Homeಮುಖಪುಟಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

ಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ, ಬಿಹಾರದ ಸರ್ಕಾರಿ ಉದ್ಯೋಗಗಳ ಪ್ರತಿಯೊಂದು ವರ್ಗದ ಎಲ್ಲ ಹುದ್ದೆಗಳಲ್ಲಿ ಶೇಕಡಾ 35 ರಷ್ಟು ಬಿಹಾರದ ಖಾಯಂ ನಿವಾಸಿ ಮಹಿಳೆಯರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ.

“ಎಲ್ಲ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಎಲ್ಲ ವರ್ಗಗಳು, ಹಂತಗಳು ಮತ್ತು ಪ್ರಕಾರದ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಬಿಹಾರದ ಮೂಲ ನಿವಾಸಿಗಳಾದ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ 35% ಮೀಸಲಾತಿ” ಎಂದು ನಿತೀಶ್ ಕುಮಾರ್ ಹೇಳಿದರು.

ಎಲ್ಲ ಹಂತಗಳು ಮತ್ತು ಇಲಾಖೆಗಳಲ್ಲಿ ಸಾರ್ವಜನಿಕ ಸೇವೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಹೆಚ್ಚಿನ ಮಹಿಳೆಯರು ಸರ್ಕಾರದ ಕಾರ್ಯಪಡೆಗೆ ಪ್ರವೇಶಿಸುವುದು ಸೇರಿದಂತೆ ಬಿಹಾರದ ಆಡಳಿತದಲ್ಲಿ ದೊಡ್ಡ ಪಾತ್ರವನ್ನು ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ನಿರ್ಧಾರ ಹೊಂದಿದೆ ಎಂದು ನಿತೀಶ್ ಕುಮಾರ್ ಹೇಳಿದರು.

ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಯುವಜನರಿಗೆ ತಮ್ಮ ಸರ್ಕಾರದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿತೀಶ್ ಕುಮಾರ್, ರಾಜ್ಯ ಸಚಿವ ಸಂಪುಟವು ಅನುಮೋದಿಸಿದ ಹೊಸ ಶಾಸನಬದ್ಧ ಸಂಸ್ಥೆಯಾದ ಬಿಹಾರ ಯುವ ಆಯೋಗದ ರಚನೆಯನ್ನು ಸಹ ಘೋಷಿಸಿದರು.

“ಬಿಹಾರದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು, ಅವರಿಗೆ ತರಬೇತಿ ನೀಡಲು ಮತ್ತು ಅವರನ್ನು ಸಬಲೀಕರಣಗೊಳಿಸಲು, ಸಮರ್ಥರನ್ನಾಗಿ ಮಾಡಲು, ಸರ್ಕಾರವು ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ. ಸಂಪುಟ ಇದಕ್ಕೆ ಅನುಮೋದನೆ ನೀಡಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಬಿಹಾರ ಯುವ ಆಯೋಗವು ರಾಜ್ಯದ ಯುವಕರ ಉನ್ನತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುತ್ತದೆ. ಯುವಜನರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಖಚಿತಪಡಿಸಿಕೊಳ್ಳಲು ಇದು ಸರ್ಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುತ್ತದೆ.

ಆಯೋಗವು ಒರ್ವ ಅಧ್ಯಕ್ಷರು, ಇಬ್ಬರು ಉಪಾಧ್ಯಕ್ಷರು ಮತ್ತು ಏಳು ಸದಸ್ಯರನ್ನು ಒಳಗೊಂಡಿರುತ್ತದೆ. ಎಲ್ಲರೂ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ರಾಜ್ಯದೊಳಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರು ಆದ್ಯತೆ ಪಡೆಯುವುದನ್ನು ಇದು ಮೇಲ್ವಿಚಾರಣೆ ಮಾಡುತ್ತದೆ. ರಾಜ್ಯದ ಹೊರಗೆ ಅಧ್ಯಯನ ಮಾಡುತ್ತಿರುವ ಅಥವಾ ಉದ್ಯೋಗದಲ್ಲಿರುವ ಬಿಹಾರದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುತ್ತದೆ.

“ಮದ್ಯ ಮತ್ತು ಮಾದಕ ದ್ರವ್ಯ ಸೇವನೆಯಂತಹ ಸಾಮಾಜಿಕ ಅನಿಷ್ಟಗಳನ್ನು ನಿಗ್ರಹಿಸಲು ಕಾರ್ಯಕ್ರಮಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಆಯೋಗಕ್ಕೆ ವಹಿಸಲಾಗುವುದು, ಅಂತಹ ವಿಷಯಗಳಲ್ಲಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದರು.

ಈ ಉಪಕ್ರಮವು ಬಿಹಾರದ ಯುವಕರನ್ನು ಸ್ವಾವಲಂಬಿ, ಕೌಶಲ್ಯಪೂರ್ಣ ಮತ್ತು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ, ಇದು ಮುಂಬರುವ ಪೀಳಿಗೆಗೆ ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯಲ್ಲಿ ವಕ್ಫ್ ಕಾಯ್ದೆ ರದ್ದು: ಕಾಂಗ್ರೆಸ್ ಸಂಸದ ಇಮ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...