Homeಮುಖಪುಟನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

- Advertisement -
- Advertisement -

ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿಯಲ್ಲಿ ಬಿರುಕುಬಿಟ್ಟಿದ್ದು ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಅವರು ಮತ್ತೊಮ್ಮೆ ಮಗ್ಗಲು ಬದಲಿಸುತ್ತಾರೆಯೇ? ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ನಿತೀಶ್ ಕುಮಾರ್ ಅವರು ದುಡುಕಿನ ರಾಜಕಾರಣಿಯೇನೂ ಅಲ್ಲ. ಹೀಗಾಗಿ ಅವರ ಮುಂದಿರುವ ಆಯ್ಕೆಗಳನ್ನು ಅವರು ಅವಲಂಬಿಸಬಹುದು. ವಿಶೇಷವಾಗಿ ಬಿಜೆಪಿ, ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ನಿತೀಶ್‌ ಅವರನ್ನು ಹೇಗೆ ನೋಡುತ್ತವೆ ಎಂಬುದು ನಿತೀಶ್ ಅವರ ಮುಂದಿನ ನಡೆಯನ್ನು ನಿರ್ಧರಿಸಬಹುದು.

ನಿತೀಶ್ ಅವರ ಮುಂದಿರುವ ಮೂರು ಆಯ್ಕೆಗಳ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವಿಸ್ತೃತವಾಗಿ ವಿಶ್ಲೇಷಣೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯ್ಕೆ 1: ಎನ್‌ಡಿಎ ತೊರೆದು ಮಹಾಘಟಬಂಧನ್‌ಗೆ ಹಿಂತಿರುಗಿ ಸಿಎಂ ಆಗಬಹುದು

ಇದರರ್ಥ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಜೊತೆಗಿನ 2015-2017ರ ವ್ಯವಸ್ಥೆಗೆ ಹಿಂತಿರುಗುವುದಾಗಿದೆ. ಎಡಪಕ್ಷಗಳಾದ ಸಿಪಿಐ-ಎಂಎಲ್, ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಕೂಡ ಈ ಮೈತ್ರಿಕೂಟದ ಭಾಗವಾಗಿವೆ.

ಆದಾಗ್ಯೂ, 2015-17 ಅವಧಿಗಿಂತ ಈಗ ಸಾಕಷ್ಟು ಬದಲಾವಣೆಗಳು ಆಗಿರುವುದರಿಂದ ನಿತೀಶ್ ಕುಮಾರ್ ಅವರು ಮಹಾಘಟಬಂಧನ್‌ಗೆ ಹಿಂತಿರುಗುವುದು ಅಷ್ಟು ಸುಲಭವಲ್ಲ. ನಿತೀಶ್ ಅವರೇ ಈ ಸಮಸ್ಯೆಯನ್ನು ಸೃಷ್ಟಿಸಿಕೊಂಡಿದ್ದಾರೆ.

2017ರಲ್ಲಿ ಅವರು ಎನ್‌ಡಿಎಗೆ ನಿಷ್ಠೆ ತೋರಿದ ರೀತಿಯನ್ನು ಗಮನಿಸಿದರೆ, ಮಹಾಘಟಬಂಧನ್ ಘಟಕಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ಹೆಚ್ಚಿನ ನಂಬಿಕೆಯೂ ಇಲ್ಲ.

ಇದನ್ನೂ ಓದಿರಿ: ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಜೆಡಿಯು 2017ರಲ್ಲಿದ್ದ ಸ್ಥಿತಿಗಿಂತ ಈಗ ಹೆಚ್ಚು ದುರ್ಬಲವಾಗಿ ಕಾಣುತ್ತಿದೆ. ಆಗ 71 ಸ್ಥಾನಗಳನ್ನು ಹೊಂದಿತ್ತು, ಈಗ ಕೇವಲ 45 ಸ್ಥಾನಗಳನ್ನು ಹೊಂದಿದೆ. ಮತ್ತೊಂದೆಡೆ, ಆರ್‌ಜೆಡಿ ಬಲಶಾಲಿಯಾಗಿದೆ. ಈಗ 80 ಸ್ಥಾನಗಳನ್ನು ಹೊಂದಿದೆ.

ನಿತೀಶ್ ಕುಮಾರ್ ವಿರುದ್ಧದ ಆಡಳಿತ ವಿರೋಧಿ ನಿಲುವು ಈಗ ಹೆಚ್ಚಾಗಿ ಕಾಣುತ್ತಿದೆ. ಈ ಹಿಂದೆ ಇಷ್ಟು ಪ್ರಮಾಣದ ವಿರೋಧ ಇರಲಿಲ್ಲ. ಆದ್ದರಿಂದ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಆರ್‌ಜೆಡಿ ಬೆಂಬಲಿಸಿದರೆ ಆರ್‌ಜೆಡಿಗೆ ತೊಂದರೆಯಾಗಬಹುದು. ಏಕೆಂದರೆ ಆಡಳಿತ ವಿರೋಧಿ ಹೊರೆಯನ್ನು ಆರ್‌ಜೆಡಿಯೂ ಹೊರಬೇಕಾದೀತು.

