Homeಮುಖಪುಟವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ''ಕೈಲಾಸ'' ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

ವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ”ಕೈಲಾಸ” ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

- Advertisement -
- Advertisement -

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿ (CESCR) ಸಭೆಯಲ್ಲಿ “ಕೈಲಾಸ” ದೇಶದ “ಶಾಶ್ವತ ರಾಯಭಾರಿ”ಯಾಗಿ ವಿಜಯಪ್ರಿಯಾ ನಿತ್ಯಾನಂದ ಎಂಬ ಮಹಿಳೆ ಪ್ರತಿನಿಧಿಸಿದ್ದಾರೆ.

ಭಾರತದಲ್ಲಿ ಕೆಲದಿನಗಳ ಹಿಂದೆ ಸ್ವಯಂ-ಘೋಷಿತ ದೇವಮಾನವ ನಿತ್ಯಾನಂದ ಅತ್ಯಾಚಾರ ಪ್ರಕರಣದಲ್ಲಿ ಕುಖ್ಯಾತಿ ಗಳಿಸಿದ್ದನು. ಆತ ದೇಶಬಿಟ್ಟು ಹೋದ ಬಳಿಕ “ಕೈಲಾಸ” ಎನ್ನುವ ದೇಶವನ್ನು ಸ್ಥಾಪನೆ ಮಾಡಿಕೊಂಡಿದ್ದನು. ಇತ್ತಿಚೆಗೆ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಆ ದೇಶದ ಪ್ರತಿನಿಧಿಯೊಬ್ಬರು ಭಾಗವಹಿಸಿದ್ದರು. ಅವರು ”ನಿತ್ಯಾನಂದ, ಭಾರತದಿಂದ ಹಿಂಸೆಗೆ ಒಳಗಾಗಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಆ ಮಹಿಳೆ ತನ್ನ ಸರದಿ ಬಂದಾಗ, ”ಕೈಲಾಸ- ಹಿಂದೂಗಳಿಗೆ ಮೊದಲ ಸಾರ್ವಭೌಮ ದೇಶವಾಗಿದೆ. ಇದನ್ನು ನಿತ್ಯಾನಂದ ಪರಮಶಿವಂ ಅವರು ಸ್ಥಾಪಿಸಿದ್ದಾರೆ. ನಿತ್ಯಾನಂದ ಪರಮಶಿವಂ ಅವರು ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರು ಆಗಿದ್ದಾರೆ. ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿ ಶೈವ ಸ್ಥಳೀಯ ಕೃಷಿ ಬುಡಕಟ್ಟು ಜನಾಂಗವನ್ನು ಒಳಗೊಂಡಂತೆ 10,000 ಹಿಂದೂ ಸಂಪ್ರದಾಯಗಳನ್ನು ಈ ದೇಶ ಒಳಗೊಂಡಿದೆ” ಎಂದು ಕೈಲಾಸ ದೇಶದ ಪರಿಚಯವನ್ನು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಈ ಕೈಲಾಸ ದೇಶವು ಈಕ್ವೆಡಾರ್‌ನ ಕರಾವಳಿಯಲ್ಲಿದೆ ಎಂದು ವರದಿಯಾಗಿದೆ. ಕೈಲಾಸ ತನ್ನದೇ ಆದ ಪಾಸ್‌ಪೋರ್ಟ್, ಧ್ವಜ ಮತ್ತು “ರಿಸರ್ವ್ ಬ್ಯಾಂಕ್ ಆಫ್ ಕೈಲಾಸ” ಎಂಬ ಬ್ಯಾಂಕ್ ಕೂಡ ಹೊಂದಿದೆ ಎಂದು ಹೇಳಲಾಗುತ್ತದೆ. ನಿತ್ಯಾನಂದ ಡಿಸೆಂಬರ್ 2020 ರಲ್ಲಿ ತಮ್ಮ ದೇಶಕ್ಕೆ ವಿಮಾನಗಳನ್ನು ಸಹ ಘೋಷಿಸಿದರು.

”ಕೈಲಾಸ” ಭೂಮಿಯ ಮೇಲಿನ ಶ್ರೇಷ್ಠ ಹಿಂದೂ ರಾಷ್ಟ್ರ. ”ತಮ್ಮದೇ ದೇಶಗಳಲ್ಲಿ ಹಿಂದೂ ಧರ್ಮವನ್ನು ಅಧಿಕೃತವಾಗಿ ಆಚರಿಸುವ ಹಕ್ಕನ್ನು ಕಳೆದುಕೊಂಡ ಹಿಂದೂಗಳಿಂದ ಸೃಷ್ಟಿಸಲ್ಪಟ್ಟ ಗಡಿಗಳಿಲ್ಲದ ರಾಷ್ಟ್ರ” ಎಂದು ಕೈಲಾಸ್‌ದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ.

ಈ ಕೈಲಾಸ ದೇಶದ ಸ್ಥಾಪಕ ನಿತ್ಯಾನಂದ, ಅತ್ಯಾಚಾರ, ಚಿತ್ರಹಿಂಸೆ, ಅಪಹರಣ, ಮತ್ತು ಮಕ್ಕಳ ಅಕ್ರಮ ಬಂಧನ (IPC) ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೇ 400,000 ಡಾಲರ್ ವಂಚನೆ ಪ್ರಕರಣದಲ್ಲಿ ಆತನನ್ನು ಫ್ರೆಂಚ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. 2019ರಲ್ಲಿ ನಿತ್ಯಾನಂದ ಭಾರತದಿಂದ ಪಲಾಯನಗೈದಿದ್ದರು.

2020 ರ ಜನವರಿಯಲ್ಲಿ ವಿವಾದಾತ್ಮಕ ಸ್ವಯಂ-ಘೋಷಿತ ದೇವಮಾನವನ ಬಗ್ಗೆ ಮಾಹಿತಿ ಕೋರಿ ಇಂಟರ್ಪೋಲ್, ಬ್ಲೂ ಕಾರ್ನರ್ ನೋಟಿಸ್ ನೀಡಿತು. (ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆ ಬ್ಲೂ ಕಾರ್ನರ್ ನೋಟೀಸ್ ಅನ್ನು ನೀಡುತ್ತದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...