Homeಮುಖಪುಟನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

- Advertisement -
- Advertisement -

ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿಯಲ್ಲಿ ಬಿರುಕುಬಿಟ್ಟಿದ್ದು ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಅವರು ಮತ್ತೊಮ್ಮೆ ಮಗ್ಗಲು ಬದಲಿಸುತ್ತಾರೆಯೇ? ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ನಿತೀಶ್ ಕುಮಾರ್ ಅವರು ದುಡುಕಿನ ರಾಜಕಾರಣಿಯೇನೂ ಅಲ್ಲ. ಹೀಗಾಗಿ ಅವರ ಮುಂದಿರುವ ಆಯ್ಕೆಗಳನ್ನು ಅವರು ಅವಲಂಬಿಸಬಹುದು. ವಿಶೇಷವಾಗಿ ಬಿಜೆಪಿ, ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ನಿತೀಶ್‌ ಅವರನ್ನು ಹೇಗೆ ನೋಡುತ್ತವೆ ಎಂಬುದು ನಿತೀಶ್ ಅವರ ಮುಂದಿನ ನಡೆಯನ್ನು ನಿರ್ಧರಿಸಬಹುದು.

ನಿತೀಶ್ ಅವರ ಮುಂದಿರುವ ಮೂರು ಆಯ್ಕೆಗಳ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವಿಸ್ತೃತವಾಗಿ ವಿಶ್ಲೇಷಣೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯ್ಕೆ 1: ಎನ್‌ಡಿಎ ತೊರೆದು ಮಹಾಘಟಬಂಧನ್‌ಗೆ ಹಿಂತಿರುಗಿ ಸಿಎಂ ಆಗಬಹುದು

ಇದರರ್ಥ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಜೊತೆಗಿನ 2015-2017ರ ವ್ಯವಸ್ಥೆಗೆ ಹಿಂತಿರುಗುವುದಾಗಿದೆ. ಎಡಪಕ್ಷಗಳಾದ ಸಿಪಿಐ-ಎಂಎಲ್, ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಕೂಡ ಈ ಮೈತ್ರಿಕೂಟದ ಭಾಗವಾಗಿವೆ.

ಆದಾಗ್ಯೂ, 2015-17 ಅವಧಿಗಿಂತ ಈಗ ಸಾಕಷ್ಟು ಬದಲಾವಣೆಗಳು ಆಗಿರುವುದರಿಂದ ನಿತೀಶ್ ಕುಮಾರ್ ಅವರು ಮಹಾಘಟಬಂಧನ್‌ಗೆ ಹಿಂತಿರುಗುವುದು ಅಷ್ಟು ಸುಲಭವಲ್ಲ. ನಿತೀಶ್ ಅವರೇ ಈ ಸಮಸ್ಯೆಯನ್ನು ಸೃಷ್ಟಿಸಿಕೊಂಡಿದ್ದಾರೆ.

2017ರಲ್ಲಿ ಅವರು ಎನ್‌ಡಿಎಗೆ ನಿಷ್ಠೆ ತೋರಿದ ರೀತಿಯನ್ನು ಗಮನಿಸಿದರೆ, ಮಹಾಘಟಬಂಧನ್ ಘಟಕಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ಹೆಚ್ಚಿನ ನಂಬಿಕೆಯೂ ಇಲ್ಲ.

ಇದನ್ನೂ ಓದಿರಿ: ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಜೆಡಿಯು 2017ರಲ್ಲಿದ್ದ ಸ್ಥಿತಿಗಿಂತ ಈಗ ಹೆಚ್ಚು ದುರ್ಬಲವಾಗಿ ಕಾಣುತ್ತಿದೆ. ಆಗ 71 ಸ್ಥಾನಗಳನ್ನು ಹೊಂದಿತ್ತು, ಈಗ ಕೇವಲ 45 ಸ್ಥಾನಗಳನ್ನು ಹೊಂದಿದೆ. ಮತ್ತೊಂದೆಡೆ, ಆರ್‌ಜೆಡಿ ಬಲಶಾಲಿಯಾಗಿದೆ. ಈಗ 80 ಸ್ಥಾನಗಳನ್ನು ಹೊಂದಿದೆ.

ನಿತೀಶ್ ಕುಮಾರ್ ವಿರುದ್ಧದ ಆಡಳಿತ ವಿರೋಧಿ ನಿಲುವು ಈಗ ಹೆಚ್ಚಾಗಿ ಕಾಣುತ್ತಿದೆ. ಈ ಹಿಂದೆ ಇಷ್ಟು ಪ್ರಮಾಣದ ವಿರೋಧ ಇರಲಿಲ್ಲ. ಆದ್ದರಿಂದ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಆರ್‌ಜೆಡಿ ಬೆಂಬಲಿಸಿದರೆ ಆರ್‌ಜೆಡಿಗೆ ತೊಂದರೆಯಾಗಬಹುದು. ಏಕೆಂದರೆ ಆಡಳಿತ ವಿರೋಧಿ ಹೊರೆಯನ್ನು ಆರ್‌ಜೆಡಿಯೂ ಹೊರಬೇಕಾದೀತು.

