Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...