Homeಮುಖಪುಟತಮಿಳುನಾಡು: ನಿವಾರ್‌ ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

ತಮಿಳುನಾಡು: ನಿವಾರ್‌ ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಣೆ

- Advertisement -
- Advertisement -

ನಿವಾರ್ ಚಂಡಮಾರುತ ತಮಿಳುನಾಡಿನಲ್ಲಿ ತೀವ್ರ ಹಾನಿಯುಂಟುಮಾಡಿದ್ದು, ನಿವಾರ್ ಪೀಡಿತ ತಮಿಳುನಾಡಿಗೆ ಕೇಂದ್ರವು ಬೆಂಬಲ ನೀಡುವುದಾಗಿ ತಿಳಿಸಿದ್ದು, ಮೃತರ ಕುಟುಂಬದವರಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

’ನಿವಾರ್ ಚಂಡಮಾರುತಕ್ಕೆ ರಾಜ್ಯದ 18 ಜಿಲ್ಲೆಗಳಲ್ಲಿ, 2 ಸಾವಿರಕ್ಕೂ ಹೆಚ್ಚು ಮರಗಳು ಉರುಳಿವೆ. ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಜೊತೆಗೆ ನೂರಾರು ಜಾನುವಾರುಗಳನ್ನು ಚಂಡಮಾರುತ ಬಲಿ ಪಡೆದಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ತಮಿಳುನಾಡು ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಸಹಾಯಕ್ಕಾಗಿ ಕೇಂದ್ರದ ತಂಡಗಳನ್ನು ನಿಯೋಜಿಸಲಾಗುವುದು ಎಂದು ಪ್ರಧಾನಿ ಮಾಹಿತಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

“ಚಂಡಮಾರುತದಿಂದ ಮೃತಪಟ್ಟವರ ಬಗ್ಗೆ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಬೇಗ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದರು. ‘ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು(PMNRF)’ ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.

 

ಮುಖ್ಯಮಂತ್ರಿ ಪಳನಿಸ್ವಾಮಿ ಮೃತ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನಾಲ್ಕು ಲಕ್ಷ ರೂಪಾಯಿ ಮತ್ತು ಮುಖ್ಯಮಂತ್ರಿಯ ಸಾರ್ವಜನಿಕ ಪರಿಹಾರ ನಿಧಿಯಿಂದ ಆರು ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದಿದ್ದಾರೆ.

ಅಲ್ಲದೆ, ಚಂಡಮಾರುತದಲ್ಲಿ 61 ಹಸುಗಳು, 5 ಎತ್ತುಗಳು, 65 ಕರುಗಳು ಮತ್ತು 114 ಆಡುಗಳನ್ನು ಕಳೆದುಕೊಂಡಿರುವ ಜಾನುವಾರು ಮಾಲೀಕರಿಗೆ 3,000 ರಿಂದ 30,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ನಿವಾರ್‌ ಚಂಡಮಾರುತ: ಬೆಂಗಳೂರಿನ ವಿವಿಧೆಡೆ ಎರಡು ದಿನ ವಿದ್ಯುತ್‌ ಕಡಿತ

ಚೆನ್ನೈ, ಕಡಲೂರು, ಚೆಂಗಲ್ಪಟ್ಟು, ವೆಲ್ಲೂರು ಮತ್ತು ನಾಗಪಟ್ಟಣಂ ಸೇರಿದಂತೆ ಹಲವು ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ 2,064 ಮರಗಳು ಧರೆಗುರುಳಿದ್ದು, ಇದರಿಂದ ಇದು ಸುಮಾರು 108 ವಿದ್ಯುತ್ ಪರಿವರ್ತಕಗಳಿಗೆ ಮತ್ತು 2,927 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ಪಳನಿಸ್ವಾಮಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು 302 ಗುಡಿಸಲುಗಳು ಮತ್ತು 38 ಹೆಂಚುಗಳ ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. 1,439 ಗುಡಿಸಲುಗಳು ಮತ್ತು 161 ಹೆಂಚುಗಳ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಚಂಡಮಾರುತದಿಂದಾಗಿ ಮನೆಗಳನ್ನು ಕಳೆದುಕೊಂಡವರಿಗೆ ಸೂಕ್ತ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರದ ತ್ವರಿತ ಕ್ರಮಗಳು ಒಂದು ದೊಡ್ಡ ದುರಂತವನ್ನು ತಪ್ಪಿಸಿವೆ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟುವ ಕ್ರಮಗಳು ನಡೆದಿದ್ದು, ಇದುವರೆಗೆ ಸುಮಾರು 85,331 ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಅರ್ಚಕನಿಂದ ಬಾಲಕಿ ಮೇಲೆ ಅತ್ಯಾಚಾರ, ಟ್ವಿಟರ್‌ನಲ್ಲಿ ಭಾರಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...