Homeಮುಖಪುಟನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ;...

ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದಕ್ಕಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತನ್ನ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ (ಏ.21) ಅರ್ಜಿದಾರರಿಗೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತ್ತು.

ದುಬೆಯವರ ಹೇಳಿಕೆಗಳ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅರ್ಜಿದಾರರ ಪರ ವಕೀಲರು, ನ್ಯಾಯಾಲಯದ ಅನುಮತಿಯೊಂದಿಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಬಯಸುವುದಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನೀವು ಅರ್ಜಿ ಸಲ್ಲಿಸಿ, ಅದಕ್ಕೆ ನಮ್ಮ ಅನುಮತಿ ಅಗತ್ಯವಿಲ್ಲ. ಆದರೆ, ಈ ವಿಷಯದಲ್ಲಿ ಅಟಾರ್ನಿ ಜನರಲ್ (ಎಜಿ) ಅವರಿಂದ ಅನುಮತಿ ಪಡೆಯಬೇಕಾಗಿದೆ. ಎಜಿ ಮುಂದೆ ಪ್ರಕರಣ ದಾಖಲಿಸಿ, ಅವರು ಅನುಮತಿ ನೀಡುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾಗಿ .barandbench.com ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ ಎಂದು ಬಿಜೆಪಿ ಸಂಸದ ದುಬೆ ಶನಿವಾರ ವಾಗ್ದಾಳಿ ನಡೆಸಿದ್ದರು.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಸಿಜೆಐ ಖನ್ನಾ ಅವರೇ ಅದಕ್ಕೆ ಕಾರಣ ಎಂದು ಟೀಕಿಸಿದ್ದರು.

ಈ ತಿಂಗಳ ಆರಂಭದಲ್ಲಿ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ಬುಧವಾರ ವಿಚಾರಣೆ ನಡೆಸಿದೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದು ಮತ್ತು ಬಳಕೆದಾರರಿಂದ ವಕ್ಫ್ ಆಸ್ತಿಗಳನ್ನು ತೆಗೆದು ಹಾಕಲು ಅವಕಾಶ ನೀಡುವಂತಹ ಕೆಲವು ನಿಬಂಧನೆಗಳು ಮೂಲಭೂತ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿದಾರರು ವಾದಿಸುತ್ತಿದ್ದಾರೆ. ಇದರಲ್ಲಿ ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸುವುದನ್ನು ದುಬೆಯವರು ಪ್ರಶ್ನಿಸಿದ್ದಾರೆ.

ವಕ್ಫ್ ಕಾಯ್ದೆಯ ತಿದ್ದುಪಡಿಗಳನ್ನು ಪ್ರಶ್ನಿಸಿದ ದಾವೆದಾರರಲ್ಲಿ ಒಬ್ಬರ ಪರ ವಕೀಲರಾಗಿರುವ ಸುಪ್ರೀಂ ಕೋರ್ಟ್ ವಕೀಲ ಅನಸ್ ತನ್ವೀರ್, ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಿಗಾಗಿ ಸಂಸದ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ಕೋರಿದ್ದಾರೆ.

“1975ರ ಸುಪ್ರೀಂ ಕೋರ್ಟ್ ನಿಂದನೆ ಪ್ರಕ್ರಿಯೆಗಳನ್ನು ನಿಯಂತ್ರಿಸುವ ನಿಯಮಗಳ ನಿಬಂದನೆ 3 (ಸಿ) ಯೊಂದಿಗೆ ಓದಲಾದ ನ್ಯಾಯಾಂಗ ನಿಂದನೆ ಕಾಯ್ದೆ, 1971 ರ ಸೆಕ್ಷನ್ 15 (1) (ಬಿ) ಅಡಿಯಲ್ಲಿ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ, ಜಾರ್ಖಂಡ್‌ನ ಗೊಡ್ಡಾ ಸಂಸದೀಯ ಕ್ಷೇತ್ರದ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದಾರಿತಪ್ಪಿಸುವ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಾಗಿವೆ. ಹಾಗಾಗಿ, ಅವರ ವಿರುದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ನಿಮ್ಮ ಒಪ್ಪಿಗೆ ಕೋರುತ್ತೇನೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ ವಿರುದ್ದದ ದುಬೆ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಈ ಹೇಳಿಕೆಗಳನ್ನು ಅವರ ವೈಯಕ್ತಿಕ ಅಭಿಪ್ರಾಯಗಳು ಎಂದಿದ್ದಾರೆ.

ನ್ಯಾಯಾಂಗವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಅಂತಹ ಹೇಳಿಕೆಗಳನ್ನು ನೀಡದಂತೆ ಪಕ್ಷದ ನಾಯಕರಿಗೆ ನಿರ್ದೇಶನ ನೀಡಿದ್ದೇನೆ ಎಂದು ನಡ್ಡಾ ಹೇಳಿದ್ದಾರೆ.

ಬಿಹಾರ| ಪಾರ್ಕಿಂಗ್ ವಿಚಾರಕ್ಕೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಐವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...