Homeಮುಖಪುಟ'ನವ ಭಾರತ, ನವ ಬಿಹಾರ' ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

‘ನವ ಭಾರತ, ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ" ಎಂದು ಮೋದಿ ಹೇಳಿದರು.

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಬಿಹಾರ ವಿಧಾನಸಭೆಯ ಚುನಾವಣೆಗೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿರುವಾಗ, ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಅವರ ಪಾತ್ರ ಮಹತ್ತರವಾದದ್ದು ಎಂದು ಮೋದಿ ಕರೆದಿದ್ದಾರೆ.

ಸುಮಾರು 900 ಕೋಟಿ ಮೊತ್ತದ ಬೃಹತ್ ಪೆಟ್ರೋಲಿಯಂ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ, “ಆಡಳಿತದಲ್ಲಿ ಸರಿಯಾದ ಸರ್ಕಾರ ಇದ್ದರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದನ್ನು ಬಿಹಾರ ರಾಜ್ಯ ತೋರಿಸಿಕೊಟ್ಟಿದೆ. ಇದರಿಂದಲೇ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಿವೆ” ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ, ನಿತೀಶ್ ಕುಮಾರ್, ಸುಶೀಲ್ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

“ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಬಿಹಾರವು ಹಲವು ವರ್ಷಗಳವರೆಗೆ ಅಭಿವೃದ್ಧಿಯನ್ನು ಕಾಣದೆ ಹಿಂದುಳಿದಿತ್ತು. ರಸ್ತೆ ಸಂಪರ್ಕ ಮತ್ತು ಇಂಟರ್ನೆಟ್ ಸೌಲಭ್ಯದ ಕುರಿತು ಚರ್ಚಿಸದ ಕಾಲವೊಂದಿತ್ತು. ಭೂ ಕುಸಿತದ ರಾಜ್ಯವಾಗಿ ಬಿಹಾರ ಅನೇಕ ಸವಾಲುಗಳನ್ನು ಎದುರಿಸಿದೆ. ಆದರೀಗ ನಮ್ಮ ಮಹತ್ವದ ಯೋಜನೆಯಾದ ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

“ಕೊರೊನಾದ ಬಿಕ್ಕಟ್ಟಿನಿಂದ ಸೃಷ್ಟಿಯಾದ ಕೆಲವು ಸವಾಲುಗಳೂ ಸಹ ಬಿಹಾರದ ಜನರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲ. ಜಾಗತಿಕ ಸಾಂಕ್ರಾಮಿಕ ರೊಗವು ದೇಶಕ್ಕೆ ಅನೇಕ ಸಮಸ್ಯೆಗಳನ್ನು ತಂದೊಡ್ಡಿತು. ಆದರೂ ದೇಶ ನಿಂತಿಲ್ಲ, ಬಿಹಾರ ನಿಂತಿಲ್ಲ” ಎಂದು ಮೋದಿ ಹೇಳಿದರು.

“ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಬಿಹಾರವು ತುಂಬಾ ಮುಂದೆ ಸಾಗಿದೆ. ಬಿಹಾರದಲ್ಲಿ ವಿದ್ಯುತ್ ಪರಿಸ್ಥಿತಿಯ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಒಂದು ಹಳ್ಳಿಗೆ 2-3 ಗಂಟೆಗಳ ಕಾಲ ವಿದ್ಯುತ್ ಸಿಕ್ಕರೆ ಸಾಕು ಎಂದು ಪರಿಗಣಿಸಲಾಗುತ್ತಿತ್ತು. ನಗರಗಳಿಗೂ ಸಹ 8-10 ಗಂಟೆಗಿಂತ ಹೆಚ್ಚಿನ ವಿದ್ಯುತ್ ಸಿಗುತ್ತಿರಲಿಲ್ಲ. ಆದರೆ ಇಂದು ಬಿಹಾರದಲ್ಲಿ ವಿದ್ಯುತ್ ಪೂರೈಕೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಪ್ರಧಾನಿ ಹೇಳಿದರು.

“ರಾಜ್ಯದ ಯುವಜನತೆಗೆ ಉತ್ತಮ ಶಿಕ್ಷಣದ ಅವಕಾಶಗಳಿವೆ. ಇಂದು ಬಿಹಾರದಲ್ಲಿ ಬೃಹತ್ ಶಿಕ್ಷಣ ಕೇಂದ್ರಗಳು ತೆರೆಯಲ್ಪಡುತ್ತಿವೆ. ಕೃಷಿ, ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಯುವಜನರ ಯಶಸ್ಸಿಗೆ ಸಹಾಯ ಮಾಡುತ್ತಿವೆ” ಎಂದು ಬಿಹಾರದಲ್ಲಿನ ಶಿಕ್ಷಣಾವಕಾಶಗಳನ್ನು ಮೋದಿ ಉಲ್ಲೇಖಿಸಿದರು.

ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

“ನಾವು ಬಿಹಾರದ ಪ್ರತಿಯೊಂದು ವಲಯದ ಅಭಿವೃದ್ಧಿಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಪ್ರತಿ ವಲಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ” ಎಂದು ಮೋದಿ ಹೇಳಿದರು.

ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಪಕ್ಷವು ಬಿಹಾರದ ಆಡಳಿತ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಒಂದು ಘಟಕವಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಮ್ ಮೋರ್ಚಾ, ಈ ತಿಂಗಳ ಆರಂಭದಲ್ಲಿ ಮೈತ್ರಿಕೂಟಕ್ಕೆ ಸೇರಿತ್ತು. ಲೋಕ ಜನಶಕ್ತಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ಎನ್‌ಡಿಎಯ ಇತರ ಎರಡು ಮೈತ್ರಿ ಪಕ್ಷಗಳಾಗಿವೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...