HomeUncategorized'ಕಸ ಈಗ ಮತ್ತೆ ತೊಟ್ಟಿಗೆ ಸೇರಿದೆ': INDIA  ಮೈತ್ರಿಕೂಟ ತೊರೆದ ನಿತೀಶ್‌ ವಿರುದ್ಧ ಪ್ರತಿಪಕ್ಷಗಳ ನಾಯಕರು...

‘ಕಸ ಈಗ ಮತ್ತೆ ತೊಟ್ಟಿಗೆ ಸೇರಿದೆ’: INDIA  ಮೈತ್ರಿಕೂಟ ತೊರೆದ ನಿತೀಶ್‌ ವಿರುದ್ಧ ಪ್ರತಿಪಕ್ಷಗಳ ನಾಯಕರು ವಾಗ್ಧಾಳಿ

- Advertisement -
- Advertisement -

INDIA  ಮೈತ್ರಿಕೂಟ ತೊರೆದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ರಾಜಭವನದಲ್ಲಿ ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸುವ ಸಾಧ್ಯತೆ ಇದೆ.

ನಿತೀಶ್ ಮೊದಲಿಗೆ 9 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲಿ ಮೂವರು ಬಿಜೆಪಿ ಮತ್ತು ಉಳಿದವರು ಜೆಡಿಯು ಶಾಸಕರಾಗಿದ್ದಾರೆ. ವಿಜಯ್ ಸಿನ್ಹಾ ಮತ್ತು ಸಾಮ್ರಾಟ್ ಚೌಧರಿ ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ.

ನಿತೀಶ್ ಅವರು ಭಾನುವಾರ ಬೆಳಗ್ಗೆ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರು ನಿತೀಶ್‌ ಕುಮಾರ್‌ಗೆ ಸೂಚಿಸಿದ್ದರು.

ಬಿಹಾರ ಸಿಎಂ ನಿತೀಶ್‌ ಕುಮಾರ್‌ INDIA ಮೈತ್ರಿಕೂಟದ ನಾಯಕರಲ್ಲಿ ಮುಂಚೂಣಿಯಲ್ಲಿದ್ದರು. ಅವರನ್ನು ಮೈತ್ರಿ ಬಣದ ಸಂಚಾಲಕರನ್ನಾಗಿ ನೇಮಿಸಲಾಗಿತ್ತು. ಆದರೆ ಇದೀಗ ನಿತೀಶ್‌ ಕುಮಾರ್‌ ತೆಗೆದುಕೊಂಡಿರುವ ನಿಲುವು ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ.

ಜೈರಾಮ್ ರಮೇಶ್ ಪ್ರತಿಕ್ರಿಯೆ:

INDIA ಬಣದಿಂದ ನಿತೀಶ್ ಕುಮಾರ್ ನಿರ್ಗಮನದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ರಾಜಕೀಯ ಪಾಲುದಾರರನ್ನು ಆಗಾಗ್ಗೆ ಬದಲಾಯಿಸುವ ನಿತೀಶ್ ಕುಮಾರ್, ಬಣ್ಣ ಬದಲಾಯಿಸುವಲ್ಲಿ ಗೋಸುಂಬೆಗಳಿಗೆ ಕಠಿಣ ಸ್ಪರ್ಧೆ ನೀಡುತ್ತಿದ್ದಾರೆ. ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಪ್ರಧಾನಿ ಮತ್ತು ಬಿಜೆಪಿ ಭಯಭೀತರಾಗಿದ್ದಾರೆ ಮತ್ತು ಅದರಿಂದ ಗಮನವನ್ನು ಬೇರೆಡೆ ಸೆಳೆಯಲು ಈ ರಾಜಕೀಯ ನಾಟಕವನ್ನು ಸೃಷ್ಟಿಸಲಾಗಿದೆ ಎಂದು ಜೈರಾಮ್‌ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒವೈಸಿ ಪ್ರತಿಕ್ರಿಯೆ

ಬಿಹಾರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ನಿತೀಶ್ ಕುಮಾರ್, ತೇಜಸ್ವಿ ಯಾದವ್ ಮತ್ತು ಪ್ರಧಾನಿ ಮೋದಿ ಬಿಹಾರದ ಜನರ ಕ್ಷಮೆಯಾಚಿಸಬೇಕು. ಈ ಮೂವರೂ ಬಿಹಾರದ ಜನರಿಗೆ, ವಿಶೇಷವಾಗಿ ನಿತೀಶ್ ಕುಮಾರ್‌ ಬಿಹಾರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದಾರೆ.

ತೇಜಸ್ವಿ ಯಾದವ್ ಅವರಿಗೆ ಈಗ ಹೇಗೆ ಅನಿಸುತ್ತದೆ ಎಂದು ನಾನು ಕೇಳಲು ಬಯಸುತ್ತೇನೆ? ಅವರು ನಮ್ಮ ನಾಲ್ವರು ಶಾಸಕರನ್ನು ಕರೆದೊಯ್ದರು. ಅವರು ಈಗ ಅದೇ ನೋವು ಅನುಭವಿಸುತ್ತಿದ್ದಾರೆಯೇ?  ನಮ್ಮನ್ನು ಆಡಿಸಿದ ರೀತಿಯಲ್ಲಿಯೇ ಈಗ ಅವರು ಆಡಿದ್ದಾರೆ. ನಿತೀಶ್ ಕುಮಾರ್ ಅವರು ಬದುಕಿರುವವರೆಗೂ ಸಿಎಂ ಆಗಬೇಕೆಂದು ಬಯಸುತ್ತಾರೆ. ಬಿಜೆಪಿಯವರು ಎಲ್ಲವನ್ನೂ ಬಯಸುತ್ತಾರೆ. ಬಿಹಾರದ ಜನರಿಗೆ ದ್ರೋಹ ಮಾಡಿದ್ದಾರೆ. ಬಿಹಾರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದಾರೆ.

