Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...