Homeಮುಖಪುಟರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

ರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ, ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ ಜನವರಿ 31ರ ಬುಧವಾರದಂದು ಕೇರಳದ ಕ್ಯಾಲಿಕಟ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಸುತ್ತೋಲೆ ಹೊರಡಿಸಿದ್ದಾರೆ.

ಮಂದಿರ ಉದ್ಘಾಟನೆಯ ದಿನದಂದು ಕ್ಯಾಂಪಸ್‌ನೊಳಗೆ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿತ್ತು. ರಾಮ ಮಂದಿರ ಉದ್ಘಾಟನೆ ನಿಮಿತ್ತ ಕಾರ್ಯಕ್ರಮವನ್ನು ಆಯೋಜಿಸಿದ್ದ ಒಂದು ಗುಂಪು ಮತ್ತು ಪ್ರತಿಭಟನೆ ನಡೆಸುತ್ತಿದ್ದ ಇನ್ನೊಂದು ಗುಂಪಿನ ನಡುವೆ ಜಗಳ ನಡೆದಿತ್ತು. ಅಮಾನತುಗೊಂಡ ವಿದ್ಯಾರ್ಥಿ ಸೇರಿದಂತೆ ಪ್ರತಿಭಟನಾ ನಿರತರು ‘ಭಾರತ ರಾಮ ರಾಜ್ಯವಲ್ಲ’ ಎಂಬ ಬರಹದ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದರು.

ಡೀನ್ ಹೊರಡಿಸಿದ ಸುತ್ತೋಲೆಯಲ್ಲಿ ಸಂಸ್ಥೆಯ ಶಿಸ್ತು ಸಮಿತಿಯು ನಡೆಸಿದ ತನಿಖೆಯಲ್ಲಿ ಅಮಾನತುಗೊಂಡ ವಿದ್ಯಾರ್ಥಿಯನ್ನು ಒಳಗೊಂಡಿರುವ “ಕಾನೂನುಬಾಹಿರ ಪ್ರತಿಭಟನೆಯು ಕ್ಯಾಂಪಸ್‌ನಲ್ಲಿ ಅಶಾಂತಿಗೆ ಕಾರಣವಾಗಿದೆ. ಸಮಾಜದಲ್ಲಿ ಅಶಾಂತಿಗೆ ಪ್ರಚೋದಿಸಲು ವಿದ್ಯಾರ್ಥಿ ಕಾರಣನಾಗಿದ್ದಾನೆ. ತನ್ನ ಬೇಜವಾಬ್ದಾರಿ ವರ್ತನೆಯ ಮೂಲಕ ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ಸಂಸ್ಥೆಯ ಗೌರವವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಹೇಳಲಾಗಿದೆಯತೆ.

ಈ ಹಿಂದೆಯೂ ವಿದ್ಯಾರ್ಥಿ ಕ್ಯಾಂಪಸ್‌ನೊಳಗೆ ನಿಯಮ ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಅದು ಪುನರಾವರ್ತನೆಯಾಗಿರುವ ಹಿನ್ನೆಲೆ, ಅಮಾನತು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್‌ ಮಿನಿಟ್ ವರದಿ ಪ್ರಕಾರ, ವಿಡಿಯೋವೊಂದರಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಸೌಮ್ಯವಾದ ವಾಗ್ವಾದ ನಡೆದಿರುವುದು ಕಾಣಬಹುದು. ಎರಡು ಗುಂಪುಗಳ ಪೈಕಿ ಒಂದು ಗುಂಪಿನವರು ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ, ಮತ್ತೊಂದು ಗುಂಪಿನವರು ಇದು ‘ರಾಮ ರಾಜ್ಯವಲ್ಲ ಭಾರತ’ ಎಂಬ ಘೋಷಣೆ ಮೊಳಗಿಸಿದ್ದಾರೆ. ಆದರೆ, ಮಂದಿರ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಡೀನ್ ಆಮಾನತುಗೊಳಿಸಿದ್ದಾರೆ.

“ಡೀನ್ ಹೇಳಿದಂತೆ ಈ ಹಿಂದೆ ನನ್ನ ವಿರುದ್ದ ನಿಯಮ ಉಲ್ಲಂಘಿಸಿದ ಯಾವುದೇ ಆರೋಪಗಳಿಲ್ಲ. ಕಳೆದ ವರ್ಷ ಆರೆಸ್ಸೆಸ್ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡ ಕಾರ್ಯಕ್ರಮವೊಂದು ಕ್ಯಾಂಪಸ್‌ನಲ್ಲಿ ನಡೆದಿತ್ತು. ಅದನ್ನು ವಿರುದ್ದ ನಾವು ಉಪಸವಾಸ ಸತ್ಯಾಗ್ರಹ ನಡೆಸಿದ್ದೆವು. ಆ ವಿಚಾರವನ್ನು ಉಲ್ಲೇಖಿಸಿ ಟಾರ್ಗೆಟ್ ಮಾಡಲಾಗಿದೆ” ಎಂದು ಅಮಾನತುಗೊಂಡ ವಿದ್ಯಾರ್ಥಿ ಹೇಳಿದ್ದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದ ವಿದ್ಯಾರ್ಥಿಯನ್ನು ಜನವರಿ 30,2025 ರವರೆಗೆ ಒಂದು ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ. ಈ ಅವಧಿಯಲ್ಲಿ, ಕಾಲೇಜಿನ ಅನುಮತಿಯಿಲ್ಲದೆ ಹಾಸ್ಟೆಲ್ ಆವರಣ ಸೇರಿದಂತೆ ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.

ಡೀನ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಎನ್‌ಐಟಿ ಕ್ಯಾಲಿಕಟ್‌ ನಿರ್ದೇಶಕರ ವಿರುದ್ದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...