Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...