Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...