Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...