Homeಮುಖಪುಟಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

- Advertisement -
- Advertisement -

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾರ್ವಜನಿಕವಾಗಿ ತಮ್ಮ ಹಿಜಾಬ್ ಅನ್ನು ಎಳೆದಿರುವುದ ವಿವಾದ ಸ್ವರೂಪ ಪಡೆದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕೃತ್ಯವು ವ್ಯಾಪಕ ರಾಜಕೀಯ ಮತ್ತು ಸಾಮಾಜಿಕ ವಿರೋಧಕ್ಕೆ ಕಾರಣವಾಗಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಲವಾರು ಹಿಜಾಬ್ ಧರಿಸಿದ ಮಹಿಳೆಯರಲ್ಲಿ ಒಬ್ಬರಾದ ಪರ್ವೀನ್ ಡಿಸೆಂಬರ್ 20 ರಂದು ಸೇವೆಗೆ ಸೇರಲಿದ್ದಾರೆ ಎನ್ನಲಾಗಿತ್ತು. ಆದರೂ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕುಟುಂಬವು ಅವರನ್ನು ಮನವೊಲಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾದ ಸರ್ಕಾರಿ ಕಾನೂನು ವಿಶ್ವವಿದ್ಯಾಲಯದಲ್ಲಿ ಬೋಧಿಸುವ ಅವರ ಸಹೋದರ ಮಾತನಾಡಿ, ಬೇರೆಯವರ ತಪ್ಪಿಗೆ ಅವರನ್ನು ತಡೆಹಿಡಿಯಬಾರದು ಎಂದು ಕುಟುಂಬವು ಅಭಿಪ್ರಾಯಪಟ್ಟಿದೆ ಎಂದು ಹೇಳಿದ್ದಾರೆ. ಆದರೆ ಘಟನೆಯ ಬಗ್ಗೆ ಅವರ ದುಃಖದ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿದೆ. ಅವರ ಪತಿ ಕಾಲೇಜಿನಲ್ಲಿ ಕ್ಲಿನಿಕಲ್ ಮನಶ್ಶಾಸ್ತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ.

ರಾಷ್ಟ್ರೀಯ ಜನತಾ ದಳವು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ, ಪರ್ವೀನ್ ಅವರೊಂದಿಗಿನ ಸಂವಾದದ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಡಿತು. ನೆಟಿಜನ್‌ಗಳು, ವಿಶೇಷವಾಗಿ ಮಹಿಳೆಯರು, ಈ ಕೃತ್ಯವನ್ನು ಅನುಚಿತ ಮತ್ತು ಅವಮಾನಕರ ಎಂದು ಬಣ್ಣಿಸಿದರು.

ಆರ್‌ಜೆಡಿ ಬಲವಾದ ಪದಗಳ ಪೋಸ್ಟ್ ಮೂಲಕ ಮುಖ್ಯಮಂತ್ರಿಯ ನಡವಳಿಕೆ ಮತ್ತು ಮಾನಸಿಕ ಸದೃಢತೆಯನ್ನು ಪ್ರಶ್ನಿಸಿತು. ಘಟನೆಯನ್ನು ಆಳವಾದ ರಾಜಕೀಯ ಮತ್ತು ಸೈದ್ಧಾಂತಿಕ ಬದಲಾವಣೆಯ ಪ್ರತಿಬಿಂಬ ಎಂದು ಹೇಳಿದೆ.

ಮುಖ್ಯಮಂತ್ರಿಯ ನಡವಳಿಕೆಯನ್ನು ಖಂಡಿಸುವ ಮತ್ತು ಅವರ ರಾಜೀನಾಮೆಗೆ ಒತ್ತಾಯಿಸುವ ಮೂಲಕ ಕಾಂಗ್ರೆಸ್ ಕೂಡ ಮುಖ್ಯಮಂತ್ರಿಗಳ ನಡೆಯನ್ನು ಖಂಡಿಸಿದೆ. ಆದರೆ ಈ ಘಟನೆಯನ್ನು ಬಿಹಾರದಲ್ಲಿ ಮಹಿಳೆಯರ ಸುರಕ್ಷತೆಯ ಬಗೆಗಿನ ಕಳವಳಗಳಿಗೆ ಜೋಡಿಸಿತು. ರಾಜ್ಯದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರದ ಅಂತಹ ನಡವಳಿಕೆಯು ಸಮಾಜಕ್ಕೆ ಗೊಂದಲದ ಸಂದೇಶವನ್ನು ರವಾನಿಸಿದೆ ಎಂದು ವಾದಿಸಿತು.

ಹೆಚ್ಚುತ್ತಿರುವ ಆಕ್ರೋಶ ಮತ್ತು ನಿರಂತರ ರಾಜಕೀಯ ಒತ್ತಡದ ಹೊರತಾಗಿಯೂ, ವೀಡಿಯೊ ವೈರಲ್ ಆದ ಒಂದು ದಿನಕ್ಕಿಂತ ಹೆಚ್ಚು ಸಮಯದ ನಂತರ ನಿತೀಶ್ ಕುಮಾರ್ ಅಥವಾ ಅವರ ಪಕ್ಷ ಅಥವಾ ಬಿಹಾರ ಸರ್ಕಾರ ಯಾವುದೇ ಅಧಿಕೃತ ಸ್ಪಷ್ಟೀಕರಣ ಅಥವಾ ಪ್ರತಿಕ್ರಿಯೆಯನ್ನು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...