Homeಮುಖಪುಟನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

- Advertisement -
- Advertisement -

ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿಯಲ್ಲಿ ಬಿರುಕುಬಿಟ್ಟಿದ್ದು ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಅವರು ಮತ್ತೊಮ್ಮೆ ಮಗ್ಗಲು ಬದಲಿಸುತ್ತಾರೆಯೇ? ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ನಿತೀಶ್ ಕುಮಾರ್ ಅವರು ದುಡುಕಿನ ರಾಜಕಾರಣಿಯೇನೂ ಅಲ್ಲ. ಹೀಗಾಗಿ ಅವರ ಮುಂದಿರುವ ಆಯ್ಕೆಗಳನ್ನು ಅವರು ಅವಲಂಬಿಸಬಹುದು. ವಿಶೇಷವಾಗಿ ಬಿಜೆಪಿ, ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ನಿತೀಶ್‌ ಅವರನ್ನು ಹೇಗೆ ನೋಡುತ್ತವೆ ಎಂಬುದು ನಿತೀಶ್ ಅವರ ಮುಂದಿನ ನಡೆಯನ್ನು ನಿರ್ಧರಿಸಬಹುದು.

ನಿತೀಶ್ ಅವರ ಮುಂದಿರುವ ಮೂರು ಆಯ್ಕೆಗಳ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವಿಸ್ತೃತವಾಗಿ ವಿಶ್ಲೇಷಣೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯ್ಕೆ 1: ಎನ್‌ಡಿಎ ತೊರೆದು ಮಹಾಘಟಬಂಧನ್‌ಗೆ ಹಿಂತಿರುಗಿ ಸಿಎಂ ಆಗಬಹುದು

ಇದರರ್ಥ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಜೊತೆಗಿನ 2015-2017ರ ವ್ಯವಸ್ಥೆಗೆ ಹಿಂತಿರುಗುವುದಾಗಿದೆ. ಎಡಪಕ್ಷಗಳಾದ ಸಿಪಿಐ-ಎಂಎಲ್, ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಕೂಡ ಈ ಮೈತ್ರಿಕೂಟದ ಭಾಗವಾಗಿವೆ.

ಆದಾಗ್ಯೂ, 2015-17 ಅವಧಿಗಿಂತ ಈಗ ಸಾಕಷ್ಟು ಬದಲಾವಣೆಗಳು ಆಗಿರುವುದರಿಂದ ನಿತೀಶ್ ಕುಮಾರ್ ಅವರು ಮಹಾಘಟಬಂಧನ್‌ಗೆ ಹಿಂತಿರುಗುವುದು ಅಷ್ಟು ಸುಲಭವಲ್ಲ. ನಿತೀಶ್ ಅವರೇ ಈ ಸಮಸ್ಯೆಯನ್ನು ಸೃಷ್ಟಿಸಿಕೊಂಡಿದ್ದಾರೆ.

2017ರಲ್ಲಿ ಅವರು ಎನ್‌ಡಿಎಗೆ ನಿಷ್ಠೆ ತೋರಿದ ರೀತಿಯನ್ನು ಗಮನಿಸಿದರೆ, ಮಹಾಘಟಬಂಧನ್ ಘಟಕಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ಹೆಚ್ಚಿನ ನಂಬಿಕೆಯೂ ಇಲ್ಲ.

ಇದನ್ನೂ ಓದಿರಿ: ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಜೆಡಿಯು 2017ರಲ್ಲಿದ್ದ ಸ್ಥಿತಿಗಿಂತ ಈಗ ಹೆಚ್ಚು ದುರ್ಬಲವಾಗಿ ಕಾಣುತ್ತಿದೆ. ಆಗ 71 ಸ್ಥಾನಗಳನ್ನು ಹೊಂದಿತ್ತು, ಈಗ ಕೇವಲ 45 ಸ್ಥಾನಗಳನ್ನು ಹೊಂದಿದೆ. ಮತ್ತೊಂದೆಡೆ, ಆರ್‌ಜೆಡಿ ಬಲಶಾಲಿಯಾಗಿದೆ. ಈಗ 80 ಸ್ಥಾನಗಳನ್ನು ಹೊಂದಿದೆ.

ನಿತೀಶ್ ಕುಮಾರ್ ವಿರುದ್ಧದ ಆಡಳಿತ ವಿರೋಧಿ ನಿಲುವು ಈಗ ಹೆಚ್ಚಾಗಿ ಕಾಣುತ್ತಿದೆ. ಈ ಹಿಂದೆ ಇಷ್ಟು ಪ್ರಮಾಣದ ವಿರೋಧ ಇರಲಿಲ್ಲ. ಆದ್ದರಿಂದ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಆರ್‌ಜೆಡಿ ಬೆಂಬಲಿಸಿದರೆ ಆರ್‌ಜೆಡಿಗೆ ತೊಂದರೆಯಾಗಬಹುದು. ಏಕೆಂದರೆ ಆಡಳಿತ ವಿರೋಧಿ ಹೊರೆಯನ್ನು ಆರ್‌ಜೆಡಿಯೂ ಹೊರಬೇಕಾದೀತು.

