Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...