ಆಯ್ಕೆ 2: ಕೆಲವು ರಿಯಾಯಿತಿಗಳಿಗಾಗಿ ಬಿಜೆಪಿಯೊಂದಿಗೆ ಉಳಿಯುವುದು

ಬಿಜೆಪಿಯು ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸಲು ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ರಾಜ್ಯದ ಉಳಿದ ಭಾಗಗಳಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿರುವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜೆಡಿಯು ಪಕ್ಷವನ್ನು ಸೋಲಿಸಲು ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ರೀತಿ ಕಾಣುತ್ತಿದೆ. ಇದು ಬಿಜೆಪಿಯ ಯೋಜನೆಯಂತೆ ಸ್ಪಷ್ಟವಾಗಿ ಕಾಣುತ್ತಿದೆ.

ಜೆಡಿಯು ಪಕ್ಷವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿಯು ‘ಏಕನಾಥ್ ಶಿಂಧೆ’ ರೀತಿಯ ಮುಖವನ್ನು ಹುಡುಕುತ್ತಿದೆ ಎಂದು ಜೆಡಿಯು ಒಳಗಿನವರು ಆರೋಪಿಸುತ್ತಾರೆ. ಆದರೆ ಜೆಡಿಯುವಿನಲ್ಲಿದ್ದು ಬಿಜೆಪಿಯ ಪರವಿದ್ದ ಆರ್‌ಸಿಪಿ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಸಮಯೋಚಿತ ಕ್ರಮ ಜರುಗಿಸಿ, ತಂತ್ರಗಾರಿಕೆಯನ್ನು ವಿಫಲಗೊಳಿಸಿದರು.

“ಶಿವಸೇನೆ ನಮಗೆ ಪಾಠ ಕಲಿಸುವ ಅಗತ್ಯವಿಲ್ಲ. ಜೆಡಿಯು ಅನ್ನು ನಾಶಪಡಿಸುವುದು ಅವರ ಅಂತಿಮ ಯೋಜನೆ ಎಂದು ನಮಗೆ ಯಾವಾಗಲೂ ತಿಳಿದಿತ್ತು. ಆದರೆ ಅವರು ನಿತೀಶ್ ಕುಮಾರ್ ಅವರನ್ನು ಸರಿಯಾಗಿ ಗ್ರಹಿಸಿಲ್ಲ. ನಿತೀಶ್‌ ಕುಮಾರ್‌ ಉದ್ಧವ್ ಠಾಕ್ರೆಯಂತಲ್ಲ” ಎಂದು ಜೆಡಿಯು ಹಿರಿಯ ನಾಯಕರೊಬ್ಬರು ಎಂದು ‘ದಿ ಕ್ವಿಂಟ್‌’ಗೆ ತಿಳಿಸಿದ್ದಾರೆ.

ಆದರೆ, 2024ರ ಲೋಕಸಭೆ ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸುವುದು ಬಿಜೆಪಿಗೆ ತೊಂದರೆಯೂ ಆಗಬಹುದು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಜಯ ದೊರೆತ್ತಿತ್ತು. ಮೈತ್ರಿಕೂಟವು 40 ರಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು.

ಆರ್‌ಜೆಡಿಯ ಮುಸ್ಲಿಂ-ಯಾದವ್ ಓಟ್‌ಬ್ಯಾಂಕ್‌, ಜೆಡಿಯುಗೆ ಮಹಾದಲಿತ್‌, ಎಂಬಿಸಿಗಳು, ಕುರ್ಮಿಗಳ ಬೆಂಬಲ, ಕಾಂಗ್ರೆಸ್‌, ಸಿಪಿಐ-ಎಂಎಲ್‌ ಪ್ರಭಾವ ಮಹಾಘಟಬಂಧನ್‌ ಮೈತ್ರಿಯನ್ನು ಗಟ್ಟಿಗೊಳಿಸುತ್ತದೆ. ಇದು ಎನ್‌ಡಿಎಗೆ ನಷ್ಟ ಉಂಟು ಮಾಡಬಹುದು. ಹೀಗಾಗಿ ಈ ಮೈತ್ರಿಯಾಗದಂತೆ ಬಯಸುವ ಬಿಜೆಪಿಯ ಮೇಲೆ 2024ರವರೆಗೆ ನಿತೀಶ್ ಹಿಡಿತ ಸಾಧಿಸಲೂಬಹುದು. 2024ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಬಿಹಾರದಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಬಯಸಬಹುದು. 2025ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್, ಆಡಳಿತ ವಿರೋಧಿ ಆಡಳಿತಕ್ಕೆ ಸಿಲುಕಿಕೊಳ್ಳಬಾರದು. ಈಗಲೇ ಬಿಜೆಪಿಯೊಂದಿಗೆ ಸಮಾಧಾನ ಮಾಡಿಕೊಂಡರೆ ನಿತೀಶ್ ಕುಮಾರ್ ಅವರು ಇನ್ನೂ ಎರಡು ವರ್ಷ ಸಿಎಂ ಆಗಬಹುದು.

