Homeಮುಖಪುಟ'ನವ ಭಾರತ, ನವ ಬಿಹಾರ' ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

‘ನವ ಭಾರತ, ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ" ಎಂದು ಮೋದಿ ಹೇಳಿದರು.

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಬಿಹಾರ ವಿಧಾನಸಭೆಯ ಚುನಾವಣೆಗೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿರುವಾಗ, ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಅವರ ಪಾತ್ರ ಮಹತ್ತರವಾದದ್ದು ಎಂದು ಮೋದಿ ಕರೆದಿದ್ದಾರೆ.

ಸುಮಾರು 900 ಕೋಟಿ ಮೊತ್ತದ ಬೃಹತ್ ಪೆಟ್ರೋಲಿಯಂ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ, “ಆಡಳಿತದಲ್ಲಿ ಸರಿಯಾದ ಸರ್ಕಾರ ಇದ್ದರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದನ್ನು ಬಿಹಾರ ರಾಜ್ಯ ತೋರಿಸಿಕೊಟ್ಟಿದೆ. ಇದರಿಂದಲೇ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಿವೆ” ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ, ನಿತೀಶ್ ಕುಮಾರ್, ಸುಶೀಲ್ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

“ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಬಿಹಾರವು ಹಲವು ವರ್ಷಗಳವರೆಗೆ ಅಭಿವೃದ್ಧಿಯನ್ನು ಕಾಣದೆ ಹಿಂದುಳಿದಿತ್ತು. ರಸ್ತೆ ಸಂಪರ್ಕ ಮತ್ತು ಇಂಟರ್ನೆಟ್ ಸೌಲಭ್ಯದ ಕುರಿತು ಚರ್ಚಿಸದ ಕಾಲವೊಂದಿತ್ತು. ಭೂ ಕುಸಿತದ ರಾಜ್ಯವಾಗಿ ಬಿಹಾರ ಅನೇಕ ಸವಾಲುಗಳನ್ನು ಎದುರಿಸಿದೆ. ಆದರೀಗ ನಮ್ಮ ಮಹತ್ವದ ಯೋಜನೆಯಾದ ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

“ಕೊರೊನಾದ ಬಿಕ್ಕಟ್ಟಿನಿಂದ ಸೃಷ್ಟಿಯಾದ ಕೆಲವು ಸವಾಲುಗಳೂ ಸಹ ಬಿಹಾರದ ಜನರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲ. ಜಾಗತಿಕ ಸಾಂಕ್ರಾಮಿಕ ರೊಗವು ದೇಶಕ್ಕೆ ಅನೇಕ ಸಮಸ್ಯೆಗಳನ್ನು ತಂದೊಡ್ಡಿತು. ಆದರೂ ದೇಶ ನಿಂತಿಲ್ಲ, ಬಿಹಾರ ನಿಂತಿಲ್ಲ” ಎಂದು ಮೋದಿ ಹೇಳಿದರು.

“ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಬಿಹಾರವು ತುಂಬಾ ಮುಂದೆ ಸಾಗಿದೆ. ಬಿಹಾರದಲ್ಲಿ ವಿದ್ಯುತ್ ಪರಿಸ್ಥಿತಿಯ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಒಂದು ಹಳ್ಳಿಗೆ 2-3 ಗಂಟೆಗಳ ಕಾಲ ವಿದ್ಯುತ್ ಸಿಕ್ಕರೆ ಸಾಕು ಎಂದು ಪರಿಗಣಿಸಲಾಗುತ್ತಿತ್ತು. ನಗರಗಳಿಗೂ ಸಹ 8-10 ಗಂಟೆಗಿಂತ ಹೆಚ್ಚಿನ ವಿದ್ಯುತ್ ಸಿಗುತ್ತಿರಲಿಲ್ಲ. ಆದರೆ ಇಂದು ಬಿಹಾರದಲ್ಲಿ ವಿದ್ಯುತ್ ಪೂರೈಕೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಪ್ರಧಾನಿ ಹೇಳಿದರು.

“ರಾಜ್ಯದ ಯುವಜನತೆಗೆ ಉತ್ತಮ ಶಿಕ್ಷಣದ ಅವಕಾಶಗಳಿವೆ. ಇಂದು ಬಿಹಾರದಲ್ಲಿ ಬೃಹತ್ ಶಿಕ್ಷಣ ಕೇಂದ್ರಗಳು ತೆರೆಯಲ್ಪಡುತ್ತಿವೆ. ಕೃಷಿ, ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಯುವಜನರ ಯಶಸ್ಸಿಗೆ ಸಹಾಯ ಮಾಡುತ್ತಿವೆ” ಎಂದು ಬಿಹಾರದಲ್ಲಿನ ಶಿಕ್ಷಣಾವಕಾಶಗಳನ್ನು ಮೋದಿ ಉಲ್ಲೇಖಿಸಿದರು.

ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

“ನಾವು ಬಿಹಾರದ ಪ್ರತಿಯೊಂದು ವಲಯದ ಅಭಿವೃದ್ಧಿಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಪ್ರತಿ ವಲಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ” ಎಂದು ಮೋದಿ ಹೇಳಿದರು.

ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಪಕ್ಷವು ಬಿಹಾರದ ಆಡಳಿತ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಒಂದು ಘಟಕವಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಮ್ ಮೋರ್ಚಾ, ಈ ತಿಂಗಳ ಆರಂಭದಲ್ಲಿ ಮೈತ್ರಿಕೂಟಕ್ಕೆ ಸೇರಿತ್ತು. ಲೋಕ ಜನಶಕ್ತಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ಎನ್‌ಡಿಎಯ ಇತರ ಎರಡು ಮೈತ್ರಿ ಪಕ್ಷಗಳಾಗಿವೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...