Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...