Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...