Homeಮುಖಪುಟವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ''ಕೈಲಾಸ'' ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

ವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ”ಕೈಲಾಸ” ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

- Advertisement -
- Advertisement -

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿ (CESCR) ಸಭೆಯಲ್ಲಿ “ಕೈಲಾಸ” ದೇಶದ “ಶಾಶ್ವತ ರಾಯಭಾರಿ”ಯಾಗಿ ವಿಜಯಪ್ರಿಯಾ ನಿತ್ಯಾನಂದ ಎಂಬ ಮಹಿಳೆ ಪ್ರತಿನಿಧಿಸಿದ್ದಾರೆ.

ಭಾರತದಲ್ಲಿ ಕೆಲದಿನಗಳ ಹಿಂದೆ ಸ್ವಯಂ-ಘೋಷಿತ ದೇವಮಾನವ ನಿತ್ಯಾನಂದ ಅತ್ಯಾಚಾರ ಪ್ರಕರಣದಲ್ಲಿ ಕುಖ್ಯಾತಿ ಗಳಿಸಿದ್ದನು. ಆತ ದೇಶಬಿಟ್ಟು ಹೋದ ಬಳಿಕ “ಕೈಲಾಸ” ಎನ್ನುವ ದೇಶವನ್ನು ಸ್ಥಾಪನೆ ಮಾಡಿಕೊಂಡಿದ್ದನು. ಇತ್ತಿಚೆಗೆ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಆ ದೇಶದ ಪ್ರತಿನಿಧಿಯೊಬ್ಬರು ಭಾಗವಹಿಸಿದ್ದರು. ಅವರು ”ನಿತ್ಯಾನಂದ, ಭಾರತದಿಂದ ಹಿಂಸೆಗೆ ಒಳಗಾಗಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಆ ಮಹಿಳೆ ತನ್ನ ಸರದಿ ಬಂದಾಗ, ”ಕೈಲಾಸ- ಹಿಂದೂಗಳಿಗೆ ಮೊದಲ ಸಾರ್ವಭೌಮ ದೇಶವಾಗಿದೆ. ಇದನ್ನು ನಿತ್ಯಾನಂದ ಪರಮಶಿವಂ ಅವರು ಸ್ಥಾಪಿಸಿದ್ದಾರೆ. ನಿತ್ಯಾನಂದ ಪರಮಶಿವಂ ಅವರು ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರು ಆಗಿದ್ದಾರೆ. ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿ ಶೈವ ಸ್ಥಳೀಯ ಕೃಷಿ ಬುಡಕಟ್ಟು ಜನಾಂಗವನ್ನು ಒಳಗೊಂಡಂತೆ 10,000 ಹಿಂದೂ ಸಂಪ್ರದಾಯಗಳನ್ನು ಈ ದೇಶ ಒಳಗೊಂಡಿದೆ” ಎಂದು ಕೈಲಾಸ ದೇಶದ ಪರಿಚಯವನ್ನು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಈ ಕೈಲಾಸ ದೇಶವು ಈಕ್ವೆಡಾರ್‌ನ ಕರಾವಳಿಯಲ್ಲಿದೆ ಎಂದು ವರದಿಯಾಗಿದೆ. ಕೈಲಾಸ ತನ್ನದೇ ಆದ ಪಾಸ್‌ಪೋರ್ಟ್, ಧ್ವಜ ಮತ್ತು “ರಿಸರ್ವ್ ಬ್ಯಾಂಕ್ ಆಫ್ ಕೈಲಾಸ” ಎಂಬ ಬ್ಯಾಂಕ್ ಕೂಡ ಹೊಂದಿದೆ ಎಂದು ಹೇಳಲಾಗುತ್ತದೆ. ನಿತ್ಯಾನಂದ ಡಿಸೆಂಬರ್ 2020 ರಲ್ಲಿ ತಮ್ಮ ದೇಶಕ್ಕೆ ವಿಮಾನಗಳನ್ನು ಸಹ ಘೋಷಿಸಿದರು.

”ಕೈಲಾಸ” ಭೂಮಿಯ ಮೇಲಿನ ಶ್ರೇಷ್ಠ ಹಿಂದೂ ರಾಷ್ಟ್ರ. ”ತಮ್ಮದೇ ದೇಶಗಳಲ್ಲಿ ಹಿಂದೂ ಧರ್ಮವನ್ನು ಅಧಿಕೃತವಾಗಿ ಆಚರಿಸುವ ಹಕ್ಕನ್ನು ಕಳೆದುಕೊಂಡ ಹಿಂದೂಗಳಿಂದ ಸೃಷ್ಟಿಸಲ್ಪಟ್ಟ ಗಡಿಗಳಿಲ್ಲದ ರಾಷ್ಟ್ರ” ಎಂದು ಕೈಲಾಸ್‌ದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ.

ಈ ಕೈಲಾಸ ದೇಶದ ಸ್ಥಾಪಕ ನಿತ್ಯಾನಂದ, ಅತ್ಯಾಚಾರ, ಚಿತ್ರಹಿಂಸೆ, ಅಪಹರಣ, ಮತ್ತು ಮಕ್ಕಳ ಅಕ್ರಮ ಬಂಧನ (IPC) ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೇ 400,000 ಡಾಲರ್ ವಂಚನೆ ಪ್ರಕರಣದಲ್ಲಿ ಆತನನ್ನು ಫ್ರೆಂಚ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. 2019ರಲ್ಲಿ ನಿತ್ಯಾನಂದ ಭಾರತದಿಂದ ಪಲಾಯನಗೈದಿದ್ದರು.

2020 ರ ಜನವರಿಯಲ್ಲಿ ವಿವಾದಾತ್ಮಕ ಸ್ವಯಂ-ಘೋಷಿತ ದೇವಮಾನವನ ಬಗ್ಗೆ ಮಾಹಿತಿ ಕೋರಿ ಇಂಟರ್ಪೋಲ್, ಬ್ಲೂ ಕಾರ್ನರ್ ನೋಟಿಸ್ ನೀಡಿತು. (ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆ ಬ್ಲೂ ಕಾರ್ನರ್ ನೋಟೀಸ್ ಅನ್ನು ನೀಡುತ್ತದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...