Homeಮುಖಪುಟ'ನವ ಭಾರತ, ನವ ಬಿಹಾರ' ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

‘ನವ ಭಾರತ, ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ" ಎಂದು ಮೋದಿ ಹೇಳಿದರು.

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಬಿಹಾರ ವಿಧಾನಸಭೆಯ ಚುನಾವಣೆಗೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿರುವಾಗ, ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಅವರ ಪಾತ್ರ ಮಹತ್ತರವಾದದ್ದು ಎಂದು ಮೋದಿ ಕರೆದಿದ್ದಾರೆ.

ಸುಮಾರು 900 ಕೋಟಿ ಮೊತ್ತದ ಬೃಹತ್ ಪೆಟ್ರೋಲಿಯಂ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ, “ಆಡಳಿತದಲ್ಲಿ ಸರಿಯಾದ ಸರ್ಕಾರ ಇದ್ದರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದನ್ನು ಬಿಹಾರ ರಾಜ್ಯ ತೋರಿಸಿಕೊಟ್ಟಿದೆ. ಇದರಿಂದಲೇ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಿವೆ” ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ, ನಿತೀಶ್ ಕುಮಾರ್, ಸುಶೀಲ್ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

“ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಬಿಹಾರವು ಹಲವು ವರ್ಷಗಳವರೆಗೆ ಅಭಿವೃದ್ಧಿಯನ್ನು ಕಾಣದೆ ಹಿಂದುಳಿದಿತ್ತು. ರಸ್ತೆ ಸಂಪರ್ಕ ಮತ್ತು ಇಂಟರ್ನೆಟ್ ಸೌಲಭ್ಯದ ಕುರಿತು ಚರ್ಚಿಸದ ಕಾಲವೊಂದಿತ್ತು. ಭೂ ಕುಸಿತದ ರಾಜ್ಯವಾಗಿ ಬಿಹಾರ ಅನೇಕ ಸವಾಲುಗಳನ್ನು ಎದುರಿಸಿದೆ. ಆದರೀಗ ನಮ್ಮ ಮಹತ್ವದ ಯೋಜನೆಯಾದ ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

“ಕೊರೊನಾದ ಬಿಕ್ಕಟ್ಟಿನಿಂದ ಸೃಷ್ಟಿಯಾದ ಕೆಲವು ಸವಾಲುಗಳೂ ಸಹ ಬಿಹಾರದ ಜನರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲ. ಜಾಗತಿಕ ಸಾಂಕ್ರಾಮಿಕ ರೊಗವು ದೇಶಕ್ಕೆ ಅನೇಕ ಸಮಸ್ಯೆಗಳನ್ನು ತಂದೊಡ್ಡಿತು. ಆದರೂ ದೇಶ ನಿಂತಿಲ್ಲ, ಬಿಹಾರ ನಿಂತಿಲ್ಲ” ಎಂದು ಮೋದಿ ಹೇಳಿದರು.

“ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಬಿಹಾರವು ತುಂಬಾ ಮುಂದೆ ಸಾಗಿದೆ. ಬಿಹಾರದಲ್ಲಿ ವಿದ್ಯುತ್ ಪರಿಸ್ಥಿತಿಯ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಒಂದು ಹಳ್ಳಿಗೆ 2-3 ಗಂಟೆಗಳ ಕಾಲ ವಿದ್ಯುತ್ ಸಿಕ್ಕರೆ ಸಾಕು ಎಂದು ಪರಿಗಣಿಸಲಾಗುತ್ತಿತ್ತು. ನಗರಗಳಿಗೂ ಸಹ 8-10 ಗಂಟೆಗಿಂತ ಹೆಚ್ಚಿನ ವಿದ್ಯುತ್ ಸಿಗುತ್ತಿರಲಿಲ್ಲ. ಆದರೆ ಇಂದು ಬಿಹಾರದಲ್ಲಿ ವಿದ್ಯುತ್ ಪೂರೈಕೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಪ್ರಧಾನಿ ಹೇಳಿದರು.

“ರಾಜ್ಯದ ಯುವಜನತೆಗೆ ಉತ್ತಮ ಶಿಕ್ಷಣದ ಅವಕಾಶಗಳಿವೆ. ಇಂದು ಬಿಹಾರದಲ್ಲಿ ಬೃಹತ್ ಶಿಕ್ಷಣ ಕೇಂದ್ರಗಳು ತೆರೆಯಲ್ಪಡುತ್ತಿವೆ. ಕೃಷಿ, ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಯುವಜನರ ಯಶಸ್ಸಿಗೆ ಸಹಾಯ ಮಾಡುತ್ತಿವೆ” ಎಂದು ಬಿಹಾರದಲ್ಲಿನ ಶಿಕ್ಷಣಾವಕಾಶಗಳನ್ನು ಮೋದಿ ಉಲ್ಲೇಖಿಸಿದರು.

ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

“ನಾವು ಬಿಹಾರದ ಪ್ರತಿಯೊಂದು ವಲಯದ ಅಭಿವೃದ್ಧಿಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಪ್ರತಿ ವಲಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ” ಎಂದು ಮೋದಿ ಹೇಳಿದರು.

ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಪಕ್ಷವು ಬಿಹಾರದ ಆಡಳಿತ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಒಂದು ಘಟಕವಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಮ್ ಮೋರ್ಚಾ, ಈ ತಿಂಗಳ ಆರಂಭದಲ್ಲಿ ಮೈತ್ರಿಕೂಟಕ್ಕೆ ಸೇರಿತ್ತು. ಲೋಕ ಜನಶಕ್ತಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ಎನ್‌ಡಿಎಯ ಇತರ ಎರಡು ಮೈತ್ರಿ ಪಕ್ಷಗಳಾಗಿವೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...