ಡಿಎಂಕೆ ಪ್ರತಿಕ್ರಿಯೆ:

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಮೈತ್ರಿಯಿಂದ ನಿರ್ಗಮಿಸಿರುವುದು ಮತ್ತು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದು ಕೇಸರಿ ಪಕ್ಷಕ್ಕೆ “ನಷ್ಟ” ಮತ್ತು ವಿರೋಧ ಪಕ್ಷದ ಮೈತ್ರಿಗೆ “ಲಾಭ” ಎಂದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಹೇಳಿದೆ.

ನಿತೀಶ್ ಕುಮಾರ್ ಅವರ ಈ ನಡೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಎಂಕೆ ವಕ್ತಾರ ಜೆ ಕಾನ್‌ಸ್ಟಾಂಡೈನ್ ರವೀಂದ್ರನ್, ಜನರು ಈ ದ್ರೋಹದ ಕೃತ್ಯವನ್ನು ಎಂದಿಗೂ ಒಪ್ಪುವುದಿಲ್ಲ. ನಿತೀಶ್‌ ಕುಮಾರ್ ಬಿಹಾರದಲ್ಲಿ ಹಿರಿಯ ನಾಯಕರಾಗಿದ್ದರೂ, ಅವರು ಸಂಪೂರ್ಣವಾಗಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ, ಅವರಿಗೆ ಸಮಗ್ರತೆ ಇಲ್ಲ. ಒಬ್ಬ ನಾಯಕನಿಗೆ ಸಮಗ್ರತೆ ಮತ್ತು ವಿಶ್ವಾಸಾರ್ಹತೆ ಬಹಳ ಮುಖ್ಯ. ನಿತೀಶ್ ಕುಮಾರ್ INDIA ಬಣ ತೊರೆಯುವುದರಿಂದ ನಮಗೆ ಲಾಭ ಮತ್ತು ಇದು ಬಿಜೆಪಿಗೆ ನಷ್ಟ, ಜನರು ಸರಿಯಾದ ಸಮಯದಲ್ಲಿ ನಿತೀಶ್ ಕುಮಾರ್ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.

ಶಶಿತರೂರ್‌ ಪ್ರತಿಕ್ರಿಯೆ:

ಬಿಹಾರದ ಮಹಾಘಟಬಂಧನ್ ಸರ್ಕಾರದಿಂದ ಹೊರನಡೆದ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್, ನಿತೀಶ್‌ ಕುಮಾರ್‌ ಅವರನ್ನು ತತ್ವರಹಿತ ರಾಜಕಾರಣಿ ಎಂದು ಹೇಳಿದ್ದಾರೆ.

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಾಘೇಲ್ ಪ್ರತಿಕ್ರಿಯೆ

ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಾಘೇಲ್ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ವಿಶ್ವಾಸಾರ್ಹತೆ ಈಗ ಮುಗಿದಿದೆ. ನಿತೀಶ್ ಕುಮಾರ್ ಅವರ ಚಟುವಟಿಕೆಗಳನ್ನು ನೋಡಿ, ಅವರು ಏನನ್ನಾದರೂ ಮಾಡುತ್ತಾರೆ ಎಂದು ಜನರಿಗೆ ಅನುಮಾನವಿತ್ತು ಮತ್ತು ಅವರು ಹಾಗೆಯೇ ಮಾಡಿದ್ದಾರೆ. ಇದು ಇಂಡಿಯಾ ಒಕ್ಕೂಟವನ್ನು ದುರ್ಬಲಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಸಿಎಂ ಹುದ್ದೆಗೆ ನಿತೀಶ್‌ ಕುಮಾರ್‌ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು  ‘ಕಸ ಈಗ ಮತ್ತೆ ತೊಟ್ಟಿಗೆ ಸೇರಿದೆ’ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ನನಗೆ ತಿಳಿದಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ದೇಶದಲ್ಲಿ ಆಯಾ ರಾಮ್-ಗಯಾ ರಾಮ್ ಅವರಂತಹ ಅನೇಕ ಜನರಿದ್ದಾರೆ ಎಂದು ಹೇಳಿದ್ದಾರೆ.

ಮೊದಲು ಅವರು ಮತ್ತು ನಾವು ಒಟ್ಟಿಗೆ ಹೋರಾಡುತ್ತಿದ್ದೆವು, ನಾನು ಲಾಲು ಜಿ ಮತ್ತು ತೇಜಸ್ವಿ ಅವರೊಂದಿಗೆ ಮಾತನಾಡುವಾಗ, ಅವರು ನಿತೀಶ್ ಹೋಗುತ್ತಿದ್ದಾರೆ ಎಂದು ಹೇಳಿದರು, ಅವರು ಉಳಿಯಲು ಬಯಸಿದ್ದರೆ ಅವರು ಉಳಿಯುತ್ತಿದ್ದರು ಆದರೆ ಅವರು ಹೋಗಬೇಕೆಂದು ಬಯಸುತ್ತಾರೆ. ಈ ಮಾಹಿತಿಯನ್ನು ಈಗಾಗಲೇ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ನಮಗೆ ನೀಡಿದ್ದಾರೆ. ಇಂದು ಅದು ನಿಜವಾಯಿತು. ದೇಶದಲ್ಲಿ ಆಯಾ ರಾಮ್-ಗಯಾ ರಾಮ್ ಅವರಂತಹ ಅನೇಕ ಜನರಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...