ಆಯ್ಕೆ 3: ಬಿಹಾರವನ್ನು ತೇಜಸ್ವಿ ಯಾದವ್‌ಗೆ ನೀಡಿ, ರಾಷ್ಟ್ರೀಯ ರಾಜಕೀಯಕ್ಕೆ ತೆರಳುವುದು

ಈ ಚಿಂತನೆಗೆ ಸ್ವಲ್ಪ ಧೈರ್ಯವೂ ಬೇಕಾಗುತ್ತದೆ. ಆದರೆ ಈ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ನಿತೀಶ್ ಕುಮಾರ್ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ತ್ಯಜಿಸಿ, ಬಿಹಾರದ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಅವರನ್ನು ಬೆಂಬಲಿಸಿ, ಎನ್‌ಡಿಎಯೇತರ ಪಕ್ಷಗಳ ಪ್ರಮುಖ ನಾಯಕರಾಗಿ ರಾಷ್ಟ್ರೀಯ ರಾಜಕೀಯಕ್ಕೆ ನಿತೀಶ್ ಕಾಲಿಡಬಹುದು.

ಒಂದು ರೀತಿಯಲ್ಲಿ ಇದು ನಿತೀಶ್ ಕುಮಾರ್‌ ಅವರಿಗೆ ಆಸಕ್ತಿದಾಯಕ ಆಯ್ಕೆಯಾಗಿದೆ. ಬಿಜೆಪಿ, ಆರ್‌ಜೆಡಿ ಪ್ರಾಬಲ್ಯಕ್ಕೆ ಹೋಲಿಸಿದರೆ ನಿತಿಶ್‌ಕುಮಾರ್‌ ಅವರ ಹಿಡಿತ ದುರ್ಬಲಗೊಂಡಿದೆ. ಮತ್ತೊಂದೆಡೆ ಬಿಜೆಪಿ ಮತ್ತು ಆರ್‌ಜೆಡಿ ಬಲಗೊಂಡಿವೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

2025ರ ವಿಧಾನಸಭಾ ಚುನಾವಣೆಯ ವೇಳೆಗೆ, ನಿತೀಶ್ ಕುಮಾರ್ ಅವರು 75ನೇ ವರ್ಷಕ್ಕೆ ಕಾಲಿಡುತ್ತಾರೆ. ಐದನೇ ಅವಧಿಗೆ ಅಧಿಕಾರಕ್ಕಾಗಿ ಹೋರಾಡುವುದು ಅವರಿಗೆ ಹೆಚ್ಚು ಆಕರ್ಷಕವಾದ ನಿರೀಕ್ಷೆಯಲ್ಲ. ಹಾಗಾಗಿ ರಾಷ್ಟ್ರ ರಾಜಕಾರಣ ಅವರಿಗೆ ಗೌರವವನ್ನು ತಂದುಕೊಡಬಹುದು.

ಪ್ರಸ್ತುತ, ನಿತೀಶ್ ಕುಮಾರ್ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಗೌರವಾನ್ವಿತ ಉತ್ತೇಜನ ನೀಡಬಲ್ಲ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್. 2017ರ ಸಮಯದಲ್ಲಿ ಕೆಲವು ಮಾತುಗಳು ಕೇಳಿಬಂದಿದ್ದವು. ನಿತೀಶ್ ಕುಮಾರ್ ಅವರು ಜೆಡಿ(ಯು) ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ, ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್‌ಗೆ ನೀಡಿ ಅಂತಿಮವಾಗಿ ಕಾಂಗ್ರೆಸ್ ನಾಯಕರಾಗಿ ಹೊಮ್ಮಿ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎಂಬ ಮಾತುಗಳು ಹರಿದಾಡಿದ್ದವು. ಅಂತಿಮ ಹಂತದಲ್ಲಿ ಮಾತುಕತೆಗಳು ಮುರಿದುಬಿದ್ದಿದ್ದವು. ಆದರೆ ಈ ಹಾದಿ ಮತ್ತೆ ತೆರೆದುಕೊಂಡರೆ ಆಶ್ಚರ್ಯಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ವಿಂಟ್ ನ್ನ ರಾಘವ ಬೆಹ್ಲ್ ಅದಾನಿ ಗುಂಪಿಗೆ ಮೂರು ತಿಂಗಳ ಹಿಂದೆ ಮಾರಿದ್ದಾರೆ ಆದ್ದರಿಂದ ಅದು ತನ್ನ ದನಿಯನ್ನ ಬದಲಿಸಿ ಮೋದಿ ರಾಗ ಹಾಡುತ್ತಿದೆ ಅಂತ ಕೆಲವರು ಹೇಳುತ್ತಿದ್ದಾರೆ.ನನಗೂ ಅನುಮಾನ ಶುರುವಾಗಿದೆ.
    ನಿಜ ಏನು ಎಂಬುದನ್ನ ತಿಳಿಸಬಲ್ಲಿರಾ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...