Homeಮುಖಪುಟಸೋನಿಯಾ ಗಾಂಧಿ ಭೇಟಿಯಾಗಲಿರುವ ನಿತೀಶ್ ಕುಮಾರ್, ಲಾಲು ಯಾದವ್; 2024 ರ ಚುನಾವಣೆಗೆ ಮಹಾಮೈತ್ರಿ?

ಸೋನಿಯಾ ಗಾಂಧಿ ಭೇಟಿಯಾಗಲಿರುವ ನಿತೀಶ್ ಕುಮಾರ್, ಲಾಲು ಯಾದವ್; 2024 ರ ಚುನಾವಣೆಗೆ ಮಹಾಮೈತ್ರಿ?

- Advertisement -
- Advertisement -

ಬಿಹಾರ ಮಹಾಮೈತ್ರಿಕೂಟದ ಇಬ್ಬರು ಉನ್ನತ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಕೂಡಾ ಹಾಜರಾಗಬೇಕು ಎಂದು ಅವರಿಬ್ಬರೂ ಆಶಿಸಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಭಾರತ್‌ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ರಾಹುಲ್‌ ಗಾಂಧಿಯವರು ಕೇರಳದಲ್ಲಿದ್ದು, ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿತೀಶ್ ಕುಮಾರ್ ಮತ್ತು ಸೋನಿಯಾ ಗಾಂಧಿ ಅವರು 2015 ರ ಬಿಹಾರ ಚುನಾವಣೆಯ ಮೊದಲು ರಂಜಾ‌ನ್‌ನ ಇಫ್ತಾರ್‌ನಲ್ಲಿ ಕೊನೆಯ ಬಾರಿ ಭೇಟಿಯಾಗಿದ್ದರು.

ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ತಮ್ಮ ದೆಹಲಿ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರು. ಆ ಸಮಯದಲ್ಲಿ ಸೋನಿಯಾ ಗಾಂಧಿ ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶದಲ್ಲಿದ್ದರು.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ಲಾಲೂ ಪ್ರಸಾದ್‌ ಯಾದವ್‌ ಅವರು ಮೇವು ಹಗರಣದ ಪ್ರಕರಣಗಳಲ್ಲಿ 2018 ರಲ್ಲಿ ಜೈಲು ಪಾಲಾಗಿದ್ದರು. ಅನಾರೋಗ್ಯದ ಜಾಮೀನಿನ ಮೇಲೆ ಹೊರಗಿರುವ ಅವರು ಮುಂಬರುವ ವಾರಗಳಲ್ಲಿ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ಹೋಗಲಿದ್ದಾರೆ.

ಸೋನಿಯಾ ಗಾಂಧಿಯನ್ನು ಬಿಹಾರದ ಇಬ್ಬರು ಪ್ರಮುಖ ರಾಜಕೀಯ ನಾಯಕರ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಮೂಲಗಳು ಸೂಚಿಸಿದರೆ, ಮಹಾಮೈತ್ರಿಕೂಟವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದು ಸೇರಿದಂತೆ ಕೆಲವು ಗಂಭೀರ ವಿಷಯಗಳ ಚರ್ಚೆ ನಡೆಯುವ ಸಾಧ್ಯತೆಯು ಇದೆ ಎಂದು ವರದಿಯಾಗಿದೆ.

ರಾಷ್ಟ್ರಮಟ್ಟದಲ್ಲಿ ಮಹಾಮೈತ್ರಿಕೂಟದ ಸಾಧ್ಯತೆಯನ್ನು ಬಿಹಾರದ ನಾಯಕರು ಪರಿಶೋಧಿಸುತ್ತಿದ್ದು, ವಿಶೇಷವಾಗಿ 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧದ ಒಗ್ಗಟ್ಟಿನ ರಂಗಕ್ಕೆ ವಿರೋಧ ಪಕ್ಷವನ್ನು ಹೆಣೆಯುವಲ್ಲಿ ನಿತೀಶ್‌ ಕುಮಾರ್ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ತನ್ನ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಿದ್ಧತೆ ನಡೆಸುತ್ತಿರುವ ನಡುವೆ ಈ ಭೇಟಿ ನಡೆಯುತ್ತಿದೆ. ಗುರುವಾರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

ಆರಂಭದಲ್ಲಿ ಕೇರಳ ಸಂಸದ ಶಶಿ ತರೂರ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ನಡೆಯಬಹುದೆಂದು ನಿರೀಕ್ಷಿಸಲಾದ ಸ್ಪರ್ಧೆಯು, ಇದೀಗ ಬಹುಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇರಬಹುದು ಎನ್ನಲಾಗಿದ್ದು, ಪಕ್ಷದ ಮತ್ತೊಬ್ಬ ನಾಯಕ ಮನೀಶ್ ತಿವಾರಿ ಹಾಗೂ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಸೇರಿದಂತೆ ಹಲವಾರು ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...