Homeಮುಖಪುಟವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ''ಕೈಲಾಸ'' ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

ವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ”ಕೈಲಾಸ” ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

- Advertisement -
- Advertisement -

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿ (CESCR) ಸಭೆಯಲ್ಲಿ “ಕೈಲಾಸ” ದೇಶದ “ಶಾಶ್ವತ ರಾಯಭಾರಿ”ಯಾಗಿ ವಿಜಯಪ್ರಿಯಾ ನಿತ್ಯಾನಂದ ಎಂಬ ಮಹಿಳೆ ಪ್ರತಿನಿಧಿಸಿದ್ದಾರೆ.

ಭಾರತದಲ್ಲಿ ಕೆಲದಿನಗಳ ಹಿಂದೆ ಸ್ವಯಂ-ಘೋಷಿತ ದೇವಮಾನವ ನಿತ್ಯಾನಂದ ಅತ್ಯಾಚಾರ ಪ್ರಕರಣದಲ್ಲಿ ಕುಖ್ಯಾತಿ ಗಳಿಸಿದ್ದನು. ಆತ ದೇಶಬಿಟ್ಟು ಹೋದ ಬಳಿಕ “ಕೈಲಾಸ” ಎನ್ನುವ ದೇಶವನ್ನು ಸ್ಥಾಪನೆ ಮಾಡಿಕೊಂಡಿದ್ದನು. ಇತ್ತಿಚೆಗೆ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಆ ದೇಶದ ಪ್ರತಿನಿಧಿಯೊಬ್ಬರು ಭಾಗವಹಿಸಿದ್ದರು. ಅವರು ”ನಿತ್ಯಾನಂದ, ಭಾರತದಿಂದ ಹಿಂಸೆಗೆ ಒಳಗಾಗಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಆ ಮಹಿಳೆ ತನ್ನ ಸರದಿ ಬಂದಾಗ, ”ಕೈಲಾಸ- ಹಿಂದೂಗಳಿಗೆ ಮೊದಲ ಸಾರ್ವಭೌಮ ದೇಶವಾಗಿದೆ. ಇದನ್ನು ನಿತ್ಯಾನಂದ ಪರಮಶಿವಂ ಅವರು ಸ್ಥಾಪಿಸಿದ್ದಾರೆ. ನಿತ್ಯಾನಂದ ಪರಮಶಿವಂ ಅವರು ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರು ಆಗಿದ್ದಾರೆ. ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿ ಶೈವ ಸ್ಥಳೀಯ ಕೃಷಿ ಬುಡಕಟ್ಟು ಜನಾಂಗವನ್ನು ಒಳಗೊಂಡಂತೆ 10,000 ಹಿಂದೂ ಸಂಪ್ರದಾಯಗಳನ್ನು ಈ ದೇಶ ಒಳಗೊಂಡಿದೆ” ಎಂದು ಕೈಲಾಸ ದೇಶದ ಪರಿಚಯವನ್ನು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಈ ಕೈಲಾಸ ದೇಶವು ಈಕ್ವೆಡಾರ್‌ನ ಕರಾವಳಿಯಲ್ಲಿದೆ ಎಂದು ವರದಿಯಾಗಿದೆ. ಕೈಲಾಸ ತನ್ನದೇ ಆದ ಪಾಸ್‌ಪೋರ್ಟ್, ಧ್ವಜ ಮತ್ತು “ರಿಸರ್ವ್ ಬ್ಯಾಂಕ್ ಆಫ್ ಕೈಲಾಸ” ಎಂಬ ಬ್ಯಾಂಕ್ ಕೂಡ ಹೊಂದಿದೆ ಎಂದು ಹೇಳಲಾಗುತ್ತದೆ. ನಿತ್ಯಾನಂದ ಡಿಸೆಂಬರ್ 2020 ರಲ್ಲಿ ತಮ್ಮ ದೇಶಕ್ಕೆ ವಿಮಾನಗಳನ್ನು ಸಹ ಘೋಷಿಸಿದರು.

”ಕೈಲಾಸ” ಭೂಮಿಯ ಮೇಲಿನ ಶ್ರೇಷ್ಠ ಹಿಂದೂ ರಾಷ್ಟ್ರ. ”ತಮ್ಮದೇ ದೇಶಗಳಲ್ಲಿ ಹಿಂದೂ ಧರ್ಮವನ್ನು ಅಧಿಕೃತವಾಗಿ ಆಚರಿಸುವ ಹಕ್ಕನ್ನು ಕಳೆದುಕೊಂಡ ಹಿಂದೂಗಳಿಂದ ಸೃಷ್ಟಿಸಲ್ಪಟ್ಟ ಗಡಿಗಳಿಲ್ಲದ ರಾಷ್ಟ್ರ” ಎಂದು ಕೈಲಾಸ್‌ದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ.

ಈ ಕೈಲಾಸ ದೇಶದ ಸ್ಥಾಪಕ ನಿತ್ಯಾನಂದ, ಅತ್ಯಾಚಾರ, ಚಿತ್ರಹಿಂಸೆ, ಅಪಹರಣ, ಮತ್ತು ಮಕ್ಕಳ ಅಕ್ರಮ ಬಂಧನ (IPC) ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೇ 400,000 ಡಾಲರ್ ವಂಚನೆ ಪ್ರಕರಣದಲ್ಲಿ ಆತನನ್ನು ಫ್ರೆಂಚ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. 2019ರಲ್ಲಿ ನಿತ್ಯಾನಂದ ಭಾರತದಿಂದ ಪಲಾಯನಗೈದಿದ್ದರು.

2020 ರ ಜನವರಿಯಲ್ಲಿ ವಿವಾದಾತ್ಮಕ ಸ್ವಯಂ-ಘೋಷಿತ ದೇವಮಾನವನ ಬಗ್ಗೆ ಮಾಹಿತಿ ಕೋರಿ ಇಂಟರ್ಪೋಲ್, ಬ್ಲೂ ಕಾರ್ನರ್ ನೋಟಿಸ್ ನೀಡಿತು. (ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆ ಬ್ಲೂ ಕಾರ್ನರ್ ನೋಟೀಸ್ ಅನ್ನು ನೀಡುತ್ತದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...