Homeಕರ್ನಾಟಕನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

- Advertisement -
- Advertisement -

ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳು ಅವರು ಇದ್ದರು ಎನ್ನುವುದಕ್ಕೆ ಆಧಾರವಿಲ್ಲ. ಹಾಗಾಗಿ ಈ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಸ್ವಾಮೀಜಿ ನಿರ್ಮಲಾನಂದನಾಥ ಅವರು ಹೇಳಿದ್ದರು. ಆದರೆ ಇದೀಗ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸ್ವಾಮೀಜಿ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದಾರೆ.

ಕನ್ನಡದ ಖಾಸಗಿ ಸುದ್ದಿವಾಹಿನಿಯ ಪ್ರತಿನಿಧಿಯೊಬ್ಬರ ಜೊತೆ ಉರಿಗೌಡ, ನಂಜೇಗೌಡ ವಿವಾದದ ಬಗ್ಗೆ ಮಾತನಾಡಿದ ಅಡ್ಡಂಡ ಕಾರ್ಯಪ್ಪ, ”ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

”ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ, ಆದರೆ ಉರಿಗೌಡ, ನಂಜೇಗೌಡ ಚರ್ಚೆ ನಡೆಯದಂತೆ ಮಾಡಿದ್ದು ಸರಿಯಲ್ಲ ಈ ಬಗ್ಗೆ ಸಂಶೋಧನೆ ನಡೆಯಲಿ ಅನ್ನಬೇಕಿತ್ತು. ಆದರೆ ಶ್ರೀಗಳು ಕುಮಾರಸ್ವಾಮಿ ಪರವಾಗಿ ನಿಂತಿದ್ದಾರೆ ಎಂದು ‘ಟಿಪ್ಪು ಕಂಡ ನಿಜ ಕನಸುಗಳು’ ಕೃತಿಯ ಲೇಖಕ ಅಡ್ಡಂಡ ಕಾರ್ಯಪ್ಪ ಪರೋಕ್ಷವಾಗಿ  ಹೇಳಿದ್ದಾರೆ.

”ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಂತಹ ಸಮಯದಲ್ಲಿ ಸ್ವಾಮೀಜಿಗಳು,  ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತಿದ್ದರು. ಆಗಾಗ ಡಿ.ಕೆ.ಶಿವಕುಮಾ‌ರ್ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ, ಅವರ ಸರ್ಕಾರ ಬೀಳದಂತೆ ನೋಡಿಕೋ ಎಂದು ಹೇಳಿದ್ದರು” ಎಂದು ಸ್ವಾಮೀಜಿ ವಿರುದ್ಧ ಅಡ್ಡಂಡ ಕಾರ್ಯಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

”ಸ್ವಾಮೀಜಿಗೆ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ಮಾತ್ರ ಒಕ್ಕಲಿಗ ನಾಯಕರು ಸಿ.ಟಿ.ರವಿ, ಅಶ್ವತ್ಥ ನಾರಾಯಣ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಅವರು ಬೇಕಿಲ್ಲ” ಎಂದು ಅಡ್ಡಂಡ ಕಾರ್ಯಪ್ಪ  ಹೇಳಿದ್ದಾರೆ.

ಇತ್ತೀಚೆಗೆ ಸಿ.ಟಿ.ರವಿ, ಅಶ್ವತ್ಥ ನಾರಾಯಣ ಹೋದಕಡೆಯಲ್ಲೆಲ್ಲಾ ಉರಿಗೌಡ, ನಂಜೇಗೌಡ ಕಥೆಯನ್ನೇ ಹೇಳುತ್ತಿದ್ದರು. ಮತ್ತೊಂದು ಕಡೆ ಸಚಿವ ಮುನಿರತ್ನ ಅವರು ”ಉರಿಗೌಡ-ನಂಜೇಗೌಡ”(1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಸಚಿವ ಮುನಿರತ್ನ ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದರು.

