Homeಮುಖಪುಟನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

ನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ತಮ್ಮ JDU ಪಕ್ಷದ ಮುಖಂಡರನ್ನು ನಿರ್ಲಕ್ಷಿಸಿ, ಕೆಳ ಅಂದಾಜು ಮಾಡುತ್ತಿದ್ದಾರೆ. ಇದರ ಫಲವಾಗಿ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು ಎಂದು ಲೋಕ ಜನಶಕ್ತಿ ಪಕ್ಷದ ಮುಖಂಡ ಚಿರಾಗ್ ಪಾಸ್ವಾನ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಆರ್ಶಿವಾದ್ ಯಾತ್ರೆಯ ಭಾಗವಾಗಿ ಸಮಸ್ತಿಪುರ್‌ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, “ನನ್ನನ್ನು ಕೇಂದ್ರ ಸಂಪುಟದಿಂದ ಹೊರಗಿಡುವ ಏಕೈಕ ಉದ್ದೇಶದಿಂದ ನಿತೀಶ್‌ ಕುಮಾರ್‌ರವರು ನಮ್ಮ ಪಕ್ಷವನ್ನು ಒಡೆದರು. ನಾನೆಂದೂ ಕೇಂದ್ರ ಮಂತ್ರಿಯಾಗಬೇಕೆಂಬ ಬೇಡಿಕೆ ಇಟ್ಟವನಲ್ಲ. ನಮ್ಮ ಚಿಕ್ಕಪ್ಪನವರನ್ನು (ಪಶುಪತಿ ಪರಾಸ್) ಯಾವ ಕೋಟಾದಲ್ಲಿ ಮಂತ್ರಿ ಮಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ರಾಜೀವ್‌ ರಂಜನ್ (ಲಲನ್ ಸಿಂಗ್‌) ನಂತಹ ಜೆಡಿಯು ನಾಯಕರಿಗೆ ಮೋಸವಾಗಿದೆ. ಇದರ ಫಲವನ್ನು ಸದ್ಯದಲ್ಲಿಯೇ ನಿತೀಶ್ ಕುಮಾರ್ ಅನುಭವಿಸಲಿದ್ದಾರೆ” ಎಂದು ಹೇಳಿದ್ದಾರೆ.

ಪಶುಪತಿ ಪರಾಸ್ ಸೇರಿದಂತೆ ಐದು ಸಂಸದರನ್ನು ನಮ್ಮ ಪಕ್ಷದ ಸಂವಿಧಾನದ ಅನುಸಾರ ಉಚ್ಛಾಟನೆ ಮಾಡಿರುವುದರ ಬಗ್ಗೆ ಪ್ರಧಾನ ಮಂತ್ರಿಯವರಿಗೆ ಮಾಹಿತಿ ನೀಡಿದ್ದೇನೆ. ಲಲನ್ ಸಿಂಗ್‌ರವರು ನಮ್ಮ ಪಕ್ಷ ಹೋಳಾಗುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದಕ್ಕಾಗಿ ಅವರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗುತ್ತದೆ ಎಂದು ನಂಬಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಹಾಗಾಗಿ ಅವರು ಜೆಡಿಯು ಪಕ್ಷವನ್ನು ಇಬ್ಭಾಗ ಮಾಡಲಿದ್ದಾರೆ ಎಂದು ಚಿರಾಗ್ ಹೇಳಿದ್ದಾರೆ.

ನಮ್ಮ ಪಕ್ಷದಿಂದ ಕೆಲವರು ಹೊರನಡೆದಿದ್ದು ಸರಿಯಾದುದ್ದಲ್ಲ. ಈ ಕುರಿತು ನಾವು ಕೋರ್ಟ್‌ನಲ್ಲಿ ಪ್ರಶ್ನಿಸಿದ್ದೇವೆ. ನಾನೀಗ ಪಕ್ಷ ಸಂಘಟನೆಯತ್ತ ಗಮನ ಹರಿಸಲಿದ್ದು, ಆರ್ಶಿವಾದ್ ಯಾತ್ರೆ ಮುಗಿದ ನಂತರ ಪಾದಯಾತ್ರೆ ಆರಂಭಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನಿನ್ನು ಎಲ್‌ಜೆಪಿಯ ಅಧ್ಯಕ್ಷನಾಗಿದ್ದೇನೆ. ಹೊರನಡೆದವರ ಕುರಿತು ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ಉಚ್ಛಾಟಿಸುವಂತೆ ಸ್ವೀಕರ್‌ರವರಿಗೆ ಪತ್ರ ಬರೆಯುತ್ತೇನೆ. ಐದು ಜನರಲ್ಲಿ ಒಬ್ಬರು ಮಾತ್ರ ಮಂತ್ರಿಯಾಗಿದ್ದಾರೆ. ಉಳಿದವರ ಕತೆಯೇನು? ಎಂದು ಚಿರಾಗ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...