Homeಮುಖಪುಟಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

'ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚುತ್ತಿದೆ' ಎಂದಿದ್ದ ಕೇಂದ್ರ ಸಚಿವ

- Advertisement -
- Advertisement -

ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚುತ್ತಿದೆ, ಸಂಪತ್ತು ಕೆಲವೇ ಮಂದಿಯ ಪಾಲಾಗುತ್ತಿದೆ ಎಂದಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. “ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ” ಎಂದಿದ್ದಾರೆ.

ಗಡ್ಕರಿ ಹೇಳಿಕೆಯ ಪತ್ರಿಕಾ ವರದಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹರಿಪ್ರಸಾದ್, ” ದೇಶದಲ್ಲಿ ಬಡವರ ಸಂಖ್ಯೆ ಮಿತಿ ಮೀರಿ ಹೆಚ್ಚುತ್ತಿರುವುದರ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸತ್ಯ ಒಪ್ಪಿಕೊಂಡಿದ್ದಕ್ಕೆ ಸ್ವಾಗತ, ಆದ್ರೆ ವಾಸ್ತವವನ್ನು ಮರೆಮಾಚುತ್ತಲೇ ಬಡತನಕ್ಕೆ ದೂಡಿದವರ ಬಗ್ಗೆಯೂ ಮಾತಾಡಿದ್ದರೆ ಸನ್ಮಾನಕ್ಕೂ ಅರ್ಹರಾಗುತ್ತಿದ್ದರು” ಎಂದು ಕುಟುಕಿದ್ದಾರೆ.

2011–12ರಲ್ಲಿ ದೇಶದಲ್ಲಿ, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 27 ಕೋಟಿ ಎಂದು ಅಂದಾಜಿಸಲಾಗಿತ್ತು. ಆದರೆ ಇದೇ ಜನವರಿಯಲ್ಲಿ ಬಿಡುಗಡೆ ಮಾಡಿದ ಬಹು ಆಯಾಮದ ಬಡತನ ಸೂಚ್ಯಂಕ: ಪ್ರಗತಿ ಪರಿಶೀಲನೆ ವರದಿಯಲ್ಲಿ, 2013–14 ಮತ್ತು 2022–23ರ ನಡುವೆ ದೇಶದ 24.28 ಕೋಟಿ ಜನರು ಬಹು ಆಯಾಮದ ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ಘೋಷಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಕೇಂದ್ರದ ಹಲವು ಸಚಿವರು ಮತ್ತು ಬಿಜೆಪಿ ನಾಯಕರು ಈ ಘೋಷಣೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದೇ ಸಾಧನೆ. ಆದರೆ ಎಲ್ಲಿಯೂ ಅಪ್ಪಿತಪ್ಪಿ ದೇಶದಲ್ಲಿ ಈಗ ಇರುವ ಬಡವರೆಷ್ಟು ಎಂಬುದನ್ನು ಮಾತ್ರ ಹೇಳಿರಲಿಲ್ಲ. ಸತ್ಯವನ್ನು ಮರೆಮಾಚಿದ್ದು ಯಾರು? ಯಾಕೆ? ಎನ್ನುವ ಪ್ರಶ್ನೆಗಳಿಗೆ ಈ ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುವ ಷೇರುದಾರರು ಉತ್ತರಿಸಲೇ ಇಲ್ಲ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಾರತದಲ್ಲಿ ಬಡತನವನ್ನು ‘ಬಡತನ ರೇಖೆ’ಯ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು. ಬಡತನ ರೇಖೆ ಎಂದರೆ ಗ್ರಾಮೀಣ ಕುಟುಂಬವೊಂದು ತಿಂಗಳೊಂದರಲ್ಲಿ ರೂ. 816 ಮತ್ತು ನಗರ ಪ್ರದೇಶದ ಕುಟುಂಬವೊಂದು ತಿಂಗಳೊಂದರಲ್ಲಿ ರೂ.1,000 ವೆಚ್ಚ ಮಾಡಲು ಸಾಧ್ಯವಾಗದಿದ್ದರೆ, ಅದನ್ನು ಬಡತನದ ರೇಖೆಗಿಂತ ಕೆಳಗೆ ಇರುವ ಕುಟುಂಬ ಎಂದು ಪರಿಗಣಿಸಲಾಗುತ್ತಿತ್ತು (2011–12ರಲ್ಲಿ). ಆದರೆ ಈಗ ಸರ್ಕಾರವು ಈ ಲೆಕ್ಕಾಚಾರವನ್ನೇ ಬಿಟ್ಟಿದೆ ಎಂದಿದ್ದಾರೆ.