ಆಯ್ಕೆ 2: ಕೆಲವು ರಿಯಾಯಿತಿಗಳಿಗಾಗಿ ಬಿಜೆಪಿಯೊಂದಿಗೆ ಉಳಿಯುವುದು

ಬಿಜೆಪಿಯು ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸಲು ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ರಾಜ್ಯದ ಉಳಿದ ಭಾಗಗಳಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿರುವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜೆಡಿಯು ಪಕ್ಷವನ್ನು ಸೋಲಿಸಲು ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ರೀತಿ ಕಾಣುತ್ತಿದೆ. ಇದು ಬಿಜೆಪಿಯ ಯೋಜನೆಯಂತೆ ಸ್ಪಷ್ಟವಾಗಿ ಕಾಣುತ್ತಿದೆ.

ಜೆಡಿಯು ಪಕ್ಷವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿಯು ‘ಏಕನಾಥ್ ಶಿಂಧೆ’ ರೀತಿಯ ಮುಖವನ್ನು ಹುಡುಕುತ್ತಿದೆ ಎಂದು ಜೆಡಿಯು ಒಳಗಿನವರು ಆರೋಪಿಸುತ್ತಾರೆ. ಆದರೆ ಜೆಡಿಯುವಿನಲ್ಲಿದ್ದು ಬಿಜೆಪಿಯ ಪರವಿದ್ದ ಆರ್‌ಸಿಪಿ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಸಮಯೋಚಿತ ಕ್ರಮ ಜರುಗಿಸಿ, ತಂತ್ರಗಾರಿಕೆಯನ್ನು ವಿಫಲಗೊಳಿಸಿದರು.

“ಶಿವಸೇನೆ ನಮಗೆ ಪಾಠ ಕಲಿಸುವ ಅಗತ್ಯವಿಲ್ಲ. ಜೆಡಿಯು ಅನ್ನು ನಾಶಪಡಿಸುವುದು ಅವರ ಅಂತಿಮ ಯೋಜನೆ ಎಂದು ನಮಗೆ ಯಾವಾಗಲೂ ತಿಳಿದಿತ್ತು. ಆದರೆ ಅವರು ನಿತೀಶ್ ಕುಮಾರ್ ಅವರನ್ನು ಸರಿಯಾಗಿ ಗ್ರಹಿಸಿಲ್ಲ. ನಿತೀಶ್‌ ಕುಮಾರ್‌ ಉದ್ಧವ್ ಠಾಕ್ರೆಯಂತಲ್ಲ” ಎಂದು ಜೆಡಿಯು ಹಿರಿಯ ನಾಯಕರೊಬ್ಬರು ಎಂದು ‘ದಿ ಕ್ವಿಂಟ್‌’ಗೆ ತಿಳಿಸಿದ್ದಾರೆ.

ಆದರೆ, 2024ರ ಲೋಕಸಭೆ ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸುವುದು ಬಿಜೆಪಿಗೆ ತೊಂದರೆಯೂ ಆಗಬಹುದು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಜಯ ದೊರೆತ್ತಿತ್ತು. ಮೈತ್ರಿಕೂಟವು 40 ರಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು.

ಆರ್‌ಜೆಡಿಯ ಮುಸ್ಲಿಂ-ಯಾದವ್ ಓಟ್‌ಬ್ಯಾಂಕ್‌, ಜೆಡಿಯುಗೆ ಮಹಾದಲಿತ್‌, ಎಂಬಿಸಿಗಳು, ಕುರ್ಮಿಗಳ ಬೆಂಬಲ, ಕಾಂಗ್ರೆಸ್‌, ಸಿಪಿಐ-ಎಂಎಲ್‌ ಪ್ರಭಾವ ಮಹಾಘಟಬಂಧನ್‌ ಮೈತ್ರಿಯನ್ನು ಗಟ್ಟಿಗೊಳಿಸುತ್ತದೆ. ಇದು ಎನ್‌ಡಿಎಗೆ ನಷ್ಟ ಉಂಟು ಮಾಡಬಹುದು. ಹೀಗಾಗಿ ಈ ಮೈತ್ರಿಯಾಗದಂತೆ ಬಯಸುವ ಬಿಜೆಪಿಯ ಮೇಲೆ 2024ರವರೆಗೆ ನಿತೀಶ್ ಹಿಡಿತ ಸಾಧಿಸಲೂಬಹುದು. 2024ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಬಿಹಾರದಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಬಯಸಬಹುದು. 2025ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್, ಆಡಳಿತ ವಿರೋಧಿ ಆಡಳಿತಕ್ಕೆ ಸಿಲುಕಿಕೊಳ್ಳಬಾರದು. ಈಗಲೇ ಬಿಜೆಪಿಯೊಂದಿಗೆ ಸಮಾಧಾನ ಮಾಡಿಕೊಂಡರೆ ನಿತೀಶ್ ಕುಮಾರ್ ಅವರು ಇನ್ನೂ ಎರಡು ವರ್ಷ ಸಿಎಂ ಆಗಬಹುದು.

