Homeಮುಖಪುಟಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

ಚುನಾವಣಾ ಬಾಂಡ್‌: NDA ಮೈತ್ರಿ ಅವಧಿಯಲ್ಲಿ ಜೆಡಿಯುಗೆ ಹರಿದು ಬಂದಿತ್ತು ದೇಣಿಗೆ!

- Advertisement -
- Advertisement -

ನಿತೇಶ್‌ ಕುಮಾರ್‌ ನೇತೃತ್ವದ ಬಿಹಾರದ ಜೆಡಿಯು ಪಕ್ಷವು ಎನ್‌ಡಿಎ ಮೈತ್ರಿ ಭಾಗವಾಗಿದ್ದ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳನ್ನು ಪಡೆದಿದ್ದು, ಮೈತ್ರಿಯಿಂದ ಹೊರಬಂದು ಸರಕಾರ ರಚಿಸಿದ್ದ ವೇಳೆ ಜೆಡಿಯು ದೇಣಿಗೆ ಪಡೆದಿಲ್ಲ ಎನ್ನುವುದು ಅಂಕಿ-ಅಂಶಗಳು ಬಯಲುಗೊಳಿಸಿದೆ.

2019ರ ಬಿಹಾರ ಲೋಕಸಭೆ ಚುನಾವಣೆಯ ವೇಳೆ ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಲಿಮಿಟೆಡ್ ಮತ್ತು ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಚುನಾವಣಾ ಬಾಂಡ್‌ಗಳ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷಕ್ಕೆ ದೇಣಿಗೆಗಳನ್ನು ನೀಡಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಜೆಡಿಯು ಪಕ್ಷ ಸಲ್ಲಿಸಿದ ಮಾಹಿತಿಯಲ್ಲಿ, ಜೆಡಿಯು 2019ರ ಏಪ್ರಿಲ್ 10ರಿಂದ – 2019ರ ಏಪ್ರಿಲ್ 26ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ 13 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಿದ್ದು, ಶ್ರೀ ಸಿಮೆಂಟ್ ಮತ್ತು ಭಾರ್ತಿ ಏರ್ಟೆಲ್‌ನಿಂದ ಈ ನಿಧಿಯನ್ನು ಪಡೆದುಕೊಂಡಿದೆ ಎಂದು ಉಲ್ಲೇಖಿಸಿದೆ.

ಬಿಹಾರದಲ್ಲಿ 2019ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ನಡೆಸಲಾಗಿದೆ. ಜೆಡಿಯು 2019ರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಭಾಗವಾಗಿ ಚುನಾವಣೆಗಳನ್ನು ಎದುರಿಸಿದೆ. ಆದರೆ 2022ರಲ್ಲಿ ಜೆಡಿಯು, ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು, ಮತ್ತೆ 2024ರ ಆರಂಭದಲ್ಲಿ ಎನ್‌ಡಿಎಗೆ ಮರಳಿತ್ತು.

ಜೆಡಿಯು ಪಕ್ಷಕ್ಕೆ  ಶ್ರೀ ಸಿಮೆಂಟ್ ಲಿಮಿಟೆಡ್ ಎರಡು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 2 ಕೋಟಿ ರೂ. ದೇಣಿಗೆ ನೀಡಿದರೆ, ಭಾರ್ತಿ ಏರ್‌ಟೆಲ್ ಪಕ್ಷಕ್ಕೆ 1 ಕೋಟಿ ರೂ. ನೀಡಿದೆ. ಆದರೆ ಇನ್ನುಳಿದ 10 ಕೋಟಿ ರೂ.ಗಳನ್ನು ನೀಡಿರುವ ದಾನಿಗಳನ್ನು ಹೆಸರಿಸಲಾಗಿಲ್ಲ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಯಾರು ದಾನ ಮಾಡಿದ್ದಾರೆ ಎಂಬುವುದು ತಮಗೆ ಸರಿಯಾಗಿ ತಿಳಿದಿಲ್ಲ ಎಂದು ಜೆಡಿಯು ಮಾಹಿತಿಯನ್ನು ನೀಡಿದೆ. 03.04.2019ರಂದು ಪಾಟ್ನಾದಲ್ಲಿರುವ ನಮ್ಮ ಕಚೇರಿಗೆ ಯಾರೋ ಬಂದು ಮುಚ್ಚಿದ ಲಕೋಟೆಯಲ್ಲಿ ದೇಣಿಗೆಯ್ನು ನೀಡಿದರು ಮತ್ತು ಅದನ್ನು ತೆರೆದಾಗ ನಮಗೆ ತಲಾ ಒಂದು ಕೋಟಿ ರೂಪಾಯಿಗಳ ಹತ್ತು ಎಲೆಕ್ಟೋರಲ್ ಬಾಂಡ್‌ಗಳನ್ನು ಒಳಗೊಂಡಿತ್ತು ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. ಭಾರತ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾವು ಪಾಟ್ನಾದ SBI ಮುಖ್ಯ ಶಾಖೆಯಲ್ಲಿ ಖಾತೆಯನ್ನು ತೆರೆದಿದ್ದೇವೆ ಮತ್ತು ಅದನ್ನು 10.04.2019ರಂದು ನಮ್ಮ ಪಕ್ಷದ ಖಾತೆಗೆ ಜಮೆ ಮಾಡಿದ್ದೇವೆ ಎಂದು ಜೆಡಿಯು ಹೇಳಿಕೊಂಡಿದೆ.

ಕಳೆದ ವಾರ ಏಪ್ರಿಲ್ 12, 2019ರಿಂದ ಜನವರಿ 11, 2024ರವರೆಗೆ ದಾನಿಗಳ ಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗದ ದತ್ತಾಂಶವು ಶ್ರೀ ಸಿಮೆಂಟ್ಸ್ ಮೂರು ಹಂತಗಳಲ್ಲಿ 10.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎಂದು ಬಹಿರಂಗಪಡಿಸಿದೆ. ಮೇ 8, 2019ರಂದು 4.5 ಕೋಟಿ ರೂ. ಜನವರಿ 21, 2020ರಂದು 4 ಕೋಟಿ ರೂ. ತದನಂತರ ಅಕ್ಟೋಬರ್ 21, 2020ರಂದು 2ಕೋಟಿ ರೂ.ಮೌಲ್ಯದ ಬಾಂಡ್‌ ಖರೀದಿಸಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಸುನಿಲ್ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಹತ್ತು ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಬಹಿರಂಗವಾಗಿದೆ. 2019 ಮತ್ತು 2024ರ ನಡುವೆ ಟೆಲಿಕಾಂ ಕಂಪನಿಯು ಹೆಚ್ಚಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ 247 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDU ತನ್ನ ಮೊದಲ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಿದ ನಂತರ, ಅದು ಬಳಿಕ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು 2020ರ ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಸ್ವೀಕರಿಸಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...