Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...