Homeಮುಖಪುಟಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

'ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚುತ್ತಿದೆ' ಎಂದಿದ್ದ ಕೇಂದ್ರ ಸಚಿವ

- Advertisement -
- Advertisement -

ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚುತ್ತಿದೆ, ಸಂಪತ್ತು ಕೆಲವೇ ಮಂದಿಯ ಪಾಲಾಗುತ್ತಿದೆ ಎಂದಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. “ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ” ಎಂದಿದ್ದಾರೆ.

ಗಡ್ಕರಿ ಹೇಳಿಕೆಯ ಪತ್ರಿಕಾ ವರದಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹರಿಪ್ರಸಾದ್, ” ದೇಶದಲ್ಲಿ ಬಡವರ ಸಂಖ್ಯೆ ಮಿತಿ ಮೀರಿ ಹೆಚ್ಚುತ್ತಿರುವುದರ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸತ್ಯ ಒಪ್ಪಿಕೊಂಡಿದ್ದಕ್ಕೆ ಸ್ವಾಗತ, ಆದ್ರೆ ವಾಸ್ತವವನ್ನು ಮರೆಮಾಚುತ್ತಲೇ ಬಡತನಕ್ಕೆ ದೂಡಿದವರ ಬಗ್ಗೆಯೂ ಮಾತಾಡಿದ್ದರೆ ಸನ್ಮಾನಕ್ಕೂ ಅರ್ಹರಾಗುತ್ತಿದ್ದರು” ಎಂದು ಕುಟುಕಿದ್ದಾರೆ.

2011–12ರಲ್ಲಿ ದೇಶದಲ್ಲಿ, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 27 ಕೋಟಿ ಎಂದು ಅಂದಾಜಿಸಲಾಗಿತ್ತು. ಆದರೆ ಇದೇ ಜನವರಿಯಲ್ಲಿ ಬಿಡುಗಡೆ ಮಾಡಿದ ಬಹು ಆಯಾಮದ ಬಡತನ ಸೂಚ್ಯಂಕ: ಪ್ರಗತಿ ಪರಿಶೀಲನೆ ವರದಿಯಲ್ಲಿ, 2013–14 ಮತ್ತು 2022–23ರ ನಡುವೆ ದೇಶದ 24.28 ಕೋಟಿ ಜನರು ಬಹು ಆಯಾಮದ ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ಘೋಷಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಕೇಂದ್ರದ ಹಲವು ಸಚಿವರು ಮತ್ತು ಬಿಜೆಪಿ ನಾಯಕರು ಈ ಘೋಷಣೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದೇ ಸಾಧನೆ. ಆದರೆ ಎಲ್ಲಿಯೂ ಅಪ್ಪಿತಪ್ಪಿ ದೇಶದಲ್ಲಿ ಈಗ ಇರುವ ಬಡವರೆಷ್ಟು ಎಂಬುದನ್ನು ಮಾತ್ರ ಹೇಳಿರಲಿಲ್ಲ. ಸತ್ಯವನ್ನು ಮರೆಮಾಚಿದ್ದು ಯಾರು? ಯಾಕೆ? ಎನ್ನುವ ಪ್ರಶ್ನೆಗಳಿಗೆ ಈ ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುವ ಷೇರುದಾರರು ಉತ್ತರಿಸಲೇ ಇಲ್ಲ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಾರತದಲ್ಲಿ ಬಡತನವನ್ನು ‘ಬಡತನ ರೇಖೆ’ಯ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು. ಬಡತನ ರೇಖೆ ಎಂದರೆ ಗ್ರಾಮೀಣ ಕುಟುಂಬವೊಂದು ತಿಂಗಳೊಂದರಲ್ಲಿ ರೂ. 816 ಮತ್ತು ನಗರ ಪ್ರದೇಶದ ಕುಟುಂಬವೊಂದು ತಿಂಗಳೊಂದರಲ್ಲಿ ರೂ.1,000 ವೆಚ್ಚ ಮಾಡಲು ಸಾಧ್ಯವಾಗದಿದ್ದರೆ, ಅದನ್ನು ಬಡತನದ ರೇಖೆಗಿಂತ ಕೆಳಗೆ ಇರುವ ಕುಟುಂಬ ಎಂದು ಪರಿಗಣಿಸಲಾಗುತ್ತಿತ್ತು (2011–12ರಲ್ಲಿ). ಆದರೆ ಈಗ ಸರ್ಕಾರವು ಈ ಲೆಕ್ಕಾಚಾರವನ್ನೇ ಬಿಟ್ಟಿದೆ ಎಂದಿದ್ದಾರೆ.

