Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...