Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...