Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...