Homeಮುಖಪುಟವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ''ಕೈಲಾಸ'' ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

ವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ”ಕೈಲಾಸ” ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

- Advertisement -
- Advertisement -

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿ (CESCR) ಸಭೆಯಲ್ಲಿ “ಕೈಲಾಸ” ದೇಶದ “ಶಾಶ್ವತ ರಾಯಭಾರಿ”ಯಾಗಿ ವಿಜಯಪ್ರಿಯಾ ನಿತ್ಯಾನಂದ ಎಂಬ ಮಹಿಳೆ ಪ್ರತಿನಿಧಿಸಿದ್ದಾರೆ.

ಭಾರತದಲ್ಲಿ ಕೆಲದಿನಗಳ ಹಿಂದೆ ಸ್ವಯಂ-ಘೋಷಿತ ದೇವಮಾನವ ನಿತ್ಯಾನಂದ ಅತ್ಯಾಚಾರ ಪ್ರಕರಣದಲ್ಲಿ ಕುಖ್ಯಾತಿ ಗಳಿಸಿದ್ದನು. ಆತ ದೇಶಬಿಟ್ಟು ಹೋದ ಬಳಿಕ “ಕೈಲಾಸ” ಎನ್ನುವ ದೇಶವನ್ನು ಸ್ಥಾಪನೆ ಮಾಡಿಕೊಂಡಿದ್ದನು. ಇತ್ತಿಚೆಗೆ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಆ ದೇಶದ ಪ್ರತಿನಿಧಿಯೊಬ್ಬರು ಭಾಗವಹಿಸಿದ್ದರು. ಅವರು ”ನಿತ್ಯಾನಂದ, ಭಾರತದಿಂದ ಹಿಂಸೆಗೆ ಒಳಗಾಗಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಆ ಮಹಿಳೆ ತನ್ನ ಸರದಿ ಬಂದಾಗ, ”ಕೈಲಾಸ- ಹಿಂದೂಗಳಿಗೆ ಮೊದಲ ಸಾರ್ವಭೌಮ ದೇಶವಾಗಿದೆ. ಇದನ್ನು ನಿತ್ಯಾನಂದ ಪರಮಶಿವಂ ಅವರು ಸ್ಥಾಪಿಸಿದ್ದಾರೆ. ನಿತ್ಯಾನಂದ ಪರಮಶಿವಂ ಅವರು ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರು ಆಗಿದ್ದಾರೆ. ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿ ಶೈವ ಸ್ಥಳೀಯ ಕೃಷಿ ಬುಡಕಟ್ಟು ಜನಾಂಗವನ್ನು ಒಳಗೊಂಡಂತೆ 10,000 ಹಿಂದೂ ಸಂಪ್ರದಾಯಗಳನ್ನು ಈ ದೇಶ ಒಳಗೊಂಡಿದೆ” ಎಂದು ಕೈಲಾಸ ದೇಶದ ಪರಿಚಯವನ್ನು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಈ ಕೈಲಾಸ ದೇಶವು ಈಕ್ವೆಡಾರ್‌ನ ಕರಾವಳಿಯಲ್ಲಿದೆ ಎಂದು ವರದಿಯಾಗಿದೆ. ಕೈಲಾಸ ತನ್ನದೇ ಆದ ಪಾಸ್‌ಪೋರ್ಟ್, ಧ್ವಜ ಮತ್ತು “ರಿಸರ್ವ್ ಬ್ಯಾಂಕ್ ಆಫ್ ಕೈಲಾಸ” ಎಂಬ ಬ್ಯಾಂಕ್ ಕೂಡ ಹೊಂದಿದೆ ಎಂದು ಹೇಳಲಾಗುತ್ತದೆ. ನಿತ್ಯಾನಂದ ಡಿಸೆಂಬರ್ 2020 ರಲ್ಲಿ ತಮ್ಮ ದೇಶಕ್ಕೆ ವಿಮಾನಗಳನ್ನು ಸಹ ಘೋಷಿಸಿದರು.

”ಕೈಲಾಸ” ಭೂಮಿಯ ಮೇಲಿನ ಶ್ರೇಷ್ಠ ಹಿಂದೂ ರಾಷ್ಟ್ರ. ”ತಮ್ಮದೇ ದೇಶಗಳಲ್ಲಿ ಹಿಂದೂ ಧರ್ಮವನ್ನು ಅಧಿಕೃತವಾಗಿ ಆಚರಿಸುವ ಹಕ್ಕನ್ನು ಕಳೆದುಕೊಂಡ ಹಿಂದೂಗಳಿಂದ ಸೃಷ್ಟಿಸಲ್ಪಟ್ಟ ಗಡಿಗಳಿಲ್ಲದ ರಾಷ್ಟ್ರ” ಎಂದು ಕೈಲಾಸ್‌ದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ.

ಈ ಕೈಲಾಸ ದೇಶದ ಸ್ಥಾಪಕ ನಿತ್ಯಾನಂದ, ಅತ್ಯಾಚಾರ, ಚಿತ್ರಹಿಂಸೆ, ಅಪಹರಣ, ಮತ್ತು ಮಕ್ಕಳ ಅಕ್ರಮ ಬಂಧನ (IPC) ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೇ 400,000 ಡಾಲರ್ ವಂಚನೆ ಪ್ರಕರಣದಲ್ಲಿ ಆತನನ್ನು ಫ್ರೆಂಚ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. 2019ರಲ್ಲಿ ನಿತ್ಯಾನಂದ ಭಾರತದಿಂದ ಪಲಾಯನಗೈದಿದ್ದರು.

2020 ರ ಜನವರಿಯಲ್ಲಿ ವಿವಾದಾತ್ಮಕ ಸ್ವಯಂ-ಘೋಷಿತ ದೇವಮಾನವನ ಬಗ್ಗೆ ಮಾಹಿತಿ ಕೋರಿ ಇಂಟರ್ಪೋಲ್, ಬ್ಲೂ ಕಾರ್ನರ್ ನೋಟಿಸ್ ನೀಡಿತು. (ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆ ಬ್ಲೂ ಕಾರ್ನರ್ ನೋಟೀಸ್ ಅನ್ನು ನೀಡುತ್ತದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...