ತಿನ್ನಲು ಪೌಷ್ಟಿಕ ಅನ್ನವಿಲ್ಲದಿದ್ದರೂ ಕೇವಲ ಸೈಕಲ್ ಹೊಂದಿದ್ದರೆ ಬಡತನ ಆಯಾಮಗಳಿಂದ ಹೊರಗಿಟ್ಟಿರುವ ಕೇಂದ್ರದ ನೀತಿಯೇ ಅತ್ಯಂತ ಅವೈಜ್ಞಾನಿಕ. ಇನ್ನೊಂದೆಡೆ ಮೂರೊತ್ತು ಊಟ ಇಲ್ಲದಿದ್ದರೂ, ಸ್ವಂತ ಮನೆ ಇಲ್ಲದೆ, ಕುಡಿಯುವ ನೀರಿನ ಸಂಪರ್ಕವೂ ಇಲ್ಲದೆ, ಆದರೆ ಆ ಕುಟುಂಬವು ಸರ್ಕಾರ ಉಚಿತವಾಗಿ ನೀಡುವ ಅಡುಗೆ ಅನಿಲ ಸಂಪರ್ಕ ಹೊಂದಿದ ಕಾರಣಕ್ಕಾಗಿ ಸರ್ಕಾರದ ದೃಷ್ಟಿಯಲ್ಲಿ ಬಡತನದಿಂದ ಹೊರಗುಳಿದಿರುವುದು ಅವೈಜ್ಞಾನಿಕ ಮಾತ್ರವಲ್ಲ, ಅಂತಃಕರಣವೇ ಇಲ್ಲದ್ದು ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಹಿಂದೆಂದೂ ಇಲ್ಲದ ರೀತಿಯಲ್ಲಿ ಆರ್ಥಿಕ ಅಸಮಾನತೆ ಹೆಚ್ಚಾಗಿದ್ದು, ಉಳ್ಳವರು ಮತ್ತು ಇಲ್ಲದವರ ನಡುವೆ ಬೃಹತ್ ಕಂದಕ ಸೃಷ್ಟಿಯಾಗಿದೆ. ಶತಕೋಟ್ಯಧಿಪತಿಗಳು ರಾಜಕೀಯ ಪ್ರಭಾವವನ್ನೂ ಬೆಳೆಸಿಕೊಂಡಿದ್ದಾರೆ ಎಂದು “ಆಕ್ಸ್‌ಫಾಮ್” ಸಂಸ್ಥೆಯೂ ಭಾರತದ ಅಸಮಾನತೆ ಕುರಿತ ವರದಿ ಮಾಡಿದೆ. ಸಾರ್ವಜನಿಕರ ಬೃಹತ್ ಮೊತ್ತದ ಹಣಕ್ಕೆ ಅಪಾಯ ಎದುರಾಗಿದೆ. ನೀತಿ ನಿರೂಪಕರು ತಮ್ಮ ಉದ್ಯಮಿ ಸ್ನೇಹಿತರು ಮತ್ತು ಇತರರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಭ್ರಷ್ಟಾಚಾರ ಹೆಚ್ಚಾಗಿದ್ದು, ಸರ್ಕಾರಗಳ ಆಡಳಿತದಲ್ಲಿ ಉದ್ಯಮಿಗಳ ಪಾತ್ರವೂ ಹೆಚ್ಚಾಗುತ್ತಿದೆ ಎಂದು ವರದಿ ಮಾಡಿದೆ. ಹಾಗಾದರೆ ಯಾರೂ ಆ ಮೋದಾನಿಗಳು? ಯಾರು ಆ ಕೇಲವೇ ಕೆಲವು ಶತಕೋಟ್ಯಾಧೀಶ್ವರರು? ಎಂಬ ಪ್ರಶ್ನೆಗಳಿಗೆ ಗಡ್ಕರಿಯವರ ಬಳಿ ಉತ್ತರವಂತೂ ಇರಬಹುದು, ಆದರೆ ಸತ್ಯ ಹೇಳುವ ಎದೆಗಾರಿಕೆ ಪ್ರದರ್ಶಿಸುತ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರವೇ ಈ ಹಿಂದೆ ಹೇಳಿದಂತೆ 24.28 ಕೋಟಿ ಜನರು ಬಹು ಆಯಾಮದ ಬಡತನದಿಂದ ಹೊರಗೆ ಬಂದಿದ್ದರೆ, ಉಳಿದ ಬಡವರೆಷ್ಟು ಎಂಬ ಪ್ರಶ್ನೆ ಮೂಡುತ್ತದೆ. 2011–12ರಲ್ಲಿ 27 ಕೋಟಿಯಷ್ಟು ಇದ್ದ ಕಡುಬಡವರಲ್ಲಿ, 24.28 ಕೋಟಿಯನ್ನು ಕಳೆದರೆ 2.72 ಕೋಟಿಯಷ್ಟು ಬಡವರು ಉಳಿಯುತ್ತಾರೆ. ಅಂದರೆ ದೇಶದಲ್ಲಿರುವ ಬಡವರ ಸಂಖ್ಯೆ ಕೇವಲ 2.72 ಕೋಟಿಯೇ.? ಖಂಡಿತ ಇಲ್ಲ. ದೇಶದ ಅಧಿಕೃತ ಜನಸಂಖ್ಯೆಗೆ (2011ರ ಜನಗಣತಿಯಂತೆ 126 ಕೋಟಿ) ಹೋಲಿಸಿದರೆ, 2.72 ಕೋಟಿ ಜನರ ಪ್ರಮಾಣವು ಶೇ 2.1ರಷ್ಟು ಮಾತ್ರ. ಆದರೆ ಜನವರಿಯಲ್ಲಿ ಬಿಡುಗಡೆ ಮಾಡಿದ್ದ ವರದಿಯಲ್ಲಿ ನೀತಿ ಆಯೋಗವು, ‘ಇನ್ನೂ ಶೇ 11.28ರಷ್ಟು ಜನರು ಬಹು ಆಯಾಮದ ಬಡವರಿದ್ದಾರೆ’ ಎಂದು ಹೇಳಿತ್ತು. 126 ಕೋಟಿ ಜನರಲ್ಲಿ ಶೇ 11.28ರಷ್ಟು ಅಂದರೆ, ಅದು 14.2 ಕೋಟಿಯಷ್ಟಾಗುತ್ತದೆ. 2011ರ ಜನಗಣತಿಯ ಸಂಖ್ಯೆಯ ಪ್ರಕಾರ ದೇಶದಲ್ಲಿ 14.2 ಕೋಟಿ ಜನ ಬಹು ಆಯಾಮದ ಬಡವರಿದ್ದಾರೆ. ಅಂದರೆ ಈ ಸರ್ಕಾರದ ಅವಧಿಯಲ್ಲಿ 24 ಕೋಟಿಗೂ ಹೆಚ್ಚು ಜನರು ಬಹು ಆಯಾಮದ ಬಡತನದಿಂದ ಹೊರಗೆ ಬಂದಿದ್ದರೂ, 12 ಕೋಟಿಗೂ ಹೆಚ್ಚು ಜನರು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. ಈ ಸತ್ಯವನ್ನು ದೇಶದ ಜನರೆದುರು ಒಪ್ಪಿಕೊಳ್ಳದೆ ಮರೆ ಮಾಚಿರುವುದೇ ಮೋದಿ ಸರ್ಕಾರದ ಸಾಧನೆ ಎಂದು ಟೀಕಿಸಿದ್ದಾರೆ.

