Homeಮುಖಪುಟ'ಕುರ್ಚಿಗಾಗಿ ನಿತೀಶ್ ಕುಮಾರ್ ಪಕ್ಷ ಬದಲಾಯಿಸುತ್ತಾರೆ..'; ಬಿಜೆಪಿ-ಜೆಡಿಯು ಮೈತ್ರಿಕೂಟದ ವಿರುದ್ಧ ಖರ್ಗೆ ವಾಗ್ದಾಳಿ

‘ಕುರ್ಚಿಗಾಗಿ ನಿತೀಶ್ ಕುಮಾರ್ ಪಕ್ಷ ಬದಲಾಯಿಸುತ್ತಾರೆ..’; ಬಿಜೆಪಿ-ಜೆಡಿಯು ಮೈತ್ರಿಕೂಟದ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಈ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದರು. “ಮುಖ್ಯಮಂತ್ರಿ ನಿತೀಶ್ ಕುಮಾರ್ ಕುರ್ಚಿಗಾಗಿ ಮಾತ್ರ ಪಕ್ಷ ಬದಲಾಯಿಸುತ್ತಾರೆ” ಎಂದು ಅವರು ಆರೋಪಿಸಿದರು.

ಬಿಹಾರದ ಬಕ್ಸೂರ್‌ನ ದಲ್‌ಸಾಗರ್ ಮೈದಾನದಲ್ಲಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿಯನ್ನು ಸೋಲಿಸಿ ಈ ಬಾರಿ ಮಹಾಘಟಬಂಧನ್ ಅನ್ನು ಅಧಿಕಾರಕ್ಕೆ ತರುವಂತೆ ಮತದಾರರಿಗೆ ಕರೆ ನೀಡಿದರು.

“ನಿತೀಶ್ ಕುಮಾರ್ ಮತ್ತು ಬಿಜೆಪಿ ನಡುವಿನ ಮೈತ್ರಿ ಅವಕಾಶವಾದಿಯಾಗಿದೆ. ಇದು ರಾಜ್ಯದ ಜನರಿಗೆ ಒಳ್ಳೆಯದಲ್ಲ. ನಿತೀಶ್ ಕುಮಾರ್ ‘ಕುರ್ಚಿ’ (ಮುಖ್ಯಮಂತ್ರಿ ಹುದ್ದೆ) ಗಾಗಿ ಮಾತ್ರ ಪಕ್ಷ ಬದಲಾಯಿಸುತ್ತಾರೆ. ಜೆಡಿಯು ಮುಖ್ಯಸ್ಥರು ಮಹಾತ್ಮ ಗಾಂಧಿಯನ್ನು ಕೊಂದ ಸಿದ್ಧಾಂತದೊಂದಿಗೆ ಕೈಜೋಡಿಸಿದ್ದಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಕೆಲವೊಮ್ಮೆ ನಿತೀಶ್ ಕುಮಾರ್ ನಮ್ಮೊಂದಿಗೆ ಸೇರಲು ಹಡಗನ್ನು ಹಾರುತ್ತಾರೆ. ಆದರೆ, ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ ಎಂದು ಮನವರಿಕೆಯಾದಾಗ, ಅವರು ಮತ್ತೆ ಅವರ ಮಡಿಲಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಅವರು ಹೇಳಿದರು.

ಮುಂಬರುವ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್, ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಎಡ ಪಕ್ಷಗಳನ್ನು ಒಳಗೊಂಡ ಮಹಾಘಟಬಂಧನ್ ಅನ್ನು ಎನ್‌ಡಿಎ ಮೈತ್ರಿಕೂಟದ ಪಾಲುದಾರರಾಗಿ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿ(ಯು) ಎದುರಿಸಲಿವೆ.

ಮೋದಿ ಸುಳ್ಳುಗಳ ಕಾರ್ಖಾನೆ ನಡೆಸುತ್ತಿದ್ದಾರೆ

ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಖರ್ಗೆ, 2015 ರಲ್ಲಿ ಬಿಹಾರಕ್ಕೆ ಅವರು ಭರವಸೆ ನೀಡಿದ 1.25 ಲಕ್ಷ ಕೋಟಿ ರೂ. ಪ್ಯಾಕೇಜ್ ಬಗ್ಗೆ ಪ್ರಶ್ನಿಸಿದರು. ಅವರು ‘ಸುಳ್ಳುಗಳ ಕಾರ್ಖಾನೆ’ ನಡೆಸುತ್ತಿದ್ದಾರೆ ಎಂದು ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 18, 2015 ರಂದು ಬಿಹಾರಕ್ಕೆ ನೀಡಿದ 1.25 ಲಕ್ಷ ಕೋಟಿ ರೂ. ಪ್ಯಾಕೇಜ್‌ನ ಭರವಸೆಯನ್ನು ಏನಾಯಿತು ಎಂದು ಬಿಹಾರದ ಜನರು ನಿತೀಶ್ ಕುಮಾರ್ ಅವರನ್ನು ಕೇಳಬೇಕು. ಮೋದಿ ಸುಳ್ಳಿನ ಕಾರ್ಖಾನೆಯನ್ನು ನಡೆಸುತ್ತಿದ್ದಾರೆ” ಎಂದು ಖರ್ಗೆ ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ, “ಇದು ಆಡಳಿತ ಪಕ್ಷದಿಂದ ರಾಜಕೀಯ ಬೇಟೆಯಾಗಿದೆ” ಎಂದು ಹೇಳಿದರು.

“ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಇಡಿ ಚಾರ್ಜ್‌ಶೀಟ್‌ ಹಾಖಲಾಗಿದೆ. ನಮ್ಮ ನಾಯಕರು ಭಯಪಡಲು ಸಾಧ್ಯವಿಲ್ಲ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಬಿಜೆಪಿಯ ನಾಯಿಯೂ ಸತ್ತಿಲ್ಲ” ಎಂದು ಖರ್ಗೆ ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಡವರ ವಿರೋಧಿಗಳು, ದೀನದಲಿತರ ಕಲ್ಯಾಣದ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

“ಬಿಜೆಪಿಯವರು ಬಡವರು, ಮಹಿಳೆಯರು ಮತ್ತು ಸಮಾಜದ ದುರ್ಬಲ ವರ್ಗಗಳ ವಿರುದ್ಧ ಇದ್ದಾರೆ. ಅವರು (ಆರ್‌ಎಸ್‌ಎಸ್-ಬಿಜೆಪಿ) ಸಮಾಜದ ಸುಧಾರಣೆಗಾಗಿ ಯೋಚಿಸಲು ಸಾಧ್ಯವಿಲ್ಲ. ಅವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸುವಲ್ಲಿ ನಂಬಿಕೆ ಇಡುತ್ತಾರೆ” ಎಂದು ಅವರು ಇತ್ತೀಚೆಗೆ ಜಾರಿಗೆ ತಂದ ವಕ್ಫ್ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತಾ ಹೇಳಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆಯು ಸಮುದಾಯಗಳ ನಡುವೆ ವಿಭಜನೆಯನ್ನು ಸೃಷ್ಟಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪಿತೂರಿಯಾಗಿದೆ” ಎಂದು ಅವರು ಆರೋಪಿಸಿದರು.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....