Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...