ತಿನ್ನಲು ಪೌಷ್ಟಿಕ ಅನ್ನವಿಲ್ಲದಿದ್ದರೂ ಕೇವಲ ಸೈಕಲ್ ಹೊಂದಿದ್ದರೆ ಬಡತನ ಆಯಾಮಗಳಿಂದ ಹೊರಗಿಟ್ಟಿರುವ ಕೇಂದ್ರದ ನೀತಿಯೇ ಅತ್ಯಂತ ಅವೈಜ್ಞಾನಿಕ. ಇನ್ನೊಂದೆಡೆ ಮೂರೊತ್ತು ಊಟ ಇಲ್ಲದಿದ್ದರೂ, ಸ್ವಂತ ಮನೆ ಇಲ್ಲದೆ, ಕುಡಿಯುವ ನೀರಿನ ಸಂಪರ್ಕವೂ ಇಲ್ಲದೆ, ಆದರೆ ಆ ಕುಟುಂಬವು ಸರ್ಕಾರ ಉಚಿತವಾಗಿ ನೀಡುವ ಅಡುಗೆ ಅನಿಲ ಸಂಪರ್ಕ ಹೊಂದಿದ ಕಾರಣಕ್ಕಾಗಿ ಸರ್ಕಾರದ ದೃಷ್ಟಿಯಲ್ಲಿ ಬಡತನದಿಂದ ಹೊರಗುಳಿದಿರುವುದು ಅವೈಜ್ಞಾನಿಕ ಮಾತ್ರವಲ್ಲ, ಅಂತಃಕರಣವೇ ಇಲ್ಲದ್ದು ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಹಿಂದೆಂದೂ ಇಲ್ಲದ ರೀತಿಯಲ್ಲಿ ಆರ್ಥಿಕ ಅಸಮಾನತೆ ಹೆಚ್ಚಾಗಿದ್ದು, ಉಳ್ಳವರು ಮತ್ತು ಇಲ್ಲದವರ ನಡುವೆ ಬೃಹತ್ ಕಂದಕ ಸೃಷ್ಟಿಯಾಗಿದೆ. ಶತಕೋಟ್ಯಧಿಪತಿಗಳು ರಾಜಕೀಯ ಪ್ರಭಾವವನ್ನೂ ಬೆಳೆಸಿಕೊಂಡಿದ್ದಾರೆ ಎಂದು “ಆಕ್ಸ್‌ಫಾಮ್” ಸಂಸ್ಥೆಯೂ ಭಾರತದ ಅಸಮಾನತೆ ಕುರಿತ ವರದಿ ಮಾಡಿದೆ. ಸಾರ್ವಜನಿಕರ ಬೃಹತ್ ಮೊತ್ತದ ಹಣಕ್ಕೆ ಅಪಾಯ ಎದುರಾಗಿದೆ. ನೀತಿ ನಿರೂಪಕರು ತಮ್ಮ ಉದ್ಯಮಿ ಸ್ನೇಹಿತರು ಮತ್ತು ಇತರರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಭ್ರಷ್ಟಾಚಾರ ಹೆಚ್ಚಾಗಿದ್ದು, ಸರ್ಕಾರಗಳ ಆಡಳಿತದಲ್ಲಿ ಉದ್ಯಮಿಗಳ ಪಾತ್ರವೂ ಹೆಚ್ಚಾಗುತ್ತಿದೆ ಎಂದು ವರದಿ ಮಾಡಿದೆ. ಹಾಗಾದರೆ ಯಾರೂ ಆ ಮೋದಾನಿಗಳು? ಯಾರು ಆ ಕೇಲವೇ ಕೆಲವು ಶತಕೋಟ್ಯಾಧೀಶ್ವರರು? ಎಂಬ ಪ್ರಶ್ನೆಗಳಿಗೆ ಗಡ್ಕರಿಯವರ ಬಳಿ ಉತ್ತರವಂತೂ ಇರಬಹುದು, ಆದರೆ ಸತ್ಯ ಹೇಳುವ ಎದೆಗಾರಿಕೆ ಪ್ರದರ್ಶಿಸುತ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರವೇ ಈ ಹಿಂದೆ ಹೇಳಿದಂತೆ 24.28 ಕೋಟಿ ಜನರು ಬಹು ಆಯಾಮದ ಬಡತನದಿಂದ ಹೊರಗೆ ಬಂದಿದ್ದರೆ, ಉಳಿದ ಬಡವರೆಷ್ಟು ಎಂಬ ಪ್ರಶ್ನೆ ಮೂಡುತ್ತದೆ. 2011–12ರಲ್ಲಿ 27 ಕೋಟಿಯಷ್ಟು ಇದ್ದ ಕಡುಬಡವರಲ್ಲಿ, 24.28 ಕೋಟಿಯನ್ನು ಕಳೆದರೆ 2.72 ಕೋಟಿಯಷ್ಟು ಬಡವರು ಉಳಿಯುತ್ತಾರೆ. ಅಂದರೆ ದೇಶದಲ್ಲಿರುವ ಬಡವರ ಸಂಖ್ಯೆ ಕೇವಲ 2.72 ಕೋಟಿಯೇ.? ಖಂಡಿತ ಇಲ್ಲ. ದೇಶದ ಅಧಿಕೃತ ಜನಸಂಖ್ಯೆಗೆ (2011ರ ಜನಗಣತಿಯಂತೆ 126 ಕೋಟಿ) ಹೋಲಿಸಿದರೆ, 2.72 ಕೋಟಿ ಜನರ ಪ್ರಮಾಣವು ಶೇ 2.1ರಷ್ಟು ಮಾತ್ರ. ಆದರೆ ಜನವರಿಯಲ್ಲಿ ಬಿಡುಗಡೆ ಮಾಡಿದ್ದ ವರದಿಯಲ್ಲಿ ನೀತಿ ಆಯೋಗವು, ‘ಇನ್ನೂ ಶೇ 11.28ರಷ್ಟು ಜನರು ಬಹು ಆಯಾಮದ ಬಡವರಿದ್ದಾರೆ’ ಎಂದು ಹೇಳಿತ್ತು. 126 ಕೋಟಿ ಜನರಲ್ಲಿ ಶೇ 11.28ರಷ್ಟು ಅಂದರೆ, ಅದು 14.2 ಕೋಟಿಯಷ್ಟಾಗುತ್ತದೆ. 2011ರ ಜನಗಣತಿಯ ಸಂಖ್ಯೆಯ ಪ್ರಕಾರ ದೇಶದಲ್ಲಿ 14.2 ಕೋಟಿ ಜನ ಬಹು ಆಯಾಮದ ಬಡವರಿದ್ದಾರೆ. ಅಂದರೆ ಈ ಸರ್ಕಾರದ ಅವಧಿಯಲ್ಲಿ 24 ಕೋಟಿಗೂ ಹೆಚ್ಚು ಜನರು ಬಹು ಆಯಾಮದ ಬಡತನದಿಂದ ಹೊರಗೆ ಬಂದಿದ್ದರೂ, 12 ಕೋಟಿಗೂ ಹೆಚ್ಚು ಜನರು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. ಈ ಸತ್ಯವನ್ನು ದೇಶದ ಜನರೆದುರು ಒಪ್ಪಿಕೊಳ್ಳದೆ ಮರೆ ಮಾಚಿರುವುದೇ ಮೋದಿ ಸರ್ಕಾರದ ಸಾಧನೆ ಎಂದು ಟೀಕಿಸಿದ್ದಾರೆ.

