Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...