ಆಯ್ಕೆ 2: ಕೆಲವು ರಿಯಾಯಿತಿಗಳಿಗಾಗಿ ಬಿಜೆಪಿಯೊಂದಿಗೆ ಉಳಿಯುವುದು

ಬಿಜೆಪಿಯು ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸಲು ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ರಾಜ್ಯದ ಉಳಿದ ಭಾಗಗಳಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿರುವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜೆಡಿಯು ಪಕ್ಷವನ್ನು ಸೋಲಿಸಲು ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ರೀತಿ ಕಾಣುತ್ತಿದೆ. ಇದು ಬಿಜೆಪಿಯ ಯೋಜನೆಯಂತೆ ಸ್ಪಷ್ಟವಾಗಿ ಕಾಣುತ್ತಿದೆ.

ಜೆಡಿಯು ಪಕ್ಷವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿಯು ‘ಏಕನಾಥ್ ಶಿಂಧೆ’ ರೀತಿಯ ಮುಖವನ್ನು ಹುಡುಕುತ್ತಿದೆ ಎಂದು ಜೆಡಿಯು ಒಳಗಿನವರು ಆರೋಪಿಸುತ್ತಾರೆ. ಆದರೆ ಜೆಡಿಯುವಿನಲ್ಲಿದ್ದು ಬಿಜೆಪಿಯ ಪರವಿದ್ದ ಆರ್‌ಸಿಪಿ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಸಮಯೋಚಿತ ಕ್ರಮ ಜರುಗಿಸಿ, ತಂತ್ರಗಾರಿಕೆಯನ್ನು ವಿಫಲಗೊಳಿಸಿದರು.

“ಶಿವಸೇನೆ ನಮಗೆ ಪಾಠ ಕಲಿಸುವ ಅಗತ್ಯವಿಲ್ಲ. ಜೆಡಿಯು ಅನ್ನು ನಾಶಪಡಿಸುವುದು ಅವರ ಅಂತಿಮ ಯೋಜನೆ ಎಂದು ನಮಗೆ ಯಾವಾಗಲೂ ತಿಳಿದಿತ್ತು. ಆದರೆ ಅವರು ನಿತೀಶ್ ಕುಮಾರ್ ಅವರನ್ನು ಸರಿಯಾಗಿ ಗ್ರಹಿಸಿಲ್ಲ. ನಿತೀಶ್‌ ಕುಮಾರ್‌ ಉದ್ಧವ್ ಠಾಕ್ರೆಯಂತಲ್ಲ” ಎಂದು ಜೆಡಿಯು ಹಿರಿಯ ನಾಯಕರೊಬ್ಬರು ಎಂದು ‘ದಿ ಕ್ವಿಂಟ್‌’ಗೆ ತಿಳಿಸಿದ್ದಾರೆ.

ಆದರೆ, 2024ರ ಲೋಕಸಭೆ ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸುವುದು ಬಿಜೆಪಿಗೆ ತೊಂದರೆಯೂ ಆಗಬಹುದು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಜಯ ದೊರೆತ್ತಿತ್ತು. ಮೈತ್ರಿಕೂಟವು 40 ರಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು.

ಆರ್‌ಜೆಡಿಯ ಮುಸ್ಲಿಂ-ಯಾದವ್ ಓಟ್‌ಬ್ಯಾಂಕ್‌, ಜೆಡಿಯುಗೆ ಮಹಾದಲಿತ್‌, ಎಂಬಿಸಿಗಳು, ಕುರ್ಮಿಗಳ ಬೆಂಬಲ, ಕಾಂಗ್ರೆಸ್‌, ಸಿಪಿಐ-ಎಂಎಲ್‌ ಪ್ರಭಾವ ಮಹಾಘಟಬಂಧನ್‌ ಮೈತ್ರಿಯನ್ನು ಗಟ್ಟಿಗೊಳಿಸುತ್ತದೆ. ಇದು ಎನ್‌ಡಿಎಗೆ ನಷ್ಟ ಉಂಟು ಮಾಡಬಹುದು. ಹೀಗಾಗಿ ಈ ಮೈತ್ರಿಯಾಗದಂತೆ ಬಯಸುವ ಬಿಜೆಪಿಯ ಮೇಲೆ 2024ರವರೆಗೆ ನಿತೀಶ್ ಹಿಡಿತ ಸಾಧಿಸಲೂಬಹುದು. 2024ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಬಿಹಾರದಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಬಯಸಬಹುದು. 2025ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್, ಆಡಳಿತ ವಿರೋಧಿ ಆಡಳಿತಕ್ಕೆ ಸಿಲುಕಿಕೊಳ್ಳಬಾರದು. ಈಗಲೇ ಬಿಜೆಪಿಯೊಂದಿಗೆ ಸಮಾಧಾನ ಮಾಡಿಕೊಂಡರೆ ನಿತೀಶ್ ಕುಮಾರ್ ಅವರು ಇನ್ನೂ ಎರಡು ವರ್ಷ ಸಿಎಂ ಆಗಬಹುದು.

