Homeಮುಖಪುಟಐದು ವರ್ಷಗಳ ತಮ್ಮ ಸಚಿವಾಲಯದ ವೈಫಲ್ಯವನ್ನು ಒಪ್ಪಿಕೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

ಐದು ವರ್ಷಗಳ ತಮ್ಮ ಸಚಿವಾಲಯದ ವೈಫಲ್ಯವನ್ನು ಒಪ್ಪಿಕೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

- Advertisement -
- Advertisement -

ದೇಶಾದ್ಯಂತ ರಸ್ತೆ ಅಪಘಾತಗಳು ಮತ್ತು ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ತಮ್ಮ ಸಚಿವಾಲಯದ ಅಸಮರ್ಥತೆಯು ಕಳೆದ ಐದು ವರ್ಷಗಳಲ್ಲಿ ಅತಿದೊಡ್ಡ ವೈಫಲ್ಯವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒಪ್ಪಿಕೊಂಡಿದ್ದಾರೆ.

ಮಿಂಟ್ ಐಡಿಯಾ ಹೂಡಿಕೆ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ರಸ್ತೆ ಅಪಘಾತದಿಂದಾಗಿ ಭಾರತವು ಪ್ರತಿವರ್ಷ ಜಿಡಿಪಿಯ 2% ನಷ್ಟವನ್ನು ಕಳೆದುಕೊಳ್ಳುತ್ತಿದೆ ಎಂದ ಅವರು ಸಂಖ್ಯೆಯಲ್ಲಿ ಅಲ್ಪ ಕುಸಿತದ ಹೊರತಾಗಿಯೂ ಪರಿಸ್ಥಿತಿ ಭೀಕರವಾಗಿದೆ ಎಂದರು.

ವಿಶ್ವ ರಸ್ತೆ ಅಂಕಿಅಂಶ 2018 ರಲ್ಲಿ ವರದಿಯಾದ ಪ್ರಕಾರ 199 ದೇಶಗಳ ರಸ್ತೆ ಅಪಘಾತ ಸಾವುಗಳ ಸಂಖ್ಯೆಯಲ್ಲಿ ಭಾರತವು ಚೀನಾ ಮತ್ತು ಯುಎಸ್ ನಂತರದ ಮೂರನೇಯ ಸ್ಥಾನದಲ್ಲಿದೆ. ರಸ್ತೆ ಸುರಕ್ಷತೆ 2018 ರ ಡಬ್ಲ್ಯುಎಚ್‌ಒ ಜಾಗತಿಕ ವರದಿಯ ಪ್ರಕಾರ ವಿಶ್ವದಾದ್ಯಂತ ಅಪಘಾತಗಳಿಂದಾದ ಸಾವುಗಳಲ್ಲಿ ಭಾರತದ ಪಾಲು 11% ಇದೆ.

ಗಡ್ಕರಿ “ಪ್ರಸ್ತುತ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ನಾವು ಪ್ರತಿ ವರ್ಷ 5 ಲಕ್ಷ ಅಪಘಾತಗಳನ್ನು ಮತ್ತು 1.5 ಲಕ್ಷ ಸಾವುಗಳನ್ನು ಎದುರಿಸುತ್ತಿದ್ದೇವೆ. ಕಳೆದ 3 ತಿಂಗಳಲ್ಲಿ ಮೊದಲ ಬಾರಿಗೆ ಇದು ಶೇಕಡಾವಾರು ಕಡಿಮೆಯಾಗಿದೆ. ಆದರೆ ಕಳೆದ 5 ವರ್ಷಗಳಲ್ಲಿ ಒಂದು ದೊಡ್ಡ ವೈಫಲ್ಯವೆಂದರೆ, ಅಪಘಾತಗಳು ಮತ್ತು ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ. ಈ ಅಪಘಾತಗಳಿಂದಾಗಿಯೇ ನಮ್ಮ ಜಿಡಿಪಿಯ 2% ನಷ್ಟವಾಗುತ್ತಿದೆ” ಎಂದರು.

ಭಾರತದಲ್ಲಿ ರಸ್ತೆ ಅಪಘಾತಗಳು 2018 ರ ವರದಿಯ ಪ್ರಕಾರ ದೇಶಾದ್ಯಂತ 4,67,044 ರಸ್ತೆ ಅಪಘಾತಗಳು ಸಂಭವಿಸಿದೆ. ಅಪಘಾತಗಳಲ್ಲಿ ಪ್ರತಿ ಗಂಟೆಗೆ 17 ಜನರು ಸಾವನ್ನಪ್ಪುತ್ತಾರೆ.

ಭವಿಷ್ಯದಲ್ಲಿ ಅಫಘಾತಗಳ ಸಂಖ್ಯೆಯನ್ನು ಕಡಿತಗೊಳಿಸುವ ಒಂದು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವನ್ನು ಗಡ್ಕರಿ ಒತ್ತಿ ಹೇಳಿದರು. ಅವರು “ನಮ್ಮ ದೇಶದಲ್ಲಿ 52 ಲಕ್ಷ ಕಿ.ಮೀ ಉದ್ದದ ರಸ್ತೆಯದೆ, ಅದರಲ್ಲಿ 96,000 ಕಿ.ಮೀ ಮಾತ್ರ ರಾಷ್ಟ್ರೀಯ ಹೆದ್ದಾರಿ. ದೇಶದ 40% ದಟ್ಟಣೆಯು 2% ರಸ್ತೆಗಳಲ್ಲಿದೆ. ರಾಷ್ಟ್ರೀಯ ಹೆದ್ದಾರಿಗಳ ಉದ್ದವನ್ನು 2 ಲಕ್ಷ ಕಿ.ಮೀ.ಗೆ ಹೆಚ್ಚಿಸಲು ನಾವು ನಿರ್ಧರಿಸಿದ್ದೇವೆ. ಮುಂದಿನ 5 ವರ್ಷಗಳಲ್ಲಿ ದಟ್ಟಣೆಯ 80% ಹೆದ್ದಾರಿಗಳಲ್ಲಿರುತ್ತದೆ ಎಂದು ನನಗೆ ವಿಶ್ವಾಸವಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...