ಆ ಬಳಿಕ ಉರಿಗೌಡ, ನಂಜೇಗೌಡ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಆಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಮುನಿರತ್ನ ಅವರನ್ನು ಕರೆದು ಚಿತ್ರ ನಿರ್ಮಾಣ ಮಾಡದಂತೆ ಬುದ್ದಿ ಹೇಳಿ ಕಳುಹಿಸಿದ್ದರು. ಈ ವೇಳೆ ಸ್ವಾಮೀಜಿ, ”ಯಾರೂ ಕೂಡಾ ಇದರ ಬಗ್ಗೆ ಹೆಚ್ಚು ಚರ್ಚೆ ಮಾಡಬಾರದು” ಎಂದು ಮಾಧ್ಯಮ ಹೇಳಿಕೆಯನ್ನೂ ನೀಡಿದ್ದರು.

ಶ್ರೀಗಳ ಹೇಳಿಕೆ:

”ಸಿ.ಟಿ ರವಿ ಇರಬಹುದು, ಅಶ್ವತ್ಥ ನಾರಾಯಣ ಅವರಿರಬಹುದು, ಗೋಪಾಲಯ್ಯ ಅವರಿರಬಹುದು, ಈ ವಿಷಯದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಮನದಟ್ಟು ಮಾಡಿಕೊಟ್ಟಿದ್ದರಿಂದ ಅವರೆಲ್ಲರೂ ಸುಮ್ಮನಾಗಬೇಕು, ಸುಮ್ಮನಾಗಿದ್ದಾರೆ ಎಂದು ಭಾವಿಸಿದ್ದೇನೆ” ಎಂದಿದ್ದಾರೆ.

”ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ, ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂತಹುದ್ಯಾವುದೂ ಇದುವರೆಗೆ ಕಂಡುಬಾರದೆ ಇರುವುದರಿಂದ ಹೇಳಿಕೆಗಳ ಮೂಲಕ ಯುವಕರಲ್ಲಿ ಮತ್ತು ಸಮಕಾಲೀನ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು, ಸಮುದಾಯಕ್ಕೆ ಧಕ್ಕೆಯನ್ನು ಕೂಡಾ ತರಬಾರದು” ಎಂದು ಸ್ವಾಮೀಜಿ ಎಚ್ಚರಿಸಿದ್ದರು.

ಇನ್ನು ಮುಂದುವರಿದು, ”ಯಾವ ವಿಚಾರ ಪ್ರಸ್ತಾಪ ಆಗುತ್ತಿದೆಯೋ ಈ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಉರಿಗೌಡರು ಮತ್ತು ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ, ನಮೂದು ಆಗಿರುವಂಥ ಅಥವಾ ಶಾಸನಗಳು ಸಿಕ್ಕದ್ದೇ ಆದರೆ ಆದಿಚುಂಚನಗಿರಿ ಸಂಸ್ಥಾನ ಮಠಕ್ಕೆ ಸರಿಯಾದ ರೀತಿಯಲ್ಲಿ ತಂದೊಪ್ಪಿಸಿದ್ದೇ ಆದಲ್ಲಿ ಎಲ್ಲವನ್ನೂ ಕೂಡಾ ಕ್ರೋಡೀಕರಿಸಿ, ಯಾಕೆಂದರೆ ಶಾಸನ ತಜ್ಞರು ಇರುತ್ತಾರೆ, ಕಾರ್ಬನ್‌ ಡೇಟಿಂಗ್ ಟೆಕ್ನಾಲಜಿ ನಮ್ಮಲ್ಲಿದೆ, ಇತಿಹಾಸವನ್ನು ವಿಮರ್ಶೆ ಮಾಡುವ ಐತಿಹಾಸಿಕ ಶ್ರೇಷ್ಠ ವಿಮರ್ಶಕರು ಇದ್ದಾರೆ, ಇವರೆಲ್ಲರನ್ನೂ ಇಟ್ಟುಕೊಂಡು ತಂದುಕೊಟ್ಟ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಒರೆಗೆ ಹಚ್ಚಿ ನಂತರದಲ್ಲಿ ಒಂದು ನಿರ್ಧಾರಕ್ಕೆ ಬರಲಾಗುತ್ತದೆ” ಎಂದು ಹೇಳಿದ್ದರು.

”ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಒಂದು ಗೊಂದಲಕ್ಕೆ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂಥ ಕೆಲಸ ಆಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ಕೂಡಾ ನಮ್ಮ ಆಗ್ರಹ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...