Homeಮುಖಪುಟರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

ರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ, ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ ಜನವರಿ 31ರ ಬುಧವಾರದಂದು ಕೇರಳದ ಕ್ಯಾಲಿಕಟ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಸುತ್ತೋಲೆ ಹೊರಡಿಸಿದ್ದಾರೆ.

ಮಂದಿರ ಉದ್ಘಾಟನೆಯ ದಿನದಂದು ಕ್ಯಾಂಪಸ್‌ನೊಳಗೆ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿತ್ತು. ರಾಮ ಮಂದಿರ ಉದ್ಘಾಟನೆ ನಿಮಿತ್ತ ಕಾರ್ಯಕ್ರಮವನ್ನು ಆಯೋಜಿಸಿದ್ದ ಒಂದು ಗುಂಪು ಮತ್ತು ಪ್ರತಿಭಟನೆ ನಡೆಸುತ್ತಿದ್ದ ಇನ್ನೊಂದು ಗುಂಪಿನ ನಡುವೆ ಜಗಳ ನಡೆದಿತ್ತು. ಅಮಾನತುಗೊಂಡ ವಿದ್ಯಾರ್ಥಿ ಸೇರಿದಂತೆ ಪ್ರತಿಭಟನಾ ನಿರತರು ‘ಭಾರತ ರಾಮ ರಾಜ್ಯವಲ್ಲ’ ಎಂಬ ಬರಹದ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದರು.

ಡೀನ್ ಹೊರಡಿಸಿದ ಸುತ್ತೋಲೆಯಲ್ಲಿ ಸಂಸ್ಥೆಯ ಶಿಸ್ತು ಸಮಿತಿಯು ನಡೆಸಿದ ತನಿಖೆಯಲ್ಲಿ ಅಮಾನತುಗೊಂಡ ವಿದ್ಯಾರ್ಥಿಯನ್ನು ಒಳಗೊಂಡಿರುವ “ಕಾನೂನುಬಾಹಿರ ಪ್ರತಿಭಟನೆಯು ಕ್ಯಾಂಪಸ್‌ನಲ್ಲಿ ಅಶಾಂತಿಗೆ ಕಾರಣವಾಗಿದೆ. ಸಮಾಜದಲ್ಲಿ ಅಶಾಂತಿಗೆ ಪ್ರಚೋದಿಸಲು ವಿದ್ಯಾರ್ಥಿ ಕಾರಣನಾಗಿದ್ದಾನೆ. ತನ್ನ ಬೇಜವಾಬ್ದಾರಿ ವರ್ತನೆಯ ಮೂಲಕ ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ಸಂಸ್ಥೆಯ ಗೌರವವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಹೇಳಲಾಗಿದೆಯತೆ.

ಈ ಹಿಂದೆಯೂ ವಿದ್ಯಾರ್ಥಿ ಕ್ಯಾಂಪಸ್‌ನೊಳಗೆ ನಿಯಮ ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಅದು ಪುನರಾವರ್ತನೆಯಾಗಿರುವ ಹಿನ್ನೆಲೆ, ಅಮಾನತು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್‌ ಮಿನಿಟ್ ವರದಿ ಪ್ರಕಾರ, ವಿಡಿಯೋವೊಂದರಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಸೌಮ್ಯವಾದ ವಾಗ್ವಾದ ನಡೆದಿರುವುದು ಕಾಣಬಹುದು. ಎರಡು ಗುಂಪುಗಳ ಪೈಕಿ ಒಂದು ಗುಂಪಿನವರು ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ, ಮತ್ತೊಂದು ಗುಂಪಿನವರು ಇದು ‘ರಾಮ ರಾಜ್ಯವಲ್ಲ ಭಾರತ’ ಎಂಬ ಘೋಷಣೆ ಮೊಳಗಿಸಿದ್ದಾರೆ. ಆದರೆ, ಮಂದಿರ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಡೀನ್ ಆಮಾನತುಗೊಳಿಸಿದ್ದಾರೆ.

“ಡೀನ್ ಹೇಳಿದಂತೆ ಈ ಹಿಂದೆ ನನ್ನ ವಿರುದ್ದ ನಿಯಮ ಉಲ್ಲಂಘಿಸಿದ ಯಾವುದೇ ಆರೋಪಗಳಿಲ್ಲ. ಕಳೆದ ವರ್ಷ ಆರೆಸ್ಸೆಸ್ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡ ಕಾರ್ಯಕ್ರಮವೊಂದು ಕ್ಯಾಂಪಸ್‌ನಲ್ಲಿ ನಡೆದಿತ್ತು. ಅದನ್ನು ವಿರುದ್ದ ನಾವು ಉಪಸವಾಸ ಸತ್ಯಾಗ್ರಹ ನಡೆಸಿದ್ದೆವು. ಆ ವಿಚಾರವನ್ನು ಉಲ್ಲೇಖಿಸಿ ಟಾರ್ಗೆಟ್ ಮಾಡಲಾಗಿದೆ” ಎಂದು ಅಮಾನತುಗೊಂಡ ವಿದ್ಯಾರ್ಥಿ ಹೇಳಿದ್ದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದ ವಿದ್ಯಾರ್ಥಿಯನ್ನು ಜನವರಿ 30,2025 ರವರೆಗೆ ಒಂದು ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ. ಈ ಅವಧಿಯಲ್ಲಿ, ಕಾಲೇಜಿನ ಅನುಮತಿಯಿಲ್ಲದೆ ಹಾಸ್ಟೆಲ್ ಆವರಣ ಸೇರಿದಂತೆ ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.

ಡೀನ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಎನ್‌ಐಟಿ ಕ್ಯಾಲಿಕಟ್‌ ನಿರ್ದೇಶಕರ ವಿರುದ್ದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...