Homeಮುಖಪುಟಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

ಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ, ಬಿಹಾರದ ಸರ್ಕಾರಿ ಉದ್ಯೋಗಗಳ ಪ್ರತಿಯೊಂದು ವರ್ಗದ ಎಲ್ಲ ಹುದ್ದೆಗಳಲ್ಲಿ ಶೇಕಡಾ 35 ರಷ್ಟು ಬಿಹಾರದ ಖಾಯಂ ನಿವಾಸಿ ಮಹಿಳೆಯರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ.

“ಎಲ್ಲ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಎಲ್ಲ ವರ್ಗಗಳು, ಹಂತಗಳು ಮತ್ತು ಪ್ರಕಾರದ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಬಿಹಾರದ ಮೂಲ ನಿವಾಸಿಗಳಾದ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ 35% ಮೀಸಲಾತಿ” ಎಂದು ನಿತೀಶ್ ಕುಮಾರ್ ಹೇಳಿದರು.

ಎಲ್ಲ ಹಂತಗಳು ಮತ್ತು ಇಲಾಖೆಗಳಲ್ಲಿ ಸಾರ್ವಜನಿಕ ಸೇವೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಹೆಚ್ಚಿನ ಮಹಿಳೆಯರು ಸರ್ಕಾರದ ಕಾರ್ಯಪಡೆಗೆ ಪ್ರವೇಶಿಸುವುದು ಸೇರಿದಂತೆ ಬಿಹಾರದ ಆಡಳಿತದಲ್ಲಿ ದೊಡ್ಡ ಪಾತ್ರವನ್ನು ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ನಿರ್ಧಾರ ಹೊಂದಿದೆ ಎಂದು ನಿತೀಶ್ ಕುಮಾರ್ ಹೇಳಿದರು.

ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಯುವಜನರಿಗೆ ತಮ್ಮ ಸರ್ಕಾರದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿತೀಶ್ ಕುಮಾರ್, ರಾಜ್ಯ ಸಚಿವ ಸಂಪುಟವು ಅನುಮೋದಿಸಿದ ಹೊಸ ಶಾಸನಬದ್ಧ ಸಂಸ್ಥೆಯಾದ ಬಿಹಾರ ಯುವ ಆಯೋಗದ ರಚನೆಯನ್ನು ಸಹ ಘೋಷಿಸಿದರು.

“ಬಿಹಾರದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು, ಅವರಿಗೆ ತರಬೇತಿ ನೀಡಲು ಮತ್ತು ಅವರನ್ನು ಸಬಲೀಕರಣಗೊಳಿಸಲು, ಸಮರ್ಥರನ್ನಾಗಿ ಮಾಡಲು, ಸರ್ಕಾರವು ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ. ಸಂಪುಟ ಇದಕ್ಕೆ ಅನುಮೋದನೆ ನೀಡಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಬಿಹಾರ ಯುವ ಆಯೋಗವು ರಾಜ್ಯದ ಯುವಕರ ಉನ್ನತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುತ್ತದೆ. ಯುವಜನರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಖಚಿತಪಡಿಸಿಕೊಳ್ಳಲು ಇದು ಸರ್ಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುತ್ತದೆ.

ಆಯೋಗವು ಒರ್ವ ಅಧ್ಯಕ್ಷರು, ಇಬ್ಬರು ಉಪಾಧ್ಯಕ್ಷರು ಮತ್ತು ಏಳು ಸದಸ್ಯರನ್ನು ಒಳಗೊಂಡಿರುತ್ತದೆ. ಎಲ್ಲರೂ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ರಾಜ್ಯದೊಳಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರು ಆದ್ಯತೆ ಪಡೆಯುವುದನ್ನು ಇದು ಮೇಲ್ವಿಚಾರಣೆ ಮಾಡುತ್ತದೆ. ರಾಜ್ಯದ ಹೊರಗೆ ಅಧ್ಯಯನ ಮಾಡುತ್ತಿರುವ ಅಥವಾ ಉದ್ಯೋಗದಲ್ಲಿರುವ ಬಿಹಾರದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುತ್ತದೆ.

“ಮದ್ಯ ಮತ್ತು ಮಾದಕ ದ್ರವ್ಯ ಸೇವನೆಯಂತಹ ಸಾಮಾಜಿಕ ಅನಿಷ್ಟಗಳನ್ನು ನಿಗ್ರಹಿಸಲು ಕಾರ್ಯಕ್ರಮಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಆಯೋಗಕ್ಕೆ ವಹಿಸಲಾಗುವುದು, ಅಂತಹ ವಿಷಯಗಳಲ್ಲಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದರು.

ಈ ಉಪಕ್ರಮವು ಬಿಹಾರದ ಯುವಕರನ್ನು ಸ್ವಾವಲಂಬಿ, ಕೌಶಲ್ಯಪೂರ್ಣ ಮತ್ತು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ, ಇದು ಮುಂಬರುವ ಪೀಳಿಗೆಗೆ ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯಲ್ಲಿ ವಕ್ಫ್ ಕಾಯ್ದೆ ರದ್ದು: ಕಾಂಗ್ರೆಸ್ ಸಂಸದ ಇಮ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...