Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...