Homeಕರ್ನಾಟಕಆರೋಗ್ಯ ಸೂಚ್ಯಂಕ: ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ಕಡೆಯ ಸ್ಥಾನದಲ್ಲಿ ಕರ್ನಾಟಕ

ಆರೋಗ್ಯ ಸೂಚ್ಯಂಕ: ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ಕಡೆಯ ಸ್ಥಾನದಲ್ಲಿ ಕರ್ನಾಟಕ

- Advertisement -
- Advertisement -

ಸೋಮವಾರ (ಡಿ.27) ರಂದು ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೇ ಕಡೆಯ ಸ್ಥಾನವನ್ನು ಪಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ಕರ್ನಾಟಕವು ತೀವ್ರ ಕುಸಿತವನ್ನು ಕಂಡಿದೆ.

ಆರೋಗ್ಯ ಮೂಲಸೌಕರ್ಯ ಏರಿಕೆಯ ಸೂಚ್ಯಂಕದಲ್ಲಿ 2018-19 ರಲ್ಲಿ ರಾಜ್ಯವು 16 ನೇ ಸ್ಥಾನದಲ್ಲಿತ್ತು ಈ ವರ್ಷ 19 ನೇ ಸ್ಥಾನಕ್ಕೆ ಕುಸಿದಿದೆ. ಒಟ್ಟಾರೆ ಆರೋಗ್ಯ ಸೂಚ್ಯಂಕದಲ್ಲಿ 8 ನೇ ಸ್ಥಾನದಿಂದ 9 ನೇ ಸ್ಥಾನಕ್ಕೆ ಕುಸಿದಿದೆ. ರಾಜ್ಯದ ಒಟ್ಟಾರೆ ಸ್ಕೋರ್ 59.29 ರಿಂದ 57.93 ಕ್ಕೆ ಕುಸಿತ ಕಂಡಿದೆ.

ನೀತಿ ಆಯೋಗವು ದೊಡ್ಡ ರಾಜ್ಯಗಳು, ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಎಂದು ವಿಂಗಡಿಸಿ ವರದಿ ಸಿದ್ಧಪಡಿಸಿದೆ. ಕರ್ನಾಟಕವನ್ನು 19 ದೊಡ್ಡ ರಾಜ್ಯಗಳಲ್ಲಿ ಬಂದಿದೆ. ನವಜಾತ ಶಿಶುಗಳ ಮರಣ ಪ್ರಮಾಣ (NMR), ಐದು ವರ್ಷದೊಳಗಿನ ಮರಣ ಪ್ರಮಾಣ (U5MR) ಮತ್ತು ಸಂಪೂರ್ಣ ರೋಗನಿರೋಧಕತೆ ಎಂಬ ಹಲವು ವಿಭಾಗಗಳಲ್ಲಿ ವರ್ಗಿಕರಿಸಿ ವರದಿ ನೀಡಲಾಗುತ್ತದೆ.

ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ಉತ್ತಮ ಆರೋಗ್ಯ ವ್ಯವಸ್ಥೆಗಳನ್ನು ಸೂಚಿಸುವ ಒಟ್ಟಾರೆ ಕಾರ್ಯಕ್ಷಮತೆಯ ದೃಷ್ಟಿಯಿಂದ ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಹರಿಯಾಣ ದೊಡ್ಡ ರಾಜ್ಯಗಳಲ್ಲಿ ಮೂರನೇ ಒಂದು ಭಾಗವಾಗಿವೆ ಎಂದು ವರದಿ ಹೇಳಿದೆ, ಆದರೆ ಕಳೆದ ವರ್ಷ 2018-19ದಿಂದ 2019- 20 ರವರೆಗೆ ನೆಗೆಟಿವ್ ಕಾರ್ಯಕ್ಷಮತೆಯನ್ನು ಹೊಂದಿದೆ.

ರಾಜ್ಯವನ್ನು ಒಟ್ಟಾರೆ ‘ಸಾಧಕರು’ ವಿಭಾಗದಲ್ಲಿ ವರ್ಗೀಕರಿಸಲಾಗಿದೆ. ಆದರೆ ಹೆಚ್ಚುತ್ತಿರುವ ಮೂಲ ಸೌಕರ್ಯಗಳ ಕಾರ್ಯಕ್ಷಮತೆಯಲ್ಲಿ ‘ಸುಧಾರಿತವಾಗಿಲ್ಲ’ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಜನನದ ಸಮಯದಲ್ಲಿ ಲಿಂಗ ಅನುಪಾತದಲ್ಲಿ ನಿರಂತರ ಕುಸಿತವಾಗಿದೆ ಎಂದು ವರದಿ ಹೇಳುತ್ತದೆ

“ಕರ್ನಾಟಕವನ್ನು ಹೊರತುಪಡಿಸಿ, ಎಲ್ಲಾ ದಕ್ಷಿಣ ರಾಜ್ಯಗಳು ಕಳೆದ 2018-19 ವರ್ಷ ಮತ್ತು ವರದಿಯ ಉಲ್ಲೇಖಿತ ವರ್ಷ 2019-20 ನಡುವೆ ಸಂಯೋಜಿತ ಸೂಚ್ಯಂಕ ಅಂಶಗಳಲ್ಲಿ ಸುಧಾರಣೆಯನ್ನು ತೋರಿಸಿವೆ” ಎಂದು ನೀತಿ ಆಯೋಗ ತಿಳಿಸಿದೆ.

ದೊಡ್ಡ ರಾಜ್ಯಗಳ ಪೈಕಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರಸ್ಥಾನದಲ್ಲಿದೆ. ಆದರೆ ಉತ್ತರ ಪ್ರದೇಶ ರಾಜ್ಯವು ಆರೋಗ್ಯ ಕ್ಷಮತೆಯಲ್ಲಿ ಕಡೆಯ ಸ್ಥಾನದಲ್ಲಿದೆ.


ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...