂದು ಕಡೆ ಸಚಿವ ಮುನಿರತ್ನ ಅವರು ”ಉರಿಗೌಡ-ನಂಜೇಗೌಡ”(1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಸಚಿವ ಮುನಿರತ್ನ ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದರು.

ಆ ಬಳಿಕ ಉರಿಗೌಡ, ನಂಜೇಗೌಡ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಆಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಮುನಿರತ್ನ ಅವರನ್ನು ಕರೆದು ಚಿತ್ರ ನಿರ್ಮಾಣ ಮಾಡದಂತೆ ಬುದ್ದಿ ಹೇಳಿ ಕಳುಹಿಸಿದ್ದರು. ಈ ವೇಳೆ ಸ್ವಾಮೀಜಿ, ”ಯಾರೂ ಕೂಡಾ ಇದರ ಬಗ್ಗೆ ಹೆಚ್ಚು ಚರ್ಚೆ ಮಾಡಬಾರದು” ಎಂದು ಮಾಧ್ಯಮ ಹೇಳಿಕೆಯನ್ನೂ ನೀಡಿದ್ದರು.

ಶ್ರೀಗಳ ಹೇಳಿಕೆ:

”ಸಿ.ಟಿ ರವಿ ಇರಬಹುದು, ಅಶ್ವತ್ಥ ನಾರಾಯಣ ಅವರಿರಬಹುದು, ಗೋಪಾಲಯ್ಯ ಅವರಿರಬಹುದು, ಈ ವಿಷಯದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಮನದಟ್ಟು ಮಾಡಿಕೊಟ್ಟಿದ್ದರಿಂದ ಅವರೆಲ್ಲರೂ ಸುಮ್ಮನಾಗಬೇಕು, ಸುಮ್ಮನಾಗಿದ್ದಾರೆ ಎಂದು ಭಾವಿಸಿದ್ದೇನೆ” ಎಂದಿದ್ದಾರೆ.

”ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ, ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂತಹುದ್ಯಾವುದೂ ಇದುವರೆಗೆ ಕಂಡುಬಾರದೆ ಇರುವುದರಿಂದ ಹೇಳಿಕೆಗಳ ಮೂಲಕ ಯುವಕರಲ್ಲಿ ಮತ್ತು ಸಮಕಾಲೀನ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು, ಸಮುದಾಯಕ್ಕೆ ಧಕ್ಕೆಯನ್ನು ಕೂಡಾ ತರಬಾರದು” ಎಂದು ಸ್ವಾಮೀಜಿ ಎಚ್ಚರಿಸಿದ್ದರು.

ಇನ್ನು ಮುಂದುವರಿದು, ”ಯಾವ ವಿಚಾರ ಪ್ರಸ್ತಾಪ ಆಗುತ್ತಿದೆಯೋ ಈ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಉರಿಗೌಡರು ಮತ್ತು ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ, ನಮೂದು ಆಗಿರುವಂಥ ಅಥವಾ ಶಾಸನಗಳು ಸಿಕ್ಕದ್ದೇ ಆದರೆ ಆದಿಚುಂಚನಗಿರಿ ಸಂಸ್ಥಾನ ಮಠಕ್ಕೆ ಸರಿಯಾದ ರೀತಿಯಲ್ಲಿ ತಂದೊಪ್ಪಿಸಿದ್ದೇ ಆದಲ್ಲಿ ಎಲ್ಲವನ್ನೂ ಕೂಡಾ ಕ್ರೋಡೀಕರಿಸಿ, ಯಾಕೆಂದರೆ ಶಾಸನ ತಜ್ಞರು ಇರುತ್ತಾರೆ, ಕಾರ್ಬನ್‌ ಡೇಟಿಂಗ್ ಟೆಕ್ನಾಲಜಿ ನಮ್ಮಲ್ಲಿದೆ, ಇತಿಹಾಸವನ್ನು ವಿಮರ್ಶೆ ಮಾಡುವ ಐತಿಹಾಸಿಕ ಶ್ರೇಷ್ಠ ವಿಮರ್ಶಕರು ಇದ್ದಾರೆ, ಇವರೆಲ್ಲರನ್ನೂ ಇಟ್ಟುಕೊಂಡು ತಂದುಕೊಟ್ಟ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಒರೆಗೆ ಹಚ್ಚಿ ನಂತರದಲ್ಲಿ ಒಂದು ನಿರ್ಧಾರಕ್ಕೆ ಬರಲಾಗುತ್ತದೆ” ಎಂದು ಹೇಳಿದ್ದರು.

”ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಒಂದು ಗೊಂದಲಕ್ಕೆ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂಥ ಕೆಲಸ ಆಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ಕೂಡಾ ನಮ್ಮ ಆಗ್ರಹ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...