ದೇಶದ ಬಡ ಜನರ ಬದುಕನ್ನು ಮೇಲೆಕ್ಕೆತ್ತಲು ಮೂಲ ಪರಿಹಾರ ಇರುವುದೇ ಜಾತಿ ಹಾಗೂ ಜನಗಣತಿಯಲ್ಲಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಗಣತಿಯಿಂದಾಗಿ ದೇಶದ ವಾಸ್ತವ ಸ್ಥಿತಿ ತೆರೆದಿಡುತ್ತದೆ. ಆಗ ಮಾತ್ರ ಸರ್ಕಾರ ತುಳಿತಕ್ಕೊಳಗಾದವರ, ಹಿಂದುಳಿದ ಹಾಗೂ ಎಲ್ಲಾ ಸಮುದಾಯಗಳಲ್ಲಿರುವ ಬಡ ಕುಟುಂಬಗಳನ್ನು ಏಳಿಗೆ ಮಾಡಲು ಸಾಧ್ಯ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಜಾತಿ ಹಾಗೂ ಜನಗಣತಿಯನ್ನು ಒತ್ತಾಯಿಸುತ್ತಿರುವುದು. ಸಮಸ್ಯೆಯ ಮೂಲ ಹುಡುಕದೆ ಪರಿಹಾರ ನೀಡಲು ಸಾಧ್ಯವಿಲ್ಲ. ಸರ್ಕಾರ ಈಗಲಾದರೂ ಗಣತಿ ನಡೆಸಿ ದೇಶದ ಕಟ್ಟಕಡೆಯ ಕುಟುಂಬಕ್ಕೂ ಸರ್ಕಾರದ ಸವಲತ್ತು ಸಿಗುವಂತಾಗಲಿ ಎಂದು ಒತ್ತಾಯಿಸುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...