Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...