Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...