Homeಮುಖಪುಟಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಲಿರುವ ನೀತಾ ಅಂಬಾನಿ!

ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಲಿರುವ ನೀತಾ ಅಂಬಾನಿ!

- Advertisement -
- Advertisement -

ರಿಲಯನ್ಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿ ಶೀಘ್ರದಲ್ಲೇ ಬನಾರಸ್‌ ಹಿಂದೂ ವಿಶ್ವವಿದ್ಯಾಯಲದಲ್ಲಿ ‘ಮಹಿಳಾ ಅಧ್ಯಯನ’ವನ್ನು ಪಾಠ ಮಾಡಲಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರವು ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಲು ಅವರಿಗೆ ಪ್ರಸ್ತಾಪವನ್ನು ಕಳುಹಿಸಿದೆ. ಈ ಪ್ರಸ್ತಾಪಕ್ಕೆ ಅವರು ಮೌಖಿಕ ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ಮಾರ್ಚ್ 31ರ ವರೆಗೆ ನಿರ್ಬಂಧ

ಬನಾರಸ್‌ ಹಿಂದೂ ವಿಶ್ವವಿದ್ಯಾಯಲದ ಸಾಮಾಜ ವಿಜ್ಞಾನ ವಿಭಾಗವು ಮಾರ್ಚ್‌ 12 ರಂದು ಪ್ರಸ್ತಾಪವನ್ನು ಸಲ್ಲಿಸಿತ್ತು. ಪ್ರಸ್ತಾಪದಲ್ಲಿ, ಬನಾರಸ್ ಮತ್ತು ಪೂರ್ವಾಂಚಲ್ ಪ್ರದೇಶದ ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸಲು ಬೇಕಾಗಿ ವಿಶ್ವವಿದ್ಯಾಲಯಕ್ಕೆ ಸೇರಲು ಕೋರಲಾಗಿದೆ.

ನೀತಾ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ಅವರ ಪತ್ನಿಯಾಗಿದ್ದು, ಅವರು ಮುಂಬೈ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿದ್ದಾರೆ. 2014 ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 2010 ರಲ್ಲಿ ಅವರು ರಿಲಯನ್ಸ್ ಫೌಂಡೇಶನ್‌ ಅನ್ನು ಪ್ರಾರಂಭಿಸಿದರು.

ವಿಶ್ವವಿದ್ಯಾನಿಲಯದ ಪ್ರಕಾರ, ಅವರು ಮಹಿಳಾ ಉದ್ಯಮಿಯಾದ ಕಾರಣ ನೀತಾ ಅಂಬಾನಿಯನ್ನು ‘ಮಹಿಳಾ ಅಧ್ಯಯನ’ ಬೋಧೀಸುವುದಕ್ಕಾಗಿ ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಪ್ರಸ್ತಾಪ ಸಲ್ಲಿಸಿದ್ದಾರೆ. ಪ್ರಸ್ತಾಪದ ಪ್ರಕಾರ, ‘ರಿಲಯನ್ಸ್ ಫೌಂಡೇಶನ್ ಪೂರ್ವ ಯುಪಿಯಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸುತ್ತದೆ. ಅವರಿಗೆ ಉಪನ್ಯಾಸ ನೀಡುವುದರ ಜೊತೆಗೆ ಮಹಿಳೆಯರಿಗೂ ತರಬೇತಿ ನೀಡಲಾಗುತ್ತಿದೆ’.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಮಹಿಳಾ ಕೇಂದ್ರದ ಸಂಯೋಜಕರಾದ ಪ್ರೊ. ನಿಧಿ ಶರ್ಮಾ, “ಹೊಸ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳನ್ನು ಉದ್ಯೋಗದೊಂದಿಗೆ ಸಂಪರ್ಕ ಏರ್ಪಡಿಸುವುದು ಶಿಕ್ಷಣ ಸಂಸ್ಥೆಗಳ ಉದ್ದೇಶವಾಗಿದೆ, ಇದನ್ನು ನೀತಾ ಅಂಬಾನಿಯ ವ್ಯವಹಾರ ಅನುಭವಗಳ ಮೂಲಕ ಸಾಧಿಸಬಹುದು” ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನದಂದು, ನೀತಾ ಅಂಬಾನಿ ಮಹಿಳೆಯರನ್ನು ಸಬಲೀಕರಣಗೊಳಿಸಲು “ಹರ್ ಸರ್ಕಲ್” ಎಂಬ ಅಂತರ್ಜಾಲ ಮಾಧ್ಯಮ ವೇದಿಕೆಯನ್ನು ಪ್ರಾರಂಭಿಸಿದ್ದರು.

ಸಾಮಾಜ ವಿಜ್ಞಾನ ವಿಭಾಗದ ಡೀನ್ ಪ್ರೊ. ಕೌಶಲ್ ಮಿಶ್ರಾ, ನೀತಾ ಅಂಬಾನಿಯನ್ನು ಸಂದರ್ಶಕ ಪ್ರಾಧ್ಯಾಪಕರಾಗಿ ಇಲಾಖೆಗೆ ಸೇರಲು ಆಹ್ವಾನಿಸಲಾಗಿದೆ. ಇದರಿಂದಾಗಿ ಬಿಎಚ್‌ಯು ಸಂಶೋಧಕರು ಸಹ ಅವರ ಕೆಲಸ ಮತ್ತು ಅನುಭವದಿಂದ ಪ್ರಯೋಜನ ಪಡೆಯಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...