ಆಯ್ಕೆ 3: ಬಿಹಾರವನ್ನು ತೇಜಸ್ವಿ ಯಾದವ್‌ಗೆ ನೀಡಿ, ರಾಷ್ಟ್ರೀಯ ರಾಜಕೀಯಕ್ಕೆ ತೆರಳುವುದು

ಈ ಚಿಂತನೆಗೆ ಸ್ವಲ್ಪ ಧೈರ್ಯವೂ ಬೇಕಾಗುತ್ತದೆ. ಆದರೆ ಈ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ನಿತೀಶ್ ಕುಮಾರ್ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ತ್ಯಜಿಸಿ, ಬಿಹಾರದ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಅವರನ್ನು ಬೆಂಬಲಿಸಿ, ಎನ್‌ಡಿಎಯೇತರ ಪಕ್ಷಗಳ ಪ್ರಮುಖ ನಾಯಕರಾಗಿ ರಾಷ್ಟ್ರೀಯ ರಾಜಕೀಯಕ್ಕೆ ನಿತೀಶ್ ಕಾಲಿಡಬಹುದು.

ಒಂದು ರೀತಿಯಲ್ಲಿ ಇದು ನಿತೀಶ್ ಕುಮಾರ್‌ ಅವರಿಗೆ ಆಸಕ್ತಿದಾಯಕ ಆಯ್ಕೆಯಾಗಿದೆ. ಬಿಜೆಪಿ, ಆರ್‌ಜೆಡಿ ಪ್ರಾಬಲ್ಯಕ್ಕೆ ಹೋಲಿಸಿದರೆ ನಿತಿಶ್‌ಕುಮಾರ್‌ ಅವರ ಹಿಡಿತ ದುರ್ಬಲಗೊಂಡಿದೆ. ಮತ್ತೊಂದೆಡೆ ಬಿಜೆಪಿ ಮತ್ತು ಆರ್‌ಜೆಡಿ ಬಲಗೊಂಡಿವೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

2025ರ ವಿಧಾನಸಭಾ ಚುನಾವಣೆಯ ವೇಳೆಗೆ, ನಿತೀಶ್ ಕುಮಾರ್ ಅವರು 75ನೇ ವರ್ಷಕ್ಕೆ ಕಾಲಿಡುತ್ತಾರೆ. ಐದನೇ ಅವಧಿಗೆ ಅಧಿಕಾರಕ್ಕಾಗಿ ಹೋರಾಡುವುದು ಅವರಿಗೆ ಹೆಚ್ಚು ಆಕರ್ಷಕವಾದ ನಿರೀಕ್ಷೆಯಲ್ಲ. ಹಾಗಾಗಿ ರಾಷ್ಟ್ರ ರಾಜಕಾರಣ ಅವರಿಗೆ ಗೌರವವನ್ನು ತಂದುಕೊಡಬಹುದು.

ಪ್ರಸ್ತುತ, ನಿತೀಶ್ ಕುಮಾರ್ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಗೌರವಾನ್ವಿತ ಉತ್ತೇಜನ ನೀಡಬಲ್ಲ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್. 2017ರ ಸಮಯದಲ್ಲಿ ಕೆಲವು ಮಾತುಗಳು ಕೇಳಿಬಂದಿದ್ದವು. ನಿತೀಶ್ ಕುಮಾರ್ ಅವರು ಜೆಡಿ(ಯು) ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ, ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್‌ಗೆ ನೀಡಿ ಅಂತಿಮವಾಗಿ ಕಾಂಗ್ರೆಸ್ ನಾಯಕರಾಗಿ ಹೊಮ್ಮಿ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎಂಬ ಮಾತುಗಳು ಹರಿದಾಡಿದ್ದವು. ಅಂತಿಮ ಹಂತದಲ್ಲಿ ಮಾತುಕತೆಗಳು ಮುರಿದುಬಿದ್ದಿದ್ದವು. ಆದರೆ ಈ ಹಾದಿ ಮತ್ತೆ ತೆರೆದುಕೊಂಡರೆ ಆಶ್ಚರ್ಯಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ವಿಂಟ್ ನ್ನ ರಾಘವ ಬೆಹ್ಲ್ ಅದಾನಿ ಗುಂಪಿಗೆ ಮೂರು ತಿಂಗಳ ಹಿಂದೆ ಮಾರಿದ್ದಾರೆ ಆದ್ದರಿಂದ ಅದು ತನ್ನ ದನಿಯನ್ನ ಬದಲಿಸಿ ಮೋದಿ ರಾಗ ಹಾಡುತ್ತಿದೆ ಅಂತ ಕೆಲವರು ಹೇಳುತ್ತಿದ್ದಾರೆ.ನನಗೂ ಅನುಮಾನ ಶುರುವಾಗಿದೆ.
    ನಿಜ ಏನು ಎಂಬುದನ್ನ ತಿಳಿಸಬಲ್ಲಿರಾ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....