ದೇಶದ ಬಡ ಜನರ ಬದುಕನ್ನು ಮೇಲೆಕ್ಕೆತ್ತಲು ಮೂಲ ಪರಿಹಾರ ಇರುವುದೇ ಜಾತಿ ಹಾಗೂ ಜನಗಣತಿಯಲ್ಲಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಗಣತಿಯಿಂದಾಗಿ ದೇಶದ ವಾಸ್ತವ ಸ್ಥಿತಿ ತೆರೆದಿಡುತ್ತದೆ. ಆಗ ಮಾತ್ರ ಸರ್ಕಾರ ತುಳಿತಕ್ಕೊಳಗಾದವರ, ಹಿಂದುಳಿದ ಹಾಗೂ ಎಲ್ಲಾ ಸಮುದಾಯಗಳಲ್ಲಿರುವ ಬಡ ಕುಟುಂಬಗಳನ್ನು ಏಳಿಗೆ ಮಾಡಲು ಸಾಧ್ಯ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಜಾತಿ ಹಾಗೂ ಜನಗಣತಿಯನ್ನು ಒತ್ತಾಯಿಸುತ್ತಿರುವುದು. ಸಮಸ್ಯೆಯ ಮೂಲ ಹುಡುಕದೆ ಪರಿಹಾರ ನೀಡಲು ಸಾಧ್ಯವಿಲ್ಲ. ಸರ್ಕಾರ ಈಗಲಾದರೂ ಗಣತಿ ನಡೆಸಿ ದೇಶದ ಕಟ್ಟಕಡೆಯ ಕುಟುಂಬಕ್ಕೂ ಸರ್ಕಾರದ ಸವಲತ್ತು ಸಿಗುವಂತಾಗಲಿ ಎಂದು ಒತ್ತಾಯಿಸುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...