Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....