ಆಯ್ಕೆ 3: ಬಿಹಾರವನ್ನು ತೇಜಸ್ವಿ ಯಾದವ್‌ಗೆ ನೀಡಿ, ರಾಷ್ಟ್ರೀಯ ರಾಜಕೀಯಕ್ಕೆ ತೆರಳುವುದು

ಈ ಚಿಂತನೆಗೆ ಸ್ವಲ್ಪ ಧೈರ್ಯವೂ ಬೇಕಾಗುತ್ತದೆ. ಆದರೆ ಈ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ನಿತೀಶ್ ಕುಮಾರ್ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ತ್ಯಜಿಸಿ, ಬಿಹಾರದ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಅವರನ್ನು ಬೆಂಬಲಿಸಿ, ಎನ್‌ಡಿಎಯೇತರ ಪಕ್ಷಗಳ ಪ್ರಮುಖ ನಾಯಕರಾಗಿ ರಾಷ್ಟ್ರೀಯ ರಾಜಕೀಯಕ್ಕೆ ನಿತೀಶ್ ಕಾಲಿಡಬಹುದು.

ಒಂದು ರೀತಿಯಲ್ಲಿ ಇದು ನಿತೀಶ್ ಕುಮಾರ್‌ ಅವರಿಗೆ ಆಸಕ್ತಿದಾಯಕ ಆಯ್ಕೆಯಾಗಿದೆ. ಬಿಜೆಪಿ, ಆರ್‌ಜೆಡಿ ಪ್ರಾಬಲ್ಯಕ್ಕೆ ಹೋಲಿಸಿದರೆ ನಿತಿಶ್‌ಕುಮಾರ್‌ ಅವರ ಹಿಡಿತ ದುರ್ಬಲಗೊಂಡಿದೆ. ಮತ್ತೊಂದೆಡೆ ಬಿಜೆಪಿ ಮತ್ತು ಆರ್‌ಜೆಡಿ ಬಲಗೊಂಡಿವೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

2025ರ ವಿಧಾನಸಭಾ ಚುನಾವಣೆಯ ವೇಳೆಗೆ, ನಿತೀಶ್ ಕುಮಾರ್ ಅವರು 75ನೇ ವರ್ಷಕ್ಕೆ ಕಾಲಿಡುತ್ತಾರೆ. ಐದನೇ ಅವಧಿಗೆ ಅಧಿಕಾರಕ್ಕಾಗಿ ಹೋರಾಡುವುದು ಅವರಿಗೆ ಹೆಚ್ಚು ಆಕರ್ಷಕವಾದ ನಿರೀಕ್ಷೆಯಲ್ಲ. ಹಾಗಾಗಿ ರಾಷ್ಟ್ರ ರಾಜಕಾರಣ ಅವರಿಗೆ ಗೌರವವನ್ನು ತಂದುಕೊಡಬಹುದು.

ಪ್ರಸ್ತುತ, ನಿತೀಶ್ ಕುಮಾರ್ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಗೌರವಾನ್ವಿತ ಉತ್ತೇಜನ ನೀಡಬಲ್ಲ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್. 2017ರ ಸಮಯದಲ್ಲಿ ಕೆಲವು ಮಾತುಗಳು ಕೇಳಿಬಂದಿದ್ದವು. ನಿತೀಶ್ ಕುಮಾರ್ ಅವರು ಜೆಡಿ(ಯು) ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ, ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್‌ಗೆ ನೀಡಿ ಅಂತಿಮವಾಗಿ ಕಾಂಗ್ರೆಸ್ ನಾಯಕರಾಗಿ ಹೊಮ್ಮಿ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎಂಬ ಮಾತುಗಳು ಹರಿದಾಡಿದ್ದವು. ಅಂತಿಮ ಹಂತದಲ್ಲಿ ಮಾತುಕತೆಗಳು ಮುರಿದುಬಿದ್ದಿದ್ದವು. ಆದರೆ ಈ ಹಾದಿ ಮತ್ತೆ ತೆರೆದುಕೊಂಡರೆ ಆಶ್ಚರ್ಯಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ವಿಂಟ್ ನ್ನ ರಾಘವ ಬೆಹ್ಲ್ ಅದಾನಿ ಗುಂಪಿಗೆ ಮೂರು ತಿಂಗಳ ಹಿಂದೆ ಮಾರಿದ್ದಾರೆ ಆದ್ದರಿಂದ ಅದು ತನ್ನ ದನಿಯನ್ನ ಬದಲಿಸಿ ಮೋದಿ ರಾಗ ಹಾಡುತ್ತಿದೆ ಅಂತ ಕೆಲವರು ಹೇಳುತ್ತಿದ್ದಾರೆ.ನನಗೂ ಅನುಮಾನ ಶುರುವಾಗಿದೆ.
    ನಿಜ ಏನು ಎಂಬುದನ್ನ ತಿಳಿಸಬಲ್